Sign In

By signing in or creating an account, you agree with Associated Broadcasting Company's Terms & Conditions and Privacy Policy.

BMRCL Ticket Hike: ಬಸ್​ ಟಿಕೆಟ್ ಬೆನ್ನಲ್ಲೇ ಮತ್ತೊಂದು ದರ ಏರಿಕೆ ಶಾಕ್: ನಮ್ಮ ಮೆಟ್ರೋ ಪ್ರಯಾಣ ದುಬಾರಿ

ಬಿಎಂಆರ್​​ಸಿಎಲ್​​ನ ಬೋರ್ಡ್ ಮೀಟಿಂಗ್​​ನಲ್ಲಿ ನಮ್ಮ ಮೆಟ್ರೋ ಟಿಕೆಟ್ ದರ ಹೆಚ್ಚಳಕ್ಕೆ ಅನುಮೋದನೆ ನೀಡಲಾಗಿದೆ. 105% ರಷ್ಟು ಏರಿಕೆಗೆ ಮನವಿ ಮಾಡಲಾಗಿದ್ದರೂ, 40-45% ರಷ್ಟು ಏರಿಕೆಯಾಗುವ ಸಾಧ್ಯತೆ ಇದೆ. ಕನಿಷ್ಠ ದರ 10 ರೂಪಾಯಿ ಯಥಾವತ್ತಾಗಿ ಉಳಿಯಲಿದೆ, ಆದರೆ ಗರಿಷ್ಠ ದರ 60 ರಿಂದ 90 ರೂ. ಏರಿಕೆಯಾಗುವ ಸಾಧ್ಯತೆ ಇದೆ. ನಾಳೆ ಬಿಎಂಆರ್​​ಸಿಎಲ್ ಅಧಿಕೃತ ಘೋಷಣೆ ಮಾಡಲಿದೆ.

BMRCL Ticket Hike: ಬಸ್​ ಟಿಕೆಟ್ ಬೆನ್ನಲ್ಲೇ ಮತ್ತೊಂದು ದರ ಏರಿಕೆ ಶಾಕ್: ನಮ್ಮ ಮೆಟ್ರೋ ಪ್ರಯಾಣ ದುಬಾರಿ
ಬಸ್​ ಟಿಕೆಟ್ ಬೆನ್ನಲ್ಲೇ ಮತ್ತೊಂದು ದರ ಏರಿಕೆ ಶಾಕ್: ನಮ್ಮ ಮೆಟ್ರೋ ಪ್ರಯಾಣ ದುಬಾರಿ
Follow us
Kiran Surya
| Updated By: ಗಂಗಾಧರ​ ಬ. ಸಾಬೋಜಿ

Updated on:Jan 17, 2025 | 3:03 PM

ಬೆಂಗಳೂರು, ಜನವರಿ 17: ನಗರದಲ್ಲಿ ದಿನದಿಂದ ದಿನಕ್ಕೆ ಮೆಟ್ರೋ (Namma Metro) ಜಾಲ ವಿಸ್ತರಣೆ ಆಗುತ್ತಿದೆ. ಮೆಟ್ರೋದಲ್ಲಿ ಸಂಚಾರ ಮಾಡುವವರ ಸಂಖ್ಯೆ ಕೂಡ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹಾಗಾಗಿ ಟಿಕೆಟ್ ದರ ಹೆಚ್ಚಳ ಮಾಡಲು ಬಿಎಂಆರ್​ಸಿಎಂ ಮುಂದಾಗಿತ್ತು. ಇದೀಗ ಕೊನೆಗೂ ಬಿಎಂಆರ್​ಸಿಎಲ್​ ಬೋರ್ಡ್​ ದರ ಏರಿಕೆಗೆ ಅಸ್ತು ಎಂದಿದೆ. ನಾಳೆ ಅಧಿಕೃತ ಘೋಷಣೆ ಮಾಡಲಿದೆ. ಆ ಮೂಲಕ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಶಾಕ್​ ನೀಡಿದೆ.

ಇಂದು ಶಾಂತಿನಗರದ ಬಿಎಂಆರ್​ಸಿಎಲ್​ ಮುಖ್ಯ ಕಚೇರಿಯಲ್ಲಿ ದರ ಏರಿಕೆ ಸಂಬಂಧ ಸಭೆ ಮಾಡಲಾಯಿತು. ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಬಿಎಂಆರ್​​ಸಿಎಲ್​ ಹಿರಿಯ ಸಾರ್ವಜನಿಕ ಸಂಪರ್ಕಾಧಿಕಾರಿ ಯಶ್ವಂತ್ ಚೌವ್ಹಾಣ್, ಸಭೆಯಲ್ಲಿ ದರ ಏರಿಕೆಗೆ ಒಪ್ಪಿಗೆ ಸೂಚಿಸಲಾಗಿದೆ. ನಾಳೆ ಸುದ್ದಿಗೋಷ್ಠಿ ಮಾಡಲಿರುವ ಬಿಎಂಆರ್​ಸಿಎಲ್​​, ಅಧಿಕೃತ ಘೋಷಣೆ ಮಾಡಲಿದೆ ಎಂದು ತಿಳಿಸಿದರು.

ಇದನ್ನೂ ಓದಿ: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ನಾಗಸಂದ್ರ ಮಾದಾವರ ಮಾರ್ಗ ಕೊನೆಗೂ ಕಾರ್ಯಾಚರಣೆಗೆ ಸಿದ್ಧ

ಜೊತೆಗೆ ಯಾವತ್ತಿನಿಂದ ದರ ಜಾಸ್ತಿ ಮಾಡಬೇಕು ಎನ್ನುವ ಸಿದ್ದತೆಗೆ ಬಿಎಂಆರ್​ಸಿಎಲ್​ಗೆ ಬೋರ್ಡ್ ಸೂಚಿಸಿದ್ದು, ಅದರಂತೆ ಒಂದು ಹಂತದಿಂದ ಮತ್ತೊಂದು ಹಂತಕ್ಕೆ ಎಷ್ಟಾಗಬೇಕು, ಎಷ್ಟು ದರ ನಿಗದಿ ಎನ್ನುವ ಬಗ್ಗೆ ನಾಳೆ ನಿರ್ಧಾರ ಮಾಡಿ ಬಿಎಂಆರ್​ಸಿಎಲ್​ ಮಾಹಿತಿ ನೀಡಲಿದೆ.

105% ರಷ್ಟು ಟಿಕೆಟ್ ದರ ಹೆಚ್ಚಳಕ್ಕೆ ಬಿಎಂಆರ್​ಸಿಎಲ್​​ ಮನವಿ ಮಾಡಿತ್ತು. ಆದರೆ ಬಹುತೇಕ 40% ರಿಂದ 45% ಟಿಕೆಟ್ ದರ ಹೆಚ್ಚಳವಾಗುವ ಸಾಧ್ಯತೆ ಇದೆ. ಮೆಟ್ರೋದಲ್ಲಿ ಟಿಕೆಟ್ ದರ ಕನಿಷ್ಠ 10 ರೂ. ಇದೆ. ಅದರಲ್ಲಿ ಯಾವುದೇ ಹೆಚ್ಚಳವಾಗಲ್ಲ.

ಗರಿಷ್ಠ 60 ರೂ ಇರುವ ದರದಲ್ಲಿ 90 ರೂ. ವರೆಗೆ ಹೆಚ್ಚಳವಾಗಲಿದೆ. ಪ್ರತಿ ಎರಡು ಕಿ.ಮೀ ನಂತರ ಹತ್ತು ರೂಪಾಯಿಯಷ್ಟು ಹೆಚ್ಚಳ ಮಾಡಲು ಪ್ಲಾನ್​ ಮಾಡಿರುವುದಾಗಿ ಟಿವಿ9 ಗೆ ನಮ್ಮ ಮೆಟ್ರೋ ಉನ್ನತ ಮೂಲಗಳಿಂದ ಮಾಹಿತಿ ನೀಡಲಾಗಿದೆ.

ಇದನ್ನೂ ಓದಿ: ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಕೋಲ್ಕತ್ತಾದಿಂದ ಬೆಂಗಳೂರಿನತ್ತ ಚಾಲಕ ರಹಿತ ರೈಲು

ಕಳೆದ ಏಳು ವರ್ಷಗಳಿಂದ ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆ ಮಾಡಿರಲಿಲ್ಲ. ಹಾಗಾಗಿ ಟಿಕೆಟ್ ದರ ಹೆಚ್ಚಳ ಮಾಡಲು ನಮ್ಮ ಮೆಟ್ರೋ ಇತ್ತೀಚೆಗೆ ಕಮಿಟಿ ಕೂಡ ರಚನೆ ಮಾಡಿತ್ತು. ಆ ಮೂಲಕ ಅಕ್ಟೋಬರ್ 3 ರಿಂದ 28ರ ವರೆಗೆ ಪ್ರಯಾಣಿಕರ ಅಭಿಪ್ರಾಯ ತಿಳಿಸಲು ಅವಕಾಶ ನೀಡಲಾಗಿತ್ತು. ಪ್ರಯಾಣಿಕರ ಅಭಿಪ್ರಾಯವನ್ನು ಸಂಗ್ರಹಿಸಿದ್ದ ಕಮಿಟಿ, ಆ ವರದಿಯನ್ನು ಡಿಸೆಂಬರ್ ಕೊನೆ ವಾರದಲ್ಲಿ ಬಿಎಂಆರ್​ಸಿಎಲ್​​ಗೆ ಸಲ್ಲಿಸಲಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:01 pm, Fri, 17 January 25

ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ