AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Namma Metro: ಮೆಟ್ರೋ ಇಳಿದವರು ಸರಾಗವಾಗಿ ಕಚೇರಿ ತಲುಪಿ; ಪ್ರತ್ಯೇಕ ಪಾದಚಾರಿ ರಸ್ತೆ ನಿರ್ಮಿಸಿಕೊಳ್ಳಲು ಐಟಿ ಕಂಪನಿಗಳಿಗೆ ಹೊಸ ಆಫರ್

Ring Road: ಮೆಟ್ರೋ ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಂಜುಂ ಪರ್ವೇಜ್ ಈ ವಿಷಯವನ್ನು ಇತ್ತೀಚೆಗೆ ನಡೆದ ಹೊರವರ್ತುಲ ಸಂಘಗಳ ಜೊತೆಗಿನ ಸಮಾಲೋಚನ ಸಭೆಯಲ್ಲಿ ಬಹಿರಂಗಪಡಿಸಿದ್ದಾರೆ.

Namma Metro: ಮೆಟ್ರೋ ಇಳಿದವರು ಸರಾಗವಾಗಿ ಕಚೇರಿ ತಲುಪಿ; ಪ್ರತ್ಯೇಕ ಪಾದಚಾರಿ ರಸ್ತೆ ನಿರ್ಮಿಸಿಕೊಳ್ಳಲು ಐಟಿ ಕಂಪನಿಗಳಿಗೆ ಹೊಸ ಆಫರ್
ನಮ್ಮ ಮೆಟ್ರೋ (ಪ್ರಾತಿನಿಧಿಕ ಚಿತ್ರ)
TV9 Web
| Edited By: |

Updated on:Oct 27, 2022 | 12:49 PM

Share

ಬೆಂಗಳೂರು: ನಮ್ಮ ಮೆಟ್ರೋ ನಿಗಮವು (Bengaluru Metro Rail Corporation Limited – BMRCL) ಐಟಿ ಕಂಪನಿಗಳ ಎದುರು ಮಹತ್ವದ ಪ್ರಸ್ತಾವವೊಂದನನ್ನು ಇರಿಸಿದೆ. ಅದರಂತೆ ನಗರದ ಹೊರವಲಯದ ರಸ್ತೆಗಳಲ್ಲಿ (Ring Road) ಮುಂದಿನ ದಿನಗಳಲ್ಲಿ ನಿರ್ಮಾಣವಾಗುವ ಮೆಟ್ರೋ ನಿಲ್ದಾಣಗಳಿಂದ ಐಟಿ ಕಂಪನಿಗಳು ತಮ್ಮ ಕಚೇರಿಗಳಿಗೆ ನೇರ ಸಂಪರ್ಕ ಕಲ್ಪಿಸಿಕೊಳ್ಳಲು ಅವಕಾಶ ಮಾಡಿಕೊಡಲಾಗಿದೆ. ಮೆಟ್ರೋ ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಂಜುಂ ಪರ್ವೇಜ್ ಈ ವಿಷಯವನ್ನು ಇತ್ತೀಚೆಗೆ ನಡೆದ ಹೊರವರ್ತುಲ ಸಂಘಗಳ ಜೊತೆಗಿನ ಸಮಾಲೋಚನ ಸಭೆಯಲ್ಲಿ ಬಹಿರಂಗಪಡಿಸಿದ್ದಾರೆ.

ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಿಲ್ಕ್​ಬೋರ್ಡ್​ ಜಂಕ್ಷನ್​ನಿಂದ ಸಂಪರ್ಕ ಕಲ್ಪಿಸುವ ಹೊಸ ಮಾರ್ಗವನ್ನು ಮೆಟ್ರೋ ನಿರ್ಮಿಸುತ್ತಿದೆ. ಹೆಬ್ಬಾಳ-ಸಿಲ್ಕ್​ಬೋರ್ಡ್​ ನಡುವೆಯೂ ಈ ಮಾರ್ಗವು ಸುಲಭ ಸಂಪರ್ಕ ಬೆಸೆಯುತ್ತದೆ. ಈ ಮಾರ್ಗದಲ್ಲಿ ಬರಲಿರುವ 23 ನಿಲ್ದಾಣಗಳ ಪೈಕಿ ಯಾವುದೇ ನಿಲ್ದಾಣದಿಂದ ಯಾವುದೇ ಕಂಪನಿ ಪ್ರತ್ಯೇಕ ಪಾದಾಚಾರಿ ಮಾರ್ಗಗಳನ್ನು ನಿರ್ಮಿಸಿಕೊಳ್ಳಲು ಇಚ್ಛಿಸಿದರೆ ಅನುಮತಿ ನೀಡಲಾಗುವುದು ಎಂದು ಮೆಟ್ರೋ ನಿಗಮವು ಭರವಸೆ ನೀಡಿದೆ.

ಪಾದಚಾರಿ ಮಾರ್ಗ ನಿರ್ಮಾಣದ ಕಾರ್ಯಸಾಧ್ಯತೆಯನ್ನು ಪರಿಶೀಲಿಸಿ ಅನುಮತಿ ನೀಡುವವರೆಗೆ ಮಾತ್ರ ಮೆಟ್ರೋ ನಿಗಮದ ಜವಾಬ್ದಾರಿ ಇರುತ್ತದೆ. ಆದರೆ ನಂತರದ ದಿನಗಳಲ್ಲಿ ಅಂಥ ಕಾಮಗಾರಿಯ ಅನುಷ್ಠಾನದ ಹೊಣೆ ಸಂಪೂರ್ಣ ಆಯಾ ಕಂಪನಿಗಳದ್ದೇ ಆಗಿರಲಿದೆ. ಮೆಟ್ರೋದ ಕಂಬಗಳಿಗೆ ಬಣ್ಣ ಬಳಿಯುವ ಹಾಗೂ ಮೆಟ್ರೋ ಮಾರ್ಗದ ಅಡಿಯಲ್ಲಿ ಕಿರು ಉದ್ಯಾನ ನಿರ್ಮಾಣಕ್ಕೆ ಖಾಸಗಿ ಸಹಭಾಗಿತ್ವ ಸ್ವೀಕರಿಸುವ ಚಿಂತನೆ ಮೆಟ್ರೋ ನಿಗಮಕ್ಕೆ ಇದೆ. ಇಂಥ ಚಟುವಟಿಕೆಗಳಲ್ಲಿ ಆಸಕ್ತಿಯಿರುವ ಕಂಪನಿಗಳು ಮುಂದೆ ಬರಬೇಕು ಎಂದು ನಿಗಮವು ಕೋರಿದೆ.

ಬೈಯಪ್ಪನಹಳ್ಳಿ-ವೈಟ್​ಫೀಲ್ಡ್​ ಸಂಪರ್ಕ

ಮೆಟ್ರೋ ನಿಗಮವು ಇತ್ತೀಚೆಗಷ್ಟೇ ಬೈಯಪ್ಪನಹಳ್ಳಿ-ವೈಟ್​ಫೀಲ್ಡ್ ಮಾರ್ಗದಲ್ಲಿ ಪ್ರಾಯೋಗಿಕವಾಗಿ ರೈಲು ಸಂಚಾರ ನಡೆಸಿತು. ಈ ಮಾರ್ಗವು ಪೂರ್ಣಪ್ರಮಾಣದಲ್ಲಿ ಕಾರ್ಯರೂಪಕ್ಕೆ ಬಂದ ನಂತರ ಕೆಂಗೇರಿ-ವೈಟ್​ಫೀಲ್ಡ್​ ನಡುವೆ ಸಂಪರ್ಕ ಸುಲಭವಾಗುತ್ತದೆ. ಈ ಮಾರ್ಗದಲ್ಲಿ ರೈಲುಗಳನ್ನು ಪ್ರಯಾಣಿಕರಿಗೆ ಮುಕ್ತಗೊಳಿಸಲು ಡಿಸೆಂಬರ್ 2022ರ ಗಡುವು ಇರಿಸಿಕೊಳ್ಳಲಾಗಿದೆ.

ನೇರಳೆ ಮಾರ್ಗದಲ್ಲಿ ಸಂಚರಿಸುವ ರೈಲುಗಳು ಬಹುತೇಕ ಭರ್ತಿಯಾಗಿರುತ್ತವೆ. ಈ ಮಾರ್ಗದಲ್ಲಿ ಸಂಚರಿಸುವ ರೈಲುಗಳಿಗೆ ಬೋಗಿಗಳ ಸಂಖ್ಯೆ ಹೆಚ್ಚಿಸಬೇಕು ಎಂಬ ಬೇಡಿಕೆಯು ಪ್ರಯಾಣಿಕರಿಂದ ಬಂದಿದೆ. ಬೋಗಿಗಳನ್ನು ಹೆಚ್ಚಿಸುವ ಬದಲು, ರೈಲುಗಳ ಆವರ್ತನ ಹೆಚ್ಚಿಸಲು, ಪ್ರತಿ ರೈಲಿನ ನಡುವಣ ಸಮಯದ ಅಂತರ ಕಡಿಮೆ ಮಾಡಲು ನಿಗಮವು ಚಿಂತನೆ ನಡೆಸಿದೆ.

ಇದನ್ನೂ ಓದಿ: ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​​: ಬರಲಿದೆ ಕ್ಯೂಆರ್ ಕೋಡ್ ಆಧಾರಿತ ಟಿಕೆಟ್​ ವ್ಯವಸ್ಥೆ

Published On - 12:48 pm, Thu, 27 October 22

ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?