AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಕ್ಕಸಂದ್ರದಲ್ಲಿ ಮನೆ ಕುಸಿದ ಬಳಿಕ ಎಚ್ಚೆತ್ತ ಬಿಎಂಆರ್​ಸಿಎಲ್ ಅಧಿಕಾರಿಗಳು; ಬೆಂಗಳೂರಿನಾದ್ಯಂತ ಮನೆಗಳ ಪರಿಶೀಲನೆಗೆ ಸೂಚನೆ

ಲಕ್ಕಸಂದ್ರದಲ್ಲಿ ಮೂರು ಅಂತಸ್ತಿನ ಮನೆ ನೆಲಕ್ಕೆ ಉರುಳಿತ್ತು. ಕುಸಿದ ಮನೆಯಲ್ಲಿ ಮೆಟ್ರೋ ಕಾರ್ಮಿಕರು ಇದ್ದರು. ಬೀಳುವ ನಿರೀಕ್ಷೆಯಿಂದ ಅಲ್ಲಿದ್ದ ಕಾರ್ಮಿಕರನ್ನು ಹೊರಗೆ ಕಳುಹಿಸಲಾಗಿತ್ತು.

ಲಕ್ಕಸಂದ್ರದಲ್ಲಿ ಮನೆ ಕುಸಿದ ಬಳಿಕ ಎಚ್ಚೆತ್ತ ಬಿಎಂಆರ್​ಸಿಎಲ್ ಅಧಿಕಾರಿಗಳು; ಬೆಂಗಳೂರಿನಾದ್ಯಂತ ಮನೆಗಳ ಪರಿಶೀಲನೆಗೆ ಸೂಚನೆ
ನೆಲಕ್ಕೆ ಉರುಳಿದ ಮನೆ
TV9 Web
| Updated By: sandhya thejappa|

Updated on:Sep 28, 2021 | 1:16 PM

Share

ಬೆಂಗಳೂರು: ನಗರದ ಲಕ್ಕಸಂದ್ರದಲ್ಲಿ ಮೂರು ಅಂತಸ್ತಿನ ಕಟ್ಟಡ ಕುಸಿತಗೊಂಡ ಹಿನ್ನೆಲೆ ಬಿಎಂಆರ್​ಸಿಎಲ್​ (BMRCL) ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ. ಮೆಟ್ರೋ (Metro) ಕಾರ್ಮಿಕರು ವಾಸವಾಗಿರುವ ಮನೆಗಳನ್ನು ಪರಿಶೀಲನೆ ಮಾಡುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ನಗರದಾದ್ಯಂತ ಮೆಟ್ರೋ ಕಾರ್ಮಿಕರು ಇರುವ ಮನೆಗಳನ್ನು ಪರಿಶೀಲನೆ ಮಾಡಬೇಕೆಂದು ಗುತ್ತಿಗೆದಾರರಿಗೆ ಹಾಗೂ ನಿಗಮದ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ಮೆಟ್ರೋ ಎಂಡಿ ಅಂಜುಂ ಫರ್ವೇಜ್ ಮಾಹಿತಿ ನೀಡಿದ್ದಾರೆ.

ನಿನ್ನೆ (ಸೆ.27) ಲಕ್ಕಸಂದ್ರದಲ್ಲಿ ಮೂರು ಅಂತಸ್ತಿನ ಮನೆ ನೆಲಕ್ಕೆ ಉರುಳಿತ್ತು. ಕುಸಿದ ಮನೆಯಲ್ಲಿ ಮೆಟ್ರೋ ಕಾರ್ಮಿಕರು ಇದ್ದರು. ಬೀಳುವ ನಿರೀಕ್ಷೆಯಿಂದ ಅಲ್ಲಿದ್ದ ಕಾರ್ಮಿಕರನ್ನು ಹೊರಗೆ ಕಳುಹಿಸಲಾಗಿತ್ತು. ಹೀಗಾಗಿ ಯಾವುದೇ ಪ್ರಾಣಾಪಾಯ ಸಂಭವಿಸಲಿಲ್ಲ. ಈ ಘಟನೆ ನಡೆದ ಬಳಿಕ ಬಿಎಂಆರ್ಸಿಎಲ್ ಅಧಿಕಾರಿಗಳು ಬೆಂಗಳೂರಿನಲ್ಲಿ ಮೆಟ್ರೋ ಕಾರ್ಮಿಕರು ವಾಸವಾಗಿರುವ ಎಲ್ಲಾ ಮನೆಗಳನ್ನು ಪರಿಶೀಲನೆ ಮಾಡುವಂತೆ ಸೂಚಿಸಿದ್ದಾರೆ.

ಮೆಟ್ರೋ ಪ್ರಾಜೆಕ್ಟ್​ನಲ್ಲಿ ಸುಮಾರು 60 ಸಾವಿರಕ್ಕೂ ಹೆಚ್ಚು ಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದಾರೆ. ಕಾರ್ಮಿಕರು ವಾಸವಿರುವ ಮನೆಗಳ ವ್ಯವಸ್ಥೆ ಬಗ್ಗೆ ಪರಿಶೀಲಿಸಿ ನಡೆಸಲಾಗುತ್ತದೆ. ಪರಿಶೀಲನೆ ವೇಳೆ ಸರಿಯಾದ ವ್ಯವಸ್ಥೆ ಇಲ್ಲದಿರುವುದು ತಿಳಿದುಬಂದರೆ ಕಾರ್ಮಿಕರನ್ನ ವ್ಯವಸ್ಥಿತ ಮನೆಗೆ ಸ್ಥಳಾಂತರ ಮಾಡಲಾಗುತ್ತದೆ. ನಿನ್ನೆ ಕುಸಿದ ಕಟ್ಟಡದಲ್ಲಿ 22 ಮೆಟ್ರೋ ಕಾರ್ಮಿಕರು ವಾಸವಿದ್ದು, ಮೆಟ್ರೋ ನಿಗಮ ಕಾರ್ಮಿಕರಿಗೆ ಪರ್ಯಾಯ ವ್ಯವಸ್ಥೆ ಮಾಡಿದೆ. ಈ ಬಗ್ಗೆ ಮೆಟ್ರೋ ನಿಗಮದ ಎಂಡಿ ಅಂಜುಂ ಫರ್ವೇಜ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ

ಬೆಂಗಳೂರಿನಲ್ಲಿ ಕುಸಿಯುವ ಹಂತದಲ್ಲಿದೆ 250 ಮನೆಗಳು, 2019ರಲ್ಲೇ ಪಟ್ಟಿ ಸಿದ್ಧವಿದ್ದರೂ ಕ್ರಮಕ್ಕೆ ಮುಂದಾಗದ ಬಿಬಿಎಂಪಿ

ಬೆಂಗಳೂರಿನಲ್ಲಿ ಮತ್ತೊಂದು ಮೂರು ಅಂತಸ್ತಿನ ಕಟ್ಟಡ ಕುಸಿತ! ಮಗುವನ್ನು ರಕ್ಷಿಸುವುದಕ್ಕೆ ಕೆಳಗೆ ಎಸೆದ ಪೋಷಕರು

(BMRCL officials have instructed that inspect the Metro workers houses in Bengaluru)

Published On - 1:14 pm, Tue, 28 September 21

ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು