AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆ ಬಹುತೇಕ ಖಚಿತ: ಜನರ ಅಭಿಪ್ರಾಯ ಕೋರಿದ ಬಿಎಂಆರ್​ಸಿಎಲ್

ಬೆಂಗಳೂರಿನಲ್ಲಿ ಕಾರ್ಯಾರಂಭ ಮಾಡಿದ ನಂತರ ಒಂದು ಬಾರಿ ಟಿಕೆಟ್ ದರ ಪರಿಷ್ಕರಣೆ ಮಾಡಿದ್ದ ನಮ್ಮ ಮೆಟ್ರೋ ಇದೀಗ ಮತ್ತೊಮ್ಮೆ ದರ ಏರಿಕೆಗೆ ಮುಂದಾಗಿದೆ. ಈ ಬಗ್ಗೆ ಸಾರ್ವಜನಿಕರ ಅಭಿಪ್ರಾಯವನ್ನೂ ಬಿಎಂಆರ್​ಸಿಎಲ್ ಕೋರಿದೆ. ನೀವೂ ಅಭಿಪ್ರಾಯ ತಿಳಿಸಬಹುದಾಗಿದ್ದು, ಹೇಗೆ ಸಲ್ಲಿಸುವುದು? ಏನು ಮಾಡಬೇಕೆಂಬ ಮಾಹಿತಿ ಇಲ್ಲಿದೆ.

ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆ ಬಹುತೇಕ ಖಚಿತ: ಜನರ ಅಭಿಪ್ರಾಯ ಕೋರಿದ ಬಿಎಂಆರ್​ಸಿಎಲ್
ನಮ್ಮ ಮೆಟ್ರೋ (ಸಂಗ್ರಹ ಚಿತ್ರ)
ಗಣಪತಿ ಶರ್ಮಾ
|

Updated on: Oct 04, 2024 | 7:33 AM

Share

ಬೆಂಗಳೂರು, ಅಕ್ಟೋಬರ್ 4: ನಮ್ಮ ಮೆಟ್ರೋ 2011ರಲ್ಲಿ ಕಾರ್ಯಾಚರಣೆ ಆರಂಭಿಸಿದ ನಂತರ ಎರಡನೇ ಬಾರಿಗೆ ಪ್ರಯಾಣ ದರವನ್ನು ಪರಿಷ್ಕರಿಸುವ ಸಾಧ್ಯತೆ ದಟ್ಟವಾಗಿದೆ. ಈ ವಿಚಾರವಾಗಿ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಬುಧವಾರ ಸಾರ್ವಜನಿಕ ಪ್ರಕಟಣೆ ಹೊರಡಿಸಿದ್ದು, ‘ಮೆಟ್ರೊ ರೈಲು ದರ ನಿಗದಿ ಸಮಿತಿ’ಗೆ ಅಕ್ಟೋಬರ್ 21 ರೊಳಗೆ ಸಲಹೆಗಳನ್ನು ನೀಡುವಂತೆ ನಾಗರಿಕರನ್ನು ಕೋರಿದೆ.

ಅಭಿಪ್ರಾಯ ತಿಳಿಸುವುದು ಹೇಗೆ?

ನಾಗರಿಕರು ತಮ್ಮ ಸಲಹೆಗಳನ್ನು ffc@bmrc.co.in ಗೆ ಇಮೇಲ್ ಮಾಡಬಹುದು ಅಥವಾ 3ನೇ ಮಹಡಿ, ‘ಸಿ’ ಬ್ಲಾಕ್, ಬಿಎಂಟಿಸಿ ಕಾಂಪ್ಲೆಕ್ಸ್, ಕೆಹೆಚ್​​ ರಸ್ತೆ, ಶಾಂತಿನಗರ, ಬೆಂಗಳೂರು-560027 ಈ ವಿಳಾಸಕ್ಕೆ ಪತ್ರ ಬರೆದು ‘ಮೆಟ್ರೊ ರೈಲು ದರ ನಿಗದಿ ಸಮಿತಿ’ ಅಧ್ಯಕ್ಷರಿಗೆ ಅಭಿಪ್ರಾಯ ತಿಳಿಸಬಹುದು ಎಂದು ಬಿಎಂಆರ್​​ಸಿಎಲ್ ತಿಳಿಸಿದೆ.

ಇದು ಮೆಟ್ರೋ ರೈಲ್ವೇ (ಕಾರ್ಯಾಚರಣೆ ಮತ್ತು ನಿರ್ವಹಣೆ) ಕಾಯ್ದೆ, 2002 ರ ಸೆಕ್ಷನ್ 33 ಮತ್ತು 34 ರ ಅಡಿಯಲ್ಲಿ ಕೇಂದ್ರ ಸರ್ಕಾರದಿಂದ ರಚಿಸಲಾದ ಬಿಎಂಆರ್​ಸಿಎಲ್​​ನ ಮೊದಲ ದರ ನಿಗದಿ ಸಮಿತಿಯಾಗಿದೆ.

ಶೇ 15ರಷ್ಟು ದರ ಹೆಚ್ಚಿಸಿದ್ದ ಬಿಎಂಆರ್​ಸಿಎಲ್

ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಆರಂಭವಾದ ನಂತರ ಒಂದು ಬಾರಿ ದರ ಪರಿಷ್ಕರಣೆ ಮಾಡಲಾಗಿದೆ. 2017 ರಲ್ಲಿ ಟಿಕೆಟ್ ದರವನ್ನು ಶೇ 10-15 ರಷ್ಟು ಹೆಚ್ಚಿಸಲಾಗಿತ್ತು.

ಈಗೆಷ್ಟಿದೆ ನಮ್ಮ ಮೆಟ್ರೋ ಟಿಕೆಟ್ ದರ?

ಪ್ರಸ್ತುತ, ನಮ್ಮ ಮೆಟ್ರೋ ಟಿಕೆಟ್ ಕನಿಷ್ಠ ದರವು 10 ರೂ. ಮತ್ತು ಗರಿಷ್ಠ 60 ರೂ. ಇದೆ. ಗರಿಷ್ಠ ದರವು ನೇರಳೆ ಮತ್ತು ಹಸಿರು ಮಾರ್ಗಗಳೆರಡರಲ್ಲೂ ದೀರ್ಘ ಪ್ರಯಾಣಕ್ಕೆ ಅನ್ವಯಿಸುತ್ತದೆ. ವೈಟ್‌ಫೀಲ್ಡ್-ಚಲ್ಲಘಟ್ಟ ನಡುವಣ ದೂರ 43.49 ಕಿಮೀ ಮತ್ತು ಸಿಲ್ಕ್ ಇನ್‌ಸ್ಟಿಟ್ಯೂಟ್-ನಾಗಸಂದ್ರ ನಡುವಣ ದೂರ 30.32 ಕಿಮೀ ಇದ್ದರೂ ಅವುಗಳ ದರ ಒಂದೇ (60 ರೂ) ಆಗಿದೆ.

ಸ್ಮಾರ್ಟ್‌ಕಾರ್ಡ್‌ಗಳು ಮತ್ತು ಕ್ಯೂಆರ್ ಕೋಡ್ ಟಿಕೆಟ್‌ಗಳನ್ನು ಬಳಸುವ ಪ್ರಯಾಣಿಕರಿಗೆ ಶೇಕಡಾ 5 ರಷ್ಟು ರಿಯಾಯಿತಿ ಸಿಗುತ್ತದೆ.

ಇದನ್ನೂ ಓದಿ: ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆ ಸುಳಿವು ಕೊಟ್ಟ ಬಿಎಂಆರ್​ಸಿಎಲ್: ಬೆಂಗಳೂರು ಜನರಿಗೆ ಮತ್ತೊಂದು ಬೆಲೆ ಏರಿಕೆ ಬಿಸಿ ಸಾಧ್ಯತೆ

ಬಿಎಂಆರ್​ಎಲ್​​​ನ ಆದಾಯವು 2022-23 ರಲ್ಲಿ 422.61 ಕೋಟಿ ರೂ. ಮತ್ತು 2023-24 ರಲ್ಲಿ 573.91 ಕೋಟಿ ರೂ. ಆಗಿತ್ತು. ನಾವು ಮಾರ್ಗಗಳನ್ನು ವಿಸ್ತರಿಸುತ್ತಿದ್ದಂತೆ ನಮ್ಮ ವೆಚ್ಚಗಳು ಹೆಚ್ಚಾಗುತ್ತಿವೆ. ಜೊತೆಗೆ, ನಾವು ನಮ್ಮ ಸಾಲವನ್ನು ಮರುಪಾವತಿ ಮಾಡಬೇಕಿದೆ. ಹಾಗಾಗಿ, ದರ ಪರಿಷ್ಕರಣೆ ಅಗತ್ಯವಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ‘ಡೆಕ್ಕನ್ ಹೆರಾಲ್ಡ್’ ವರದಿ ಮಾಡಿದೆ.

ಸಮಿತಿಯು ಮುಂದಿನ ಕೆಲವು ತಿಂಗಳುಗಳಲ್ಲಿ ಪ್ರಯಾಣ ದರ ಹೆಚ್ಚಳದ ಕುರಿತು ತನ್ನ ಶಿಫಾರಸುಗಳನ್ನು ಸಲ್ಲಿಸುವ ನಿರೀಕ್ಷೆಯಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ