AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಟ್ರೋ ಸ್ಟೇಷನ್​ಗಳಲ್ಲಿ ಆತ್ಮಹತ್ಯೆ ಕೇಸ್ ಹೆಚ್ಚಳ ಹಿನ್ನೆಲೆ BMRCL ವಿನೂತನ ಕ್ರಮ!

ಬೆಂಗಳೂರಿನ ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಹಳಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಳ್ಳುವುದನ್ನು ತಡೆಯಲು ಬಿಎಂಆರ್‌ಸಿಎಲ್ ಮಹತ್ವದ ಹೆಜ್ಜೆ ಇಟ್ಟಿದೆ. ನಿಮ್ಹಾನ್ಸ್ ಆಸ್ಪತ್ರೆಯ ಜೊತೆಗೂಡಿ ‘ಟೆಲಿಮನಸ್’ ಕಾರ್ಯಕ್ರಮದಡಿ ಪ್ರಮುಖ ಮೆಟ್ರೋ ನಿಲ್ದಾಣಗಳಲ್ಲಿ ಜಾಗೃತಿ ಫಲಕಗಳು ಹಾಗೂ 24/7 ಮಾನಸಿಕ ಆರೋಗ್ಯ ಸಹಾಯವಾಣಿ ಸಂಖ್ಯೆಗಳನ್ನು ಪ್ರದರ್ಶಿಸುವ ಮೂಲಕ ಸಾರ್ವಜನಿಕರಲ್ಲಿ ಧೈರ್ಯ ತುಂಬುವ ವಿನೂತನ ಪ್ರಯತ್ನಕ್ಕೆ ಚಾಲನೆ ನೀಡಲಾಗಿದೆ.

ಮೆಟ್ರೋ ಸ್ಟೇಷನ್​ಗಳಲ್ಲಿ ಆತ್ಮಹತ್ಯೆ ಕೇಸ್ ಹೆಚ್ಚಳ ಹಿನ್ನೆಲೆ BMRCL ವಿನೂತನ ಕ್ರಮ!
ನಮ್ಮ ಮೆಟ್ರೋ ನಿಲ್ದಾಣ (ಸಾಂದರ್ಭಿಕ ಚಿತ್ರ)Image Credit source: PTI
ಕಿರಣ್​ ಸೂರ್ಯ
| Edited By: |

Updated on:Jun 26, 2026 | 7:36 AM

Share

ಮುಖ್ಯಾಂಶಗಳು

  • ಮೆಟ್ರೋ ನಿಲ್ದಾಣಗಳಲ್ಲಿ ಜಾಗೃತಿ ಫಲಕ
  • ನಿಮ್ಹಾನ್ಸ್ ಸಹಾಯವಾಣಿ ಸಂಖ್ಯೆ ಪ್ರದರ್ಶನ
  • ಪ್ರಯಾಣಿಕರಿಂದ ಹೊಸ ಕ್ರಮಕ್ಕೆ ಮೆಚ್ಚುಗೆ

ಬೆಂಗಳೂರು, ಜೂನ್ 26: ಸಿಲಿಕಾನ್ ಸಿಟಿ ಬೆಂಗಳೂರಿನ ಸಾರ್ವಜನಿಕ ಸಾರಿಗೆಯ ಜೀವನಾಡಿಯಾಗಿರುವ ‘ನಮ್ಮ ಮೆಟ್ರೋ’ ನಿಲ್ದಾಣಗಳಲ್ಲಿ ಇತ್ತೀಚಿನ ದಿನಗಳಲ್ಲಿ ಹಳಿಗೆ ಜಿಗಿದು ಆತ್ಮಹತ್ಯೆಗೆ ಶರಣಾಗುವ ಘಟನೆಗಳು ಹೆಚ್ಚಾಗುತ್ತಿವೆ. ಇದರಿಂದಾಗಿ ಅಮೂಲ್ಯ ಜೀವಗಳು ನಷ್ಟವಾಗುವುದರ ಜೊತೆಗೆ ಮೆಟ್ರೋ ಸಂಚಾರದಲ್ಲೂ ಗಂಟೆಗಟ್ಟಲೆ ವ್ಯತ್ಯಯ ಉಂಟಾಗಿ ನಿತ್ಯ ಪ್ರಯಾಣಿಕರು ತೀವ್ರ ಪರದಾಡುವಂತಾಗುತ್ತದೆ. ಈ ಗಂಭೀರ ಸಮಸ್ಯೆಗೆ ಕಡಿವಾಣ ಹಾಕಲು ಮುಂದಾಗಿರುವ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL), ಮೆಟ್ರೋ ನಿಲ್ದಾಣಗಳನ್ನು ಸುರಕ್ಷಿತವಾಗಿಸಲು ಮತ್ತು ಜನರ ಮನಸ್ಥಿತಿಯನ್ನು ಬದಲಾಯಿಸಲು ನಿಮ್ಹಾನ್ಸ್ (NIMHANS) ಸಂಸ್ಥೆಯೊಂದಿಗೆ ಕೈಜೋಡಿಸಿ ವಿಶೇಷ ಜಾಗೃತಿ ಅಭಿಯಾನವನ್ನು ಆರಂಭಿಸಿದೆ.

‘ಯೋಚನೆ ಬೇಡ, ಚಿಂತೆ ಬಿಡಿ, ಮಾತ್ನಾಡಿ’: ಮೆಟ್ರೋ ಹಳಿಗಳ ಬಳಿ ಬೋರ್ಡ್

ಕಳೆದ ಎರಡು ವರ್ಷಗಳ ಅವಧಿಯಲ್ಲಿ 11ಕ್ಕೂ ಹೆಚ್ಚು ಜನರು ಮೆಟ್ರೋ ಟ್ರ್ಯಾಕ್‌ಗೆ ಜಿಗಿದಿರುವ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬಂದಿವೆ. ಇಂತಹ ದುರ್ಘಟನೆಗಳನ್ನು ತಡೆಯಲು ಮೆಜೆಸ್ಟಿಕ್, ಕಬ್ಬನ್ ಪಾರ್ಕ್ ಸೇರಿದಂತೆ ನಗರದ ಪ್ರಮುಖ ಮೆಟ್ರೋ ನಿಲ್ದಾಣಗಳ ಹಳಿಗಳ ಪಕ್ಕದಲ್ಲಿಯೇ ಬಿಎಂಆರ್‌ಸಿಎಲ್ ವಿಶೇಷ ಡಿಜಿಟಲ್ ಡಿಸ್ಪ್ಲೇ ಮತ್ತು ಸೈನ್ ಬೋರ್ಡ್‌ಗಳನ್ನು ಅಳವಡಿಸಿದೆ. ಈ ಬೋರ್ಡ್‌ಗಳಲ್ಲಿ ‘‘ಯೋಚನೆ ಬೇಡ, ಚಿಂತೆ ಬಿಡಿ, ಮಾತ್ನಾಡಿ’’ ಹಾಗೂ ‘‘ದಣಿವಾಗೋದು ಸಹಜ, ಸಹಾಯ ಕೇಳೋದು ಸಹಜ’’ ಎಂಬ ಸಾಲುಗಳನ್ನು ಬರೆಯಲಾಗಿದ್ದು, ಕಷ್ಟದಲ್ಲಿ ಇರುವವರಿಗೆ ಮಾನಸಿಕ ಧೈರ್ಯ ತುಂಬುವ ಪ್ರಯತ್ನ ಮಾಡಲಾಗುತ್ತಿದೆ.

‘ಟೆಲಿಮನಸ್’ ಯೋಜನೆಯಡಿ ಆಪ್ತ ಸಮಾಲೋಚನೆ

ನಿಮ್ಹಾನ್ಸ್ ಸಂಸ್ಥೆಯ ಆರ್ಥಿಕ ಮತ್ತು ತಾಂತ್ರಿಕ ಸಹಯೋಗದೊಂದಿಗೆ ಟೆಲಿಮನಸ್ (Tele-MANAS) ಕಾರ್ಯಕ್ರಮದ ಅಡಿಯಲ್ಲಿ ಈ ಜಾಗೃತಿ ಮೂಡಿಸಲಾಗುತ್ತಿದೆ. ನಿಲ್ದಾಣಗಳ ಪ್ರಮುಖ ಸ್ಥಳಗಳಲ್ಲಿ ಕಾಲ್ ಸೆಂಟರ್ ಸಹಾಯವಾಣಿ ಸಂಖ್ಯೆಗಳನ್ನು ಡಿಸ್ಪ್ಲೇ ಮಾಡಲಾಗಿದೆ. ಯಾವುದೇ ವ್ಯಕ್ತಿ ಮಾನಸಿಕ ಒತ್ತಡದಲ್ಲಿದ್ದರೆ ಅಥವಾ ದುಡುಕಿನ ನಿರ್ಧಾರ ತೆಗೆದುಕೊಳ್ಳುವ ಆಲೋಚನೆ ಬರುತ್ತಿದ್ದರೆ, ತಕ್ಷಣವೇ ಈ ಸಂಖ್ಯೆಗಳಿಗೆ ಕರೆ ಮಾಡಿ ತಜ್ಞರಿಂದ ಉಚಿತ ಆಪ್ತ ಸಮಾಲೋಚನೆ ಹಾಗೂ ಸಹಾಯ ಪಡೆಯುವಂತೆ ಮನವಿ ಮಾಡಲಾಗಿದೆ.

ಮೆಟ್ರೋದಲ್ಲಿ ಹೆಚ್ಚಿದ ಸಮಸ್ಯೆ

ನಮ್ಮ ಮೆಟ್ರೋ ಟ್ರ್ಯಾಕ್​ಗೆ ಜಿಗಿದು ಪ್ರಾಣ ಕಳೆದುಕೊಳ್ಳುವ ಪ್ರಕರಣಗಳ ಸಂಖ್ಯೆ ಕಳೆದ ಕೆಲವು ವರ್ಷಗಳಿಂದ ಹೆಚ್ಚಾಗಿದೆ. ಕಳೆದ 2 ವರ್ಷಗಳ ಅವಧಿಯಲ್ಲಿ ಕನಿಷ್ಠ 3 ಮಂದಿ ಮೃತಪಟ್ಟಿದ್ದು, 5ಕ್ಕೂ ಹೆಚ್ಚು ಆತ್ಮಹತ್ಯೆ ಯತ್ನ ನಡೆದಿವೆ.

ಇದನ್ನೂ ಓದಿ: ಮತ್ತೆ ಕೈಕೊಟ್ಟ ನಮ್ಮ ಮೆಟ್ರೋ: ಬಾಗಿಲು ಲಾಕ್ ಆಗದೇ ನಿಂತಲ್ಲೇ ನಿಂತ ರೈಲು

ಒಟ್ಟಿನಲ್ಲಿ, ಟ್ರಾಫಿಕ್ ಕಿರಿಕಿರಿ ಇಲ್ಲದೆ ನಿಶ್ಚಿಂತೆಯಿಂದ ಪ್ರಯಾಣಿಸಲು ಜನ ಆಶ್ರಯಿಸುವ ಮೆಟ್ರೋ ನಿಲ್ದಾಣಗಳಲ್ಲಿ ಸುರಕ್ಷತೆಗಾಗಿ ಬಿಎಂಆರ್‌ಸಿಎಲ್ ಕೈಗೊಂಡಿರುವ ಈ ಜನಪರ ನಿರ್ಧಾರಕ್ಕೆ ಸಾರ್ವಜನಿಕರು ಹಾಗೂ ಸವಾರರಿಂದ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:36 am, Fri, 26 June 26

Follow Us
ಜಮ್ಮು ಕಾಶ್ಮೀರದ ಬಾರಾಮುಲ್ಲಾದಲ್ಲಿ ಸೇತುವೆ ಕುಸಿತ; 10 ಜನರಿಗೆ ಗಾಯ
ಜಮ್ಮು ಕಾಶ್ಮೀರದ ಬಾರಾಮುಲ್ಲಾದಲ್ಲಿ ಸೇತುವೆ ಕುಸಿತ; 10 ಜನರಿಗೆ ಗಾಯ
ಮಂಗಳೂರಿಗೆ ಬಂದ ಶಾರುಖ್ ಖಾನ್, ಬಾದ್​​ಶಾನ ನೋಡಲು ಮುಗಿಬಿದ್ದ ಜನ
ಮಂಗಳೂರಿಗೆ ಬಂದ ಶಾರುಖ್ ಖಾನ್, ಬಾದ್​​ಶಾನ ನೋಡಲು ಮುಗಿಬಿದ್ದ ಜನ
ಅಂಗಡಿ ಗೋಡೆ ಕೊರೆದು 10 ಕೆಜಿ ಬೆಳ್ಳಿ ಕಳ್ಳತನ ಕೇಸ್​​: ಯುವಕ ಅರೆಸ್ಟ್
ಅಂಗಡಿ ಗೋಡೆ ಕೊರೆದು 10 ಕೆಜಿ ಬೆಳ್ಳಿ ಕಳ್ಳತನ ಕೇಸ್​​: ಯುವಕ ಅರೆಸ್ಟ್
33 ಕ್ರಸ್ಟ್ ಗೇಟ್ ಚೇಂಜ್ ಮಾಡಿ ಉದ್ಘಾಟಿಸಿದ್ದು ನನ್ನ ಭಾಗ್ಯ: ಡಿಕೆಶಿ
33 ಕ್ರಸ್ಟ್ ಗೇಟ್ ಚೇಂಜ್ ಮಾಡಿ ಉದ್ಘಾಟಿಸಿದ್ದು ನನ್ನ ಭಾಗ್ಯ: ಡಿಕೆಶಿ
ಕೃಷಿ ತಾಪಂಡ ಮನೆಯಲ್ಲಿ ಉದ್ಯಮಿ ವೈಶಾಖ್ ಸಾವು, ಆಪ್ತ ಗೆಳೆಯ ಹೇಳಿದ್ದೇನು?
ಕೃಷಿ ತಾಪಂಡ ಮನೆಯಲ್ಲಿ ಉದ್ಯಮಿ ವೈಶಾಖ್ ಸಾವು, ಆಪ್ತ ಗೆಳೆಯ ಹೇಳಿದ್ದೇನು?
ಜೂ 28ರಂದು ರಾಷ್ಟ್ರೀಯ ಲಸಿಕಾ ದಿನ: ಚಿಕ್ಕ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ
ಜೂ 28ರಂದು ರಾಷ್ಟ್ರೀಯ ಲಸಿಕಾ ದಿನ: ಚಿಕ್ಕ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ
ಮುತ್ತತ್ತಿ ದುರಂತ: ಕೊನೇ ಕ್ಷಣದ ವಿಡಿಯೋ ವೈರಲ್
ಮುತ್ತತ್ತಿ ದುರಂತ: ಕೊನೇ ಕ್ಷಣದ ವಿಡಿಯೋ ವೈರಲ್
ಮೂರು ರಾಜ್ಯಗಳ ಮುಖ್ಯಮಂತ್ರಿಗಳಿಂದ ಕ್ರಸ್ಟ್ ಗೇಟ್‌ಗಳು ಲೋಕಾರ್ಪಣೆ
ಮೂರು ರಾಜ್ಯಗಳ ಮುಖ್ಯಮಂತ್ರಿಗಳಿಂದ ಕ್ರಸ್ಟ್ ಗೇಟ್‌ಗಳು ಲೋಕಾರ್ಪಣೆ
ಸಾಯುವುದಕ್ಕೂ ಮೊದಲು ಕೃಷಿ ತಾಪಂಡಗೆ ವೈಶಾಕ್ ಕಳುಹಿಸಿದ ಸಂದೇಶ ಏನು?
ಸಾಯುವುದಕ್ಕೂ ಮೊದಲು ಕೃಷಿ ತಾಪಂಡಗೆ ವೈಶಾಕ್ ಕಳುಹಿಸಿದ ಸಂದೇಶ ಏನು?
ಪಠ್ಯದಲ್ಲಿ ಕೇಸರೀಕರಣ ವಿವಾದ: ಬಿಜೆಪಿ ವಿರುದ್ಧ ಮಧು ಬಂಗಾರಪ್ಪ ಕಿಡಿ
ಪಠ್ಯದಲ್ಲಿ ಕೇಸರೀಕರಣ ವಿವಾದ: ಬಿಜೆಪಿ ವಿರುದ್ಧ ಮಧು ಬಂಗಾರಪ್ಪ ಕಿಡಿ