ನಮ್ಮ ಮೆಟ್ರೋದಲ್ಲಿ ರೀಲ್ಸ್ ಮಾಡುದ್ರೆ ಬೀಳುತ್ತೆ ಫೈನ್; ಯೂಟ್ಯೂಬರ್​ಗೆ ದಂಡ ವಿಧಿಸಿದ ಅಧಿಕಾರಿಗಳು

ನಮ್ಮ ಮೆಟ್ರೋದಲ್ಲಿ ನ್ಯೂಸ್ಸೆನ್ಸ್ (59) 1 ಉಂಟುಮಾಡಿದ ಆರೋಪದಡಿ ಯೂಟ್ಯೂಬರ್ ಸಂತೋಷ್ ಕುಮಾರ್ ಎಂಬುವವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು 500 ರೂ. ದಂಡವಿಧಿಸಿ ಎಚ್ಚರಿಕೆ ನೀಡಲಾಗಿದೆ. ರೀಲ್ಸ್ ಮಾಡಿ ಇನ್ಸ್ಟಾಗ್ರಾಮ್​ನಲ್ಲಿ ಯಶ್ ಗೌಡ ಎಂಬ ಅಕೌಂಟ್ ಮೂಲಕ ರೀಲ್ಸ್ ಅಪ್ಲೋಡ್ ಮಾಡಲಾಗಿತ್ತು.

ನಮ್ಮ ಮೆಟ್ರೋದಲ್ಲಿ ರೀಲ್ಸ್ ಮಾಡುದ್ರೆ ಬೀಳುತ್ತೆ ಫೈನ್; ಯೂಟ್ಯೂಬರ್​ಗೆ ದಂಡ ವಿಧಿಸಿದ ಅಧಿಕಾರಿಗಳು
ಯೂಟ್ಯೂಬರ್ ಸಂತೋಷ್ ಕುಮಾರ್
Follow us
| Updated By: ಆಯೇಷಾ ಬಾನು

Updated on: Jan 10, 2024 | 12:18 PM

ಬೆಂಗಳೂರು, ಜ.10: ಭದ್ರತಾ ವಿಭಾಗದ ಅಧಿಕಾರಿಗಳು ನಮ್ಮ‌ ಮೆಟ್ರೋದಲ್ಲಿ (Namma Metro) ರೀಲ್ಸ್ ಮಾಡಿ ಹುಚ್ಚಾಟ ನಡೆಸಿದ್ದವನನ್ನ ಪತ್ತೆ ಹಚ್ಚಿ ದಂಡ (Fine) ವಸೂಲಿ ಮಾಡಿದ್ದಾರೆ. ನಮ್ಮ ಮೆಟ್ರೋದಲ್ಲಿ ನ್ಯೂಸ್ಸೆನ್ಸ್ (59) 1 ಉಂಟುಮಾಡಿದ ಆರೋಪದಡಿ ಯೂಟ್ಯೂಬರ್ ಸಂತೋಷ್ ಕುಮಾರ್ ಎಂಬುವವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು 500 ರೂ. ದಂಡವಿಧಿಸಿ ಎಚ್ಚರಿಕೆ ನೀಡಲಾಗಿದೆ.

ಬಂಡೆಪಾಳ್ಯದ ಗೆದ್ದನಹಳ್ಳಿಯ ನಿವಾಸಿಯಾಗಿರುವ ಯೂಟ್ಯೂಬರ್ ಸಂತೋಷ್ ಕುಮಾರ್ ಡಿಸೆಂಬರ್ 24 ರಂದು ಮೆಟ್ರೋ ಚಲಿಸುತ್ತಿದ್ದಾಗ ರೀಲ್ಸ್ ಮಾಡ್ತಾ ಸಹ ಪ್ರಯಾಣಿಕರಿಗೆ ತೊಂದರೆ ಕೊಟ್ಟಿದ್ದರು. ಮೆಟ್ರೋ ರೈಲಿನಲ್ಲಿ ಹುಚ್ಚಾಟ ಮೆರೆದಿದ್ದರು. ರೀಲ್ಸ್ ಮಾಡಿ ಇನ್ಸ್ಟಾಗ್ರಾಮ್​ನಲ್ಲಿ ಯಶ್ ಗೌಡ ಎಂಬ ಅಕೌಂಟ್ ಮೂಲಕ ರೀಲ್ಸ್ ಅಪ್ಲೋಡ್ ಮಾಡಲಾಗಿತ್ತು. ವಿಡಿಯೋವನ್ನ ಆಧರಿಸಿ ಸಂತೋಷ್ ಕುಮಾರ್ ಗೆ ದಂಡ ವಿಧಿಸಲಾಗಿದೆ. ಉಪ್ಪಾರಪೇಟೆ ಪೊಲೀಸ್ ಠಾಣೆಗೆ ಕರೆಸಿ, ವಿಚಾರಣೆ ನಡೆಸಿ ನಮ್ಮ ಮೆಟ್ರೋ ಅಧಿಕಾರಿಗಳು ದಂಡ ವಿಧಿಸಿದ್ದಾರೆ.

ಇದನ್ನೂ ಓದಿ: Namma Metro: ಡಿಸೆಂಬರ್ ತಿಂಗಳಲ್ಲಿ ನಮ್ಮ ಮೆಟ್ರೋಗೆ ದಾಖಲೆ ಪ್ರಮಾಣದಲ್ಲಿ ಆದಾಯ, ಪ್ರಯಾಣಿಕರ ಸಂಖ್ಯೆಯೂ ಹೆಚ್ಚಳ

ಡಿಸೆಂಬರ್ ತಿಂಗಳಲ್ಲಿ ನಮ್ಮ ಮೆಟ್ರೋಗೆ ದಾಖಲೆ ಪ್ರಮಾಣದಲ್ಲಿ ಆದಾಯ

ನಮ್ಮ ಮೆಟ್ರೋ (Namma Metro) ಇಡೀ ಡಿಸೆಂಬರ್ ತಿಂಗಳ ಆದಾಯದ ಬಗ್ಗೆ ಮಾಹಿತಿ ಹಂಚಿಕೊಂಡಿದೆ. ಡಿಸೆಂಬರ್​ನಲ್ಲಿ ನಮ್ಮ ಮೆಟ್ರೋಗೆ ದಾಖಲೆ ಪ್ರಮಾಣದಲ್ಲಿ ಆದಾಯ ಹರಿದುಬಂದಿದೆ. ಡಿಸೆಂಬರ್ ತಿಂಗಳಲ್ಲಿ ಬರೋಬ್ಬರಿ 2 ಕೋಟಿ ಜನರು ಮೆಟ್ರೋ ಬಳಕೆ ಮಾಡಿದ್ದು ₹55 ಕೋಟಿ ಆದಾಯ ಸಂಗ್ರಹವಾಗಿದೆ.

ಬೆಂಗಳೂರು ನಮ್ಮ ಮೆಟ್ರೋ ಪ್ರಯಾಣಿಕರ ಸಂಖ್ಯೆಯಲ್ಲಿ ಏರಿಕೆ ಕಂಡುಬರುತ್ತಿದೆ. ನಮ್ಮ ಮೆಟ್ರೋ ಮೊದಲ ಬಾರಿಗೆ ಒಂದೇ ತಿಂಗಳಲ್ಲಿ ಅತ್ಯಧಿಕ ಪ್ರಯಾಣಿಕರಿಗೆ ಸೇವೆ ನೀಡುವ ಮೂಲಕ ದಾಖಲೆ ಬರೆದಿದೆ. ಡಿಸೆಂಬರ್ ಒಂದೇ ತಿಂಗಳಲ್ಲಿ ಬರೋಬ್ಬರಿ 2 ಕೋಟಿ ಜನರು ಮೆಟ್ರೋ ಬಳಕೆ ಮಾಡಿದ್ದಾರೆ. ದಿನಕ್ಕೆ ಸರಾಸರಿ 6.88 ಲಕ್ಷ ಜನರು ಸಂಚಾರ ಮಾಡಿದ್ದಾರೆ. ವರ್ಷದ ಕೊನೆ ತಿಂಗಳಾದ ಡಿಸೆಂಬರ್​ನಲ್ಲಿ ಬರೋಬ್ಬರಿ ₹55 ಕೋಟಿ ಆದಾಯ ಹರಿದು‌ ಬಂದಿದೆ. ಡಿಸೆಂಬರ್ ನ ಒಟ್ಟು ಪ್ರಯಾಣಿಕರ ಸಂಖ್ಯೆ 2,13,34,076. ದಿನದ ಸರಾಸರಿ ಪ್ರಯಾಣಿಕರ ಸಂಖ್ಯೆ 6,88,196 . ದಿನದಿಂದ ದಿನಕ್ಕೆ ಮೆಟ್ರೋ ಪ್ರಯಾಣಿಕರ ಸಂಖ್ಯೆ ಹೆಚ್ಚಾಗ್ತಿದೆ ಎಂದು ಟಿವಿ9ಗೆ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ