AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Namma Metro: ಗುಡ್ ನ್ಯೂಸ್; ಡಿಸೆಂಬರ್​​​ ವೇಳೆಗೆ ಎಲೆಕ್ಟ್ರಾನಿಕ್ ಸಿಟಿಗೆ ಮೆಟ್ರೋ ರೈಲು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ. ಆರ್‌ವಿ ರಸ್ತೆಯಿಂದ ಬೊಮ್ಮಸಂದ್ರದವರೆಗೆ ವ್ಯಾಪಿಸಿರುವ ಎಲೆಕ್ಟ್ರಾನಿಕ್ ಸಿಟಿ ಮೆಟ್ರೋ ಕಾರಿಡಾರ್ ಈ ವರ್ಷದ ಡಿಸೆಂಬರ್‌ನಲ್ಲಿ ಕಾರ್ಯಾಚರಣೆಗೆ ಸಿದ್ಧವಾಗುವ ನಿರೀಕ್ಷೆಯಿದೆ.

Namma Metro: ಗುಡ್ ನ್ಯೂಸ್; ಡಿಸೆಂಬರ್​​​ ವೇಳೆಗೆ ಎಲೆಕ್ಟ್ರಾನಿಕ್ ಸಿಟಿಗೆ ಮೆಟ್ರೋ ರೈಲು
ನಮ್ಮ ಮೆಟ್ರೋ
ಗಣಪತಿ ಶರ್ಮಾ
|

Updated on: May 22, 2023 | 6:10 PM

Share

ಬೆಂಗಳೂರು: ನಮ್ಮ ಮೆಟ್ರೋ (Namma Metro) ಪ್ರಯಾಣಿಕರಿಗೆ ಸಿಹಿ ಸುದ್ದಿ. ಆರ್‌ವಿ ರಸ್ತೆಯಿಂದ ಬೊಮ್ಮಸಂದ್ರದವರೆಗೆ ವ್ಯಾಪಿಸಿರುವ ಎಲೆಕ್ಟ್ರಾನಿಕ್ ಸಿಟಿ ಮೆಟ್ರೋ ಕಾರಿಡಾರ್ (Electronic City Metro Corridor) ಈ ವರ್ಷದ ಡಿಸೆಂಬರ್‌ನಲ್ಲಿ ಕಾರ್ಯಾಚರಣೆಗೆ ಸಿದ್ಧವಾಗುವ ನಿರೀಕ್ಷೆಯಿದೆ. ಪ್ರತಿದಿನ ಸಾವಿರಾರು ಪ್ರಯಾಣಿಕರು, ವಿಶೇಷವಾಗಿ ಎಲೆಕ್ಟ್ರಾನಿಕ್ ಸಿಟಿಗೆ ಮತ್ತು ಅಲ್ಲಿಂದ ಮರಳುವ ಉದ್ಯೋಗಿಗಳಿಗೆ ಇದರಿಂದ ಪ್ರಯೋಜನವಾಗಲಿದೆ. ಬೆಂಗಳೂರು ಮೆಟ್ರೊ ರೈಲು ಕಾರ್ಪೊರೇಷನ್ ಲಿಮಿಟೆಡ್‌ನ (BMRCL) ವ್ಯವಸ್ಥಾಪಕ ನಿರ್ದೇಶಕ ಅಂಜುಮ್ ಪರ್ವೇಜ್ ಅವರು ಈ ವಿಷಯವನ್ನು ಪ್ರಕಟಿಸಿದ್ದಾರೆ.

ಈ ಹಿಂದೆ, ಕಾರಿಡಾರ್ ಅನ್ನು ಎರಡು ಹಂತಗಳಲ್ಲಿ ಪ್ರಾರಂಭಿಸಲು ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ ಉದ್ದೇಶಿಸಿತ್ತು, ಆದರೆ ರೋಲಿಂಗ್ ಸ್ಟಾಕ್ ಕೊರತೆಯಿಂದಾಗಿ, ಸಂಪೂರ್ಣ ವಿಸ್ತರಣೆಯನ್ನು ಏಕಕಾಲದಲ್ಲಿ ಪ್ರಾರಂಭಿಸಲು ನಿರ್ಧರಿಸಿದೆ.

ಎಲೆಕ್ಟ್ರಾನಿಕ್ಸ್ ಸಿಟಿ, ಬೊಮ್ಮಸಂದ್ರ ಕೈಗಾರಿಕಾ ಪ್ರದೇಶ, ವಸತಿ ಪ್ರದೇಶಗಳಾದ ಜಯನಗರ, ಬಿಟಿಎಂ ಲೇಔಟ್ ಮತ್ತು ಎಚ್‌ಎಸ್‌ಆರ್ ಲೇಔಟ್ ನಡುವಣ ಹಳದಿ ಮಾರ್ಗದ ಪ್ರಯಾಣಿಕರು ಎಲೆಕ್ಟ್ರಾನಿಕ್ ಸಿಟಿ ಕಾರಿಡಾರ್‌ನಿಂದ ಪ್ರಯೋಜನ ಪಡೆಯಲಿದ್ದಾರೆ.

ಕೋನಪ್ಪನ ಅಗ್ರಹಾರ ನಿಲ್ದಾಣಕ್ಕೆ ಇನ್ಫೋಸಿಸ್ ಮತ್ತು ಹೆಬ್ಬಗೋಡಿ ನಿಲ್ದಾಣಕ್ಕೆ ಬಯೋಕಾನ್ ಫೌಂಡೇಶನ್ ತಿಳುವಳಿಕೆ ಪತ್ರಗಳಿಗೆ ಸಹಿ ಹಾಕಿವೆ.

ಇದನ್ನೂ ಓದಿ: Byappanahalli-KR Pura Metro: ಬೈಯಪ್ಪನಹಳ್ಳಿ-ಕೆಆರ್ ಪುರ ಮೆಟ್ರೋ ಮಾರ್ಗ ಜುಲೈ 15ರೊಳಗೆ ಸಂಚಾರಕ್ಕೆ ಮುಕ್ತ

ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್​​​ನ ನೇರಳೆ ಮಾರ್ಗದ (ನಾಗವಾರ – ಕಳೆನಾ – ಅಗ್ರಹಾರ) ಸುರಂಗ ನಿರ್ಮಾಣದ ಸರಿಸುಮಾರು 72 ಪ್ರತಿಶತದಷ್ಟು ಪೂರ್ಣಗೊಂಡಿದೆ ಮತ್ತು ಮಾರ್ಚ್ 2025 ರ ಅಂತ್ಯದ ವೇಳೆಗೆ ಕಾರ್ಯಾರಂಭ ಮಾಡುವ ನಿರೀಕ್ಷೆ ಇದೆ.

ಒಟ್ಟು 21.24 ಕಿಮೀ ಸುರಂಗ ಮಾರ್ಗದಲ್ಲಿ 15.2 ಕಿಮೀ ಮಾರ್ಗದ ಕಾಮಗಾರಿ ಪೂರ್ಣಗೊಂಡಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ಹೇಳಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?