AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಕ್ಕಸಂದ್ರದಲ್ಲಿ ಮನೆ ಕುಸಿದ ಬಳಿಕ ಎಚ್ಚೆತ್ತ ಬಿಎಂಆರ್​ಸಿಎಲ್ ಅಧಿಕಾರಿಗಳು; ಬೆಂಗಳೂರಿನಾದ್ಯಂತ ಮನೆಗಳ ಪರಿಶೀಲನೆಗೆ ಸೂಚನೆ

ಲಕ್ಕಸಂದ್ರದಲ್ಲಿ ಮೂರು ಅಂತಸ್ತಿನ ಮನೆ ನೆಲಕ್ಕೆ ಉರುಳಿತ್ತು. ಕುಸಿದ ಮನೆಯಲ್ಲಿ ಮೆಟ್ರೋ ಕಾರ್ಮಿಕರು ಇದ್ದರು. ಬೀಳುವ ನಿರೀಕ್ಷೆಯಿಂದ ಅಲ್ಲಿದ್ದ ಕಾರ್ಮಿಕರನ್ನು ಹೊರಗೆ ಕಳುಹಿಸಲಾಗಿತ್ತು.

ಲಕ್ಕಸಂದ್ರದಲ್ಲಿ ಮನೆ ಕುಸಿದ ಬಳಿಕ ಎಚ್ಚೆತ್ತ ಬಿಎಂಆರ್​ಸಿಎಲ್ ಅಧಿಕಾರಿಗಳು; ಬೆಂಗಳೂರಿನಾದ್ಯಂತ ಮನೆಗಳ ಪರಿಶೀಲನೆಗೆ ಸೂಚನೆ
ನೆಲಕ್ಕೆ ಉರುಳಿದ ಮನೆ
TV9 Web
| Edited By: sandhya thejappa|

Updated on:Sep 28, 2021 | 1:16 PM

Share

ಬೆಂಗಳೂರು: ನಗರದ ಲಕ್ಕಸಂದ್ರದಲ್ಲಿ ಮೂರು ಅಂತಸ್ತಿನ ಕಟ್ಟಡ ಕುಸಿತಗೊಂಡ ಹಿನ್ನೆಲೆ ಬಿಎಂಆರ್​ಸಿಎಲ್​ (BMRCL) ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ. ಮೆಟ್ರೋ (Metro) ಕಾರ್ಮಿಕರು ವಾಸವಾಗಿರುವ ಮನೆಗಳನ್ನು ಪರಿಶೀಲನೆ ಮಾಡುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ನಗರದಾದ್ಯಂತ ಮೆಟ್ರೋ ಕಾರ್ಮಿಕರು ಇರುವ ಮನೆಗಳನ್ನು ಪರಿಶೀಲನೆ ಮಾಡಬೇಕೆಂದು ಗುತ್ತಿಗೆದಾರರಿಗೆ ಹಾಗೂ ನಿಗಮದ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ಮೆಟ್ರೋ ಎಂಡಿ ಅಂಜುಂ ಫರ್ವೇಜ್ ಮಾಹಿತಿ ನೀಡಿದ್ದಾರೆ.

ನಿನ್ನೆ (ಸೆ.27) ಲಕ್ಕಸಂದ್ರದಲ್ಲಿ ಮೂರು ಅಂತಸ್ತಿನ ಮನೆ ನೆಲಕ್ಕೆ ಉರುಳಿತ್ತು. ಕುಸಿದ ಮನೆಯಲ್ಲಿ ಮೆಟ್ರೋ ಕಾರ್ಮಿಕರು ಇದ್ದರು. ಬೀಳುವ ನಿರೀಕ್ಷೆಯಿಂದ ಅಲ್ಲಿದ್ದ ಕಾರ್ಮಿಕರನ್ನು ಹೊರಗೆ ಕಳುಹಿಸಲಾಗಿತ್ತು. ಹೀಗಾಗಿ ಯಾವುದೇ ಪ್ರಾಣಾಪಾಯ ಸಂಭವಿಸಲಿಲ್ಲ. ಈ ಘಟನೆ ನಡೆದ ಬಳಿಕ ಬಿಎಂಆರ್ಸಿಎಲ್ ಅಧಿಕಾರಿಗಳು ಬೆಂಗಳೂರಿನಲ್ಲಿ ಮೆಟ್ರೋ ಕಾರ್ಮಿಕರು ವಾಸವಾಗಿರುವ ಎಲ್ಲಾ ಮನೆಗಳನ್ನು ಪರಿಶೀಲನೆ ಮಾಡುವಂತೆ ಸೂಚಿಸಿದ್ದಾರೆ.

ಮೆಟ್ರೋ ಪ್ರಾಜೆಕ್ಟ್​ನಲ್ಲಿ ಸುಮಾರು 60 ಸಾವಿರಕ್ಕೂ ಹೆಚ್ಚು ಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದಾರೆ. ಕಾರ್ಮಿಕರು ವಾಸವಿರುವ ಮನೆಗಳ ವ್ಯವಸ್ಥೆ ಬಗ್ಗೆ ಪರಿಶೀಲಿಸಿ ನಡೆಸಲಾಗುತ್ತದೆ. ಪರಿಶೀಲನೆ ವೇಳೆ ಸರಿಯಾದ ವ್ಯವಸ್ಥೆ ಇಲ್ಲದಿರುವುದು ತಿಳಿದುಬಂದರೆ ಕಾರ್ಮಿಕರನ್ನ ವ್ಯವಸ್ಥಿತ ಮನೆಗೆ ಸ್ಥಳಾಂತರ ಮಾಡಲಾಗುತ್ತದೆ. ನಿನ್ನೆ ಕುಸಿದ ಕಟ್ಟಡದಲ್ಲಿ 22 ಮೆಟ್ರೋ ಕಾರ್ಮಿಕರು ವಾಸವಿದ್ದು, ಮೆಟ್ರೋ ನಿಗಮ ಕಾರ್ಮಿಕರಿಗೆ ಪರ್ಯಾಯ ವ್ಯವಸ್ಥೆ ಮಾಡಿದೆ. ಈ ಬಗ್ಗೆ ಮೆಟ್ರೋ ನಿಗಮದ ಎಂಡಿ ಅಂಜುಂ ಫರ್ವೇಜ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ

ಬೆಂಗಳೂರಿನಲ್ಲಿ ಕುಸಿಯುವ ಹಂತದಲ್ಲಿದೆ 250 ಮನೆಗಳು, 2019ರಲ್ಲೇ ಪಟ್ಟಿ ಸಿದ್ಧವಿದ್ದರೂ ಕ್ರಮಕ್ಕೆ ಮುಂದಾಗದ ಬಿಬಿಎಂಪಿ

ಬೆಂಗಳೂರಿನಲ್ಲಿ ಮತ್ತೊಂದು ಮೂರು ಅಂತಸ್ತಿನ ಕಟ್ಟಡ ಕುಸಿತ! ಮಗುವನ್ನು ರಕ್ಷಿಸುವುದಕ್ಕೆ ಕೆಳಗೆ ಎಸೆದ ಪೋಷಕರು

(BMRCL officials have instructed that inspect the Metro workers houses in Bengaluru)

Published On - 1:14 pm, Tue, 28 September 21

Follow Us
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!