AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೀಕೆಂಡ್ ಕರ್ಫ್ಯೂ​​ ವೇಳೆ ನಮ್ಮ ಮೆಟ್ರೋ ಸಂಚಾರಕ್ಕೆ ಅಡ್ಡಿಯಿಲ್ಲ; ಆದರೆ ಗಮನಿಸಿ, ಶೇ 50ರಷ್ಟು ಮಾತ್ರ ಪ್ರಯಾಣಿಕರಿಗೆ ಅವಕಾಶ

ವೀಕೆಂಡ್ ಕರ್ಫ್ಯೂ ವೇಳೆ ನಮ್ಮ ಮೆಟ್ರೋ ಸಂಚಾರಕ್ಕೆ ಅಡ್ಡಿಯಿಲ್ಲ. ಶನಿವಾರ ಮತ್ತು ಭಾನುವಾರ ಎಂದಿನಂತೆ ನಮ್ಮ ಮೆಟ್ರೋ ರೈಲು ಸಂಚರಿಸಲಿದೆ. ನಮ್ಮ ಮೆಟ್ರೋ ಹಸಿರು, ನೇರಳೆ ಮಾರ್ಗದಲ್ಲಿ ಯಾವುದೇ ಬದಲಾವಣೆಯಿಲ್ಲ. ನಮ್ಮ ಮೆಟ್ರೋದಲ್ಲಿ ಶೇಕಡಾ 50ರಷ್ಟು ಪ್ರಯಾಣಿಕರಿಗೆ ಮಾತ್ರ ಅವಕಾಶ ಇರಲಿದೆ.

ವೀಕೆಂಡ್ ಕರ್ಫ್ಯೂ​​ ವೇಳೆ ನಮ್ಮ ಮೆಟ್ರೋ ಸಂಚಾರಕ್ಕೆ ಅಡ್ಡಿಯಿಲ್ಲ; ಆದರೆ ಗಮನಿಸಿ, ಶೇ 50ರಷ್ಟು ಮಾತ್ರ ಪ್ರಯಾಣಿಕರಿಗೆ ಅವಕಾಶ
ಬೆಂಗಳೂರು ನಮ್ಮ ಮೆಟ್ರೋ (ಪ್ರಾತಿನಿಧಿಕ ಚಿತ್ರ)
TV9 Web
| Updated By: ಸಾಧು ಶ್ರೀನಾಥ್​|

Updated on:Jan 05, 2022 | 12:53 PM

Share

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಡಿಸೆಂಬರ್ ಕಂಟಕ ಎದುರಾಗಿದ್ದು ಮತ್ತೆ ಕೊರೊನಾ ಸೋಂಕು ಆಟ ಕಾಟ ಶುರುವಾಗಿದೆ. ಮೊದಲ ಬಾರಿಗೆ ಡಿಸೆಂಬರ್ 2019ರಲ್ಲಿ ಕೋವಿಡ್ ಯುಹಾನ್ D61G ತಳಿ ಎಂಟ್ರಿ ಕೊಟ್ಟಿತ್ತು. ಅದಾದ ಮೇಲೆ ಡಿಸೆಂಬರ್ 2020 ರಲ್ಲಿ ಡೆಲ್ಟಾ ತಳಿ ಕಾಲಿಟ್ಟಿತ್ತು. ಕಳೆದ ವರ್ಷ, ಡಿಸೆಂಬರ್ 2021ರಲ್ಲಿ ಒಮಿಕ್ರಾನ್ ಮಿಶ್ರ ತಳಿ ಪತ್ತೆಯಾಗಿತ್ತು. ಅದರಿಂದ ಸಾವು ನೋವು, ನಷ್ಟಗಳು ಅಪಾರ ಪ್ರಮಾಣದಲ್ಲಿ ಘಟಿಸಿವೆ. ಕೊರೊನಾ ಕಾಟಕ್ಕೆ ಅಂತ್ಯವೇ ಇಲ್ಲ ಎಂಬಂತಾಗಿದೆ. ಈ ಮಧ್ಯೆ, ಒಮಿಕ್ರಾನ್ ಶರವೇಗದಲ್ಲಿ ಹಬ್ಬುತ್ತಿದ್ದು ಸರ್ಕಾರ ಅನೇಕ ಕಟ್ಟುನಿಟ್ಟಿನ ಕ್ರಮಗಳ್ನು ಕೈಗೊಂಡು ಮಹಾಮಾರಿಯನ್ನು ಕಟ್ಟಿಹಾಕಲು ಶ್ರಮಿಸುತ್ತಿದೆ. ಈ ವಾರದಿಂದಲೇ ಜಾರಿಗೆ ಬರುವಂತೆ ವೀಕೆಂಡ್ ಕರ್ಫ್ಯೂ ಘೋಷಿಸಿದೆ. ಆದರೆ ಲಾಕ್​ಡೌನ್ ಕ್ರಮಗಳಿಂದ ಭಾರೀ ನಷ್ಟ ಅನುಭವಿಸಿರುವ ನಮ್ಮ ಮೆಟ್ರೋ ಈ ಬಾರಿ ವೀಕೆಂಡ್ ಕರ್ಫ್ಯೂ ವೇಳೆ ತನ್ನ ರೈಲು ಸಂಚಾರ ಸ್ಥಗಿತಗೊಳಿಸದಿರಲು ನಿರ್ಧರಿಸಿದೆ.

ನಮ್ಮ ಮೆಟ್ರೋದಲ್ಲಿ ಶೇಕಡಾ 50ರಷ್ಟು ಮಾತ್ರ ಪ್ರಯಾಣಿಕರಿಗೆ ಅವಕಾಶ: ವೀಕೆಂಡ್ ಕರ್ಫ್ಯೂ​ ವೇಳೆ ನಮ್ಮ ಮೆಟ್ರೋ ಸಂಚಾರಕ್ಕೆ ಅಡ್ಡಿಯಿಲ್ಲ. ಶನಿವಾರ ಮತ್ತು ಭಾನುವಾರ ಎಂದಿನಂತೆ ನಮ್ಮ ಮೆಟ್ರೋ ರೈಲು ಸಂಚರಿಸಲಿದೆ. ನಮ್ಮ ಮೆಟ್ರೋ ಹಸಿರು, ನೇರಳೆ ಮಾರ್ಗದಲ್ಲಿ ಯಾವುದೇ ಬದಲಾವಣೆಯಿಲ್ಲ. ನಮ್ಮ ಮೆಟ್ರೋದಲ್ಲಿ ಶೇಕಡಾ 50ರಷ್ಟು ಪ್ರಯಾಣಿಕರಿಗೆ ಅವಕಾಶ ಇರಲಿದೆ. ಮೆಟ್ರೋ ರೈಲಿನಲ್ಲಿ ಸದ್ಯ 1800-1900 ಜನ ಪ್ರಯಾಣಿಸುತ್ತಿದ್ದಾರೆ. ಕೊವಿಡ್​ ಹೆಚ್ಚಳ ಹಿನ್ನೆಲೆ 800-900 ಜನ ಪ್ರಯಾಣಕ್ಕೆ ಅವಕಾಶ ನೀಡಲಿದ್ದೇವೆ. ಕೊರೊನಾ ನಿಯಮ ಪಾಲಿಸಿ ಮೆಟ್ರೋ ರೈಲು ಓಡಿಸಲು ನಿರ್ಧಾರ ಮಾಡಿದ್ದೇವೆ. ನಮ್ಮ ಮೆಟ್ರೋ ಸಂಚಾರದ ಅವಧಿ ಕಡಿತಗೊಳಿಸಿ ಮೆಟ್ರೋ ಕಾರ್ಯಾಚರಣೆ ನಡೆಸಲಿದೆ. ಪ್ರಸ್ತುತ 15 ನಿಮಿಷಕ್ಕೊಂದು ಮೆಟ್ರೋ ರೈಲು ಸಂಚರಿಸುತ್ತಿದೆ. ವೀಕೆಂಡ್ ಕರ್ಫ್ಯೂ ವೇಳೆ 30 ನಿಮಿಷಕ್ಕೊಂದು ಮೆಟ್ರೋ ಸಂಚಾರ ಮಾಡಲಿದೆ. ಎಂದು ಟಿವಿ9ಗೆ ಬಿಎಂಆರ್​ಸಿಎಲ್​ ಎಂಡಿ ಅಂಜುಂ ಪರ್ವೇಜ್​ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಮೆಟ್ರೊದಲ್ಲಿ ಸ್ಟ್ಯಾಂಡಿಂಗ್ ಇಲ್ಲ: ಆಸನ ಸಾಮರ್ಥ್ಯದಷ್ಟೇ ಪ್ರಯಾಣಿಕರ ಸಂಚಾರಕ್ಕೆ ಸರ್ಕಾರ ಸೂಚನೆ

ಇದನ್ನೂ ಓದಿ: ಬೆಂಗಳೂರನ್ನ ಕಾಡುತ್ತಿದೆ ಕೊರೊನಾ; 2 ದಿನದಲ್ಲಿ 152ಕ್ಕೆ ಏರಿಕೆಯಾದ ಕಂಟೇನ್‌ಮೆಂಟ್ ಜೋನ್​ಗಳ ಸಂಖ್ಯೆ

Published On - 12:35 pm, Wed, 5 January 22

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!