AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನಾಕ್ರೋಶ ಹಿನ್ನೆಲೆ ಪ್ರಯಾಣ ದರ ಸರಿಪಡಿಸಿದ ಮೆಟ್ರೋ: ಎಲ್ಲಿಂದ ಎಲ್ಲಿಗೆ ಎಷ್ಟು ಕಡಿಮೆಯಾಯ್ತು? ಇಲ್ಲಿದೆ ವಿವರ

ಜನಾಕ್ರೋಶಕ್ಕೆ ಮಣದಿರುವ ಬಿಎಂಆರ್‌ಸಿಎಲ್ ಕೊನೆಗೂ ನಮ್ಮ ಮೆಟ್ರೋ ಪ್ರಯಾಣ ದರ ಎಲ್ಲೆಲ್ಲಿ ದುಪ್ಪಟ್ಟು ಹೆಚ್ಚಾಗಿದೆಯೋ ಅಲ್ಲೆಲ್ಲ ತುಸು ಇಳಿಕೆ ಮಾಡಿದೆ. ದರ ಇಳಿಕೆ ಇಂದಿನಿಂದಲೇ ಜಾರಿಗೆ ಬಂದಿದೆ. ಶುಕ್ರವಾರ ಬೆಳಗ್ಗೆ ಮೆಟ್ರೋದಲ್ಲಿ ಪ್ರಯಾಣಿಸಿದ ಪ್ರಯಾಣಿಕರು ಕೂಡ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಎಲ್ಲಿಂದ ಎಲ್ಲಿಗೆ ಎಷ್ಟು ಕಡಿಮೆ ಆಯ್ತು ಎಂಬ ಮಾಹಿತಿ ಇಲ್ಲಿದೆ. ಆದಾಗ್ಯೂ, ಮೆಟ್ರೋದ ಅಧಿಕೃತ ದರಪಟ್ಟಿ ಇನ್ನಷ್ಟೇ ಬಿಡುಗಡೆಯಾಗಬೇಕಿದೆ.

ಜನಾಕ್ರೋಶ ಹಿನ್ನೆಲೆ ಪ್ರಯಾಣ ದರ ಸರಿಪಡಿಸಿದ ಮೆಟ್ರೋ: ಎಲ್ಲಿಂದ ಎಲ್ಲಿಗೆ ಎಷ್ಟು ಕಡಿಮೆಯಾಯ್ತು? ಇಲ್ಲಿದೆ ವಿವರ
ನಮ್ಮ ಮೆಟ್ರೋ
ಗಣಪತಿ ಶರ್ಮಾ
|

Updated on:Feb 14, 2025 | 10:16 AM

Share

ಬೆಂಗಳೂರು, ಫೆಬ್ರವರಿ 14: ದರ ಏರಿಕೆಯಿಂದ ಆಕ್ರೋಶಗೊಂಡಿರುವ ಸಾರ್ವಜನಿಕರನ್ನು, ಪ್ರಯಾಣಿಕರನ್ನು ಸಮಾಧಾನಪಡಿಸುವ ನಿಟ್ಟಿನಲ್ಲಿ ಮೊದಲ ಹೆಜ್ಜೆ ಇಟ್ಟಿರುವ ಬಿಎಂಆರ್​ಸಿಎಲ್, ಶೇ 90 ರಿಂದ 100 ರಷ್ಟು ದರ ಹೆಚ್ಚಳ ಮಾಡಿರುವ ನಿಲ್ದಾಣಗಳ ಮಧ್ಯೆ ದರ ತುಸು ಇಳಿಕೆ ಮಾಡಿದೆ. ಪರಿಷ್ಕೃತ ದರ ಪಟ್ಟಿಯನ್ನು ಬಿಡುಗಡೆ ಮಾಡುವುದಾಗಿ ಬಿಎಂಆರ್​ಸಿಎಲ್ ಗುರುವಾರ ತಿಳಿಸಿತ್ತು. ಆದರೆ, ಈವರಗೆ ಪರಿಷ್ಕೃತ ದರ ಪಟ್ಟಿ ಮೆಟ್ರೋದ ಅಧಿಕೃತ ವೆಬ್​ಸೈಟ್​​ನಲ್ಲಾಗಲೀ ಎಕ್ಸ್ ತಾಣದಲ್ಲಾಗಲೀ ಪ್ರಕಟವಾಗಿಲ್ಲ. ಆದರೆ, ಪ್ರಯಾಣ ದರದಲ್ಲಿ ತುಸು ಇಳಿಕೆ ಇಂದಿನಿಂದಲೇ (ಶುಕ್ರವಾರ) ಜಾರಿಗೆ ಬಂದಿದೆ.

ಯಾವ ನಿಲ್ದಾಣದಿಂದ ಎಲ್ಲಿಗೆ ಎಷ್ಟು ದರ ಇಳಿಕೆ?

  • ಮೆಜೆಸ್ಟಿಕ್​​ನಿಂದ ವೈಟ್​ಫಿಲ್ಡ್​ಗೆ 90 ರೂ. ಇದ್ದ ದರ ಈಗ 80 ರೂ. ಆಗಿದೆ.
  • ಮೆಜೆಸ್ಟಿಕ್​​ನಿಂದ ಚಲ್ಲಘಟ್ಟಕ್ಕೆ 70 ರೂ. ಇದ್ದ ದರ ಈಗ 60 ರೂ. ಆಗಿದೆ
  • ಮೆಜೆಸ್ಟಿಕ್​​ನಿಂದ ವಿಧಾನಸೌಧಕ್ಕೆ 20 ರೂ. ಇದ್ದ ದರ ಈಗ 10 ರೂ. ಆಗಿದೆ
  • ಮೆಜೆಸ್ಟಿಕ್​​ನಿಂದ ಕಬ್ಬನ್​ಪಾರ್ಕ್​ಗೆ ಇದ್ದ 20 ರೂ. ದರ ಯಥಾಸ್ಥಿತಿ ಕಾಯ್ದುಕೊಳ್ಳಲಾಗಿದೆ.
  • ಮೆಜೆಸ್ಟಿಕ್​​ನಿಂದ ಬೈಯಪ್ಪನಹಳ್ಳಿಗೆ 60 ಇದ್ದ ದರ ಈಗ 50 ರೂ. ಆಗಿದೆ.
  • ಮೆಜೆಸ್ಟಿಕ್​​ನಿಂದ ರೇಷ್ಮೆ ಸಂಸ್ಥೆಗೆ ಇದ್ದ 70 ರೂ. ದರ ಈಗ 60 ರೂ. ಆಗಿದೆ.
  • ಜಾಲಹಳ್ಳಿಯಿಂದ ರೇಷ್ಮೆ ಸಂಸ್ಥೆಗೆ 90 ರೂ. ದರದಲ್ಲಿ ಬದಲಾವಣೆ ಇಲ್ಲ
  • ನಮ್ಮ ಮೆಟ್ರೋ ಕನಿಷ್ಠ, ಗರಿಷ್ಠ ದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.

ಮೆಟ್ರೋ ದರ ಏರಿಕೆ ಬಗ್ಗೆ ಪರಿಶೀಲನೆ ನಡೆಸುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದ ಬೆನ್ನಲ್ಲೇ ಗುರುವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ್ದ ಬಿಎಂಆರ್​ಸಿಎಲ್ ಎಂಡಿ ಮಹೇಶ್ವರ್ ರಾವ್, ಯಾವ ನಿಲ್ದಾಣದಿಂದ ಯಾವ ನಿಲ್ದಾಣಕ್ಕೆ ದುಪ್ಪಟ್ಟು ದರ ಏರಿಕೆಯಾಗಿದೆಯೋ ಅಲ್ಲಿ ಸ್ಟೇಜ್ ಬೈ ಸ್ಟೇಜ್ ಮರ್ಜ್ ಮಾಡುವ ಮೂಲಕ ದರ ಕಡಿಮೆ ಮಾಡಲಾಗುವುದು. ಪರಿಷ್ಕೃತ ದರ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದಿದ್ದರು.

ಆದರೆ, ನಮ್ಮ ಮೆಟ್ರೋ ಪ್ರಯಾಣದ ಕನಿಷ್ಠ ಹಾಗೂ ಗರಿಷ್ಠ ದರದಲ್ಲಿ ಬದಲಾವಣೆ ಮಾಡುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದರು.

ಮೆಟ್ರೋ ಪ್ರಯಾಣಿಕರ ಸಂಖ್ಯೆಯಲ್ಲಿ ಭಾರಿ ಇಳಿಕೆ

ಮೆಟ್ರೋ ಪ್ರಯಾಣದರೆ ಏರಿಕೆ ಬೆನ್ನಲ್ಲೇ ಪ್ರಯಾಣಿಕರ ಸಂಖ್ಯೆಯಲ್ಲಿ ಭಾರಿ ಇಳಿಕೆಯಾಗಿರುವ ಬಗ್ಗೆ ವರದಿಯಾಗಿತ್ತು. ಆದರೆ, ಗಣನೀಯ ಪ್ರಮಾಣದಲ್ಲಿ ದರ ಹೆಚ್ಚಾಗಿರುವುದನ್ನು ಕಡಿಮೆ ಮಾಡುತ್ತೇವೆ ಎಂದು ಬಿಎಂಆರ್‌ಸಿಎಲ್ ಭರವಸೆ ನೀಡಿದ ಹೊರತಾಗಿಯೂ ಪ್ರಯಾಣಿಕರ ಸಂಖ್ಯೆ ಕಡಿಮೆಯೇ ಇದೆ.

ಇದನ್ನೂ ಓದಿ: ನಮ್ಮ ಮೆಟ್ರೋ ಟಿಕೆಟ್ ದರ ಶೇ 30 ರ ವರೆಗೆ ಇಳಿಕೆ: ಆದರೆ ಎಲ್ಲೆಡೆಯೂ ಅಲ್ಲ!

ಶುಕ್ರವಾರ ಬೆಳಗ್ಗೆ ಕೂಡ ಮೆಟ್ರೋ ಪ್ರಯಾಣಿಕರ ಸಂಖ್ಯೆಯಲ್ಲಿ ಇಳಿಕೆ ಕಂಡು ಬಂತು. ಸಾಮಾನ್ಯವಾಗಿ ಬೆಳಗ್ಗೆ ಹೊತ್ತು ಮೆಜೆಸ್ಟಿಕ್ ನಿಲ್ದಾಣದಲ್ಲಿ ತೀವ್ರ ಜನದಟ್ಟಣೆ ಇದ್ದು ಮೆಟ್ರೋ ರೈಲು ಹತ್ತುವುದು ಕೂಡ ಕಷ್ಟವಾಗಿರುತ್ತದೆ. ಆದರೆ ಇಂದು ಆರಾಮವಾಗಿ ಪ್ರಯಾಣಿಸುವಷ್ಟು ಅನುಕೂಲಕರವಾಗಿತ್ತು. ಪ್ರಯಾಣಿಕರ ಸಂಖ್ಯೆ ಕಡಿಮೆ ಇತ್ತು ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ.

ವರದಿ: ಪ್ರದೀಪ್​ ಚಿಕ್ಕಾಟಿ, ‘ಟಿವಿ9’

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:15 am, Fri, 14 February 25

Follow Us
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ಹಾಲು ಮಾರುವ ಕೆಲಸ ಕೊಟ್ಟದ್ದಾರೆ: ಡಿ.ಕೆ.ಸುರೇಶ್
ಹಾಲು ಮಾರುವ ಕೆಲಸ ಕೊಟ್ಟದ್ದಾರೆ: ಡಿ.ಕೆ.ಸುರೇಶ್
ಡಿಕೆ, ನಾನು ಹಾಲು ಜೇನು ಇದ್ದಂತೆ ಎಂದ ಸಿದ್ದು ಹೇಳಿಕೆಗೆ ಜೋಶಿ ವ್ಯಂಗ್ಯ
ಡಿಕೆ, ನಾನು ಹಾಲು ಜೇನು ಇದ್ದಂತೆ ಎಂದ ಸಿದ್ದು ಹೇಳಿಕೆಗೆ ಜೋಶಿ ವ್ಯಂಗ್ಯ
ಶಾಲೆಗೆ ಬಂದು ಮುಖ್ಯಶಿಕ್ಷಕನ 2ನೇ ಪತ್ನಿ ಹೈಡ್ರಾಮಾ: ವಿದ್ಯಾರ್ಥಿಗಳು ಕಂಗಾಲು
ಶಾಲೆಗೆ ಬಂದು ಮುಖ್ಯಶಿಕ್ಷಕನ 2ನೇ ಪತ್ನಿ ಹೈಡ್ರಾಮಾ: ವಿದ್ಯಾರ್ಥಿಗಳು ಕಂಗಾಲು
ಜಮ್ಮು ಕಾಶ್ಮೀರ: ಕುಣಿದು ಕುಪ್ಪಳಿಸಿ ಹೋಳಿ ಆಚರಿಸಿದ ಸಿಆರ್​ಪಿಎಫ್ ಯೋಧರು!
ಜಮ್ಮು ಕಾಶ್ಮೀರ: ಕುಣಿದು ಕುಪ್ಪಳಿಸಿ ಹೋಳಿ ಆಚರಿಸಿದ ಸಿಆರ್​ಪಿಎಫ್ ಯೋಧರು!
ಸಿದ್ಧಿ ವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿದ ಟೀಂ ಇಂಡಿಯಾ ಆಟಗಾರರು
ಸಿದ್ಧಿ ವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿದ ಟೀಂ ಇಂಡಿಯಾ ಆಟಗಾರರು