Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈಯಪ್ಪನಹಳ್ಳಿ-ಕೆಆರ್‌ ಪುರಂ ಮತ್ತು ಕೆಂಗೇರಿ-ಚಲ್ಲಘಟ್ಟ ನಡುವೆ ಸೆ.15 ರಿಂದ ಮೆಟ್ರೋ ಸಂಚಾರ ಆರಂಭ

ಮೆಟ್ರೋ ರೈಲು ಸುರಕ್ಷತಾ ಆಯುಕ್ತರ ಪರಿಶೀಲನೆ ನಂತರ ಬೈಯಪ್ಪನಹಳ್ಳಿ-ಕೆಆರ್‌ ಪುರಂ ಮತ್ತು ಕೆಂಗೇರಿ-ಚಲ್ಲಘಟ್ಟ ನಡುವೆ ಮೆಟ್ರೋ ಸಂಚಾರ ಆರಂಭಿಸಲಾಗುತ್ತದೆ. ಸೆ.15 ರಂದು ಈ ಮಾರ್ಗಗಳಲ್ಲಿ ಮೆಟ್ರೋ ಸಂಚಾರ ಆರಂಭಿಸಲು ಬಿಎಂಆರ್​ಸಿಎಲ್ ಸಿದ್ಧತೆ ನಡೆಸುತ್ತಿದೆ. ಈ ವಿಸ್ತರಣೆಯು ಪೂರ್ವ ಮತ್ತು ಪಶ್ಚಿಮ ಬೆಂಗಳೂರನ್ನು ಸಂಪರ್ಕಿಸುವ ಮೆಟ್ರೋದ ನೇರಳೆ ಮಾರ್ಗದ ಭಾಗವಾಗಿದೆ.

ಬೈಯಪ್ಪನಹಳ್ಳಿ-ಕೆಆರ್‌ ಪುರಂ ಮತ್ತು ಕೆಂಗೇರಿ-ಚಲ್ಲಘಟ್ಟ ನಡುವೆ ಸೆ.15 ರಿಂದ ಮೆಟ್ರೋ ಸಂಚಾರ ಆರಂಭ
ಬೆಂಗಳೂರು ನಮ್ಮ ಮೆಟ್ರೋImage Credit source: FILE PHOTO
Follow us
Rakesh Nayak Manchi
|

Updated on: Sep 11, 2023 | 10:22 AM

ಬೆಂಗಳೂರು, ಸೆ.11:ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ಬೈಯಪ್ಪನಹಳ್ಳಿ-ಕೆಆರ್‌ ಪುರಂ ಮತ್ತು ಕೆಂಗೇರಿ-ಚಲ್ಲಘಟ್ಟ ನಡುವೆ ಸೆಪ್ಟೆಂಬರ್ 15 ರಿಂದ ಮೆಟ್ರೋ ಸೇವೆ ಆರಂಭಿಸಲು ಸಿದ್ಧತೆ ನಡೆಸುತ್ತಿದೆ. ಮೆಟ್ರೋ ರೈಲು ಸುರಕ್ಷತಾ ಆಯುಕ್ತರು (CMRS) ಪರಿಶೀಲಿಸಿ ಪ್ರಮಾಣೀಕರಿಸಿದ ನಂತರ ಮೆಟ್ರೋ ಸಂಚಾರಕ್ಕೆ ಆರಂಭಿಸಲಾಗುತ್ತದೆ.

ಮೆಟ್ರೋ ಸಂಚಾರ ಆರಂಭದ ಬಗ್ಗೆ ಮಾತನಾಡಿದ ಬಿಎಂಆರ್​ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಅಂಜುಮ್‌ ಪರ್ವೇಜ್‌, ಬೈಯಪ್ಪನಹಳ್ಳಿ-ಕೆಆರ್‌ ಪುರಂ ಮತ್ತು ಕೆಂಗೇರಿ-ಚಲ್ಲಘಟ್ಟ ನಡುವಿನ ಮಾರ್ಗವನ್ನು ಸಿಎಂಆರ್‌ಎಸ್‌ ಪರಿಶೀಲಿಸಿ ಅನುಮತಿ ನೀಡಬೇಕು. ಸದ್ಯ ನಾವು ಇದಕ್ಕಾಗಿ ಕಾಯುತ್ತಿದ್ದೇವೆ. ಇದು ಶೀಘ್ರದಲ್ಲೇ ನಡೆದರೆ ಸೆಪ್ಟೆಂಬರ್ 15 ರಿಂದ ವೈಟ್‌ಫೀಲ್ಡ್-ಚಲ್ಲಘಟ್ಟ ಮಾರ್ಗದಲ್ಲಿ ಕಾರ್ಯಾಚರಣೆಯನ್ನು ಪ್ರಾರಂಭಿಸಬಹುದು ಎಂದಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಬಂದ್​​: ಪ್ರಯಾಣಿಕರ ಸಂಖ್ಯೆಯಲ್ಲಿ ಏರಿಕೆ ಹಿನ್ನೆಲೆ ಮೆಟ್ರೋ ಓಡಾಟ ಹೆಚ್ಚಳ; 5 ನಿಮಿಷಕ್ಕೊಂದು ಟ್ರೈನ್

ಬೈಯಪ್ಪನಹಳ್ಳಿ ಮತ್ತು ಕೆಆರ್ ಪುರಂ ನಡುವಿನ ಸಂಪರ್ಕ ಮತ್ತು ಕೆಂಗೇರಿಯಿಂದ ಚಲ್ಲಘಟ್ಟಕ್ಕೆ ವಿಸ್ತರಣೆಯು ಪೂರ್ವ ಮತ್ತು ಪಶ್ಚಿಮ ಬೆಂಗಳೂರನ್ನು ಸಂಪರ್ಕಿಸುವ ಮೆಟ್ರೋದ ನೇರಳೆ ಮಾರ್ಗದ ಭಾಗವಾಗಿದೆ. ಕಾರ್ಯಾಚರಣೆಗಳು ಪ್ರಾರಂಭವಾದ ನಂತರ ಮೆಟ್ರೋದಲ್ಲಿ ನಿತ್ಯ ಸಂಚರಿಸುವವರ ಸಂಖ್ಯೆ 75,000 ರಿಂದ ಸುಮಾರು 1 ಲಕ್ಷಕ್ಕೆ ಏರಿಕೆಯಾಗುವ ನಿರೀಕ್ಷೆಯಿದೆ.

ನೇರಳೆ ಲೈನ್‌ನ ಭಾಗವಾಗಿರುವ ವೈಟ್‌ಫೀಲ್ಡ್ ಮತ್ತು ಕೆಆರ್ ಪುರಂ ನಡುವಿನ 12.75 ಕಿಮೀ ಮಾರ್ಗವನ್ನು ಮಾರ್ಚ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವಿಧಾನಸಭೆ ಚುನಾವಣೆಗೂ ಮುನ್ನ ಉದ್ಘಾಟಿಸಿದ್ದರು. ವೈಟ್‌ಫೀಲ್ಡ್-ಕೆಆರ್ ಪುರಂ ಮಾರ್ಗದಲ್ಲಿ ಪ್ರಸ್ತುತ ದಿನಕ್ಕೆ ಸರಾಸರಿ 30,000 ಪ್ರಯಾಣಿಕರು ಪ್ರಯಾಣಿಸುತ್ತಿದ್ದಾರೆ. ಈ ಪೈಕಿ ಹೆಚ್ಚಿನವರು ಐಟಿ ವೃತ್ತಿಪರರಾಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಾಕಿಸ್ತಾನಕ್ಕೆ ಹೋದ ಅನುಭವವನ್ನು ಬಿಚ್ಚಿಟ್ಟ ಗ್ಲೋಬಲ್ ಕನ್ನಡಿಗ
ಪಾಕಿಸ್ತಾನಕ್ಕೆ ಹೋದ ಅನುಭವವನ್ನು ಬಿಚ್ಚಿಟ್ಟ ಗ್ಲೋಬಲ್ ಕನ್ನಡಿಗ
ಜೈಸ್ವಾಲ್ ಸಿಡಿಲಬ್ಬರದ ಬ್ಯಾಟಿಂಗ್​ಗೆ ಪಂಜಾಬ್ ಬೌಲರ್ಸ್​ ಸುಸ್ತು
ಜೈಸ್ವಾಲ್ ಸಿಡಿಲಬ್ಬರದ ಬ್ಯಾಟಿಂಗ್​ಗೆ ಪಂಜಾಬ್ ಬೌಲರ್ಸ್​ ಸುಸ್ತು
ಒಂದೇ ಊರಿನವರಾದರೂ ನಾನು ವಿನಯ್​ರನ್ನು ನೋಡಿರಲಿಲ್ಲ: ಶಾಸಕ
ಒಂದೇ ಊರಿನವರಾದರೂ ನಾನು ವಿನಯ್​ರನ್ನು ನೋಡಿರಲಿಲ್ಲ: ಶಾಸಕ
ಶ್ರೀಲಂಕಾದಲ್ಲಿರುವ ತಮಿಳು ಮೀನುಗಾರರ ಬಿಡುಗಡೆಗೆ ಪ್ರಧಾನಿ ಮೋದಿ ಒತ್ತಾಯ
ಶ್ರೀಲಂಕಾದಲ್ಲಿರುವ ತಮಿಳು ಮೀನುಗಾರರ ಬಿಡುಗಡೆಗೆ ಪ್ರಧಾನಿ ಮೋದಿ ಒತ್ತಾಯ
ಯತ್ನಾಳ್ ಆದಷ್ಟು ಬೇಗ ಪಕ್ಷಕ್ಕೆ ವಾಪಸ್ಸಾಗುವ ನಿರೀಕ್ಷೆ ಇದೆ: ಸುಧಾಕರ್
ಯತ್ನಾಳ್ ಆದಷ್ಟು ಬೇಗ ಪಕ್ಷಕ್ಕೆ ವಾಪಸ್ಸಾಗುವ ನಿರೀಕ್ಷೆ ಇದೆ: ಸುಧಾಕರ್
ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಛತ್ತೀಸ್‌ಗಢದ ದಾಂತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ
ಛತ್ತೀಸ್‌ಗಢದ ದಾಂತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ
ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ
ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ
ಪುಟ್ಟ ಬಾಲಕನ ದೈವ ನರ್ತನ: ಮೈ ಜುಮ್ಮೆನಿಸುವ ವಿಡಿಯೋ ನೋಡಿ
ಪುಟ್ಟ ಬಾಲಕನ ದೈವ ನರ್ತನ: ಮೈ ಜುಮ್ಮೆನಿಸುವ ವಿಡಿಯೋ ನೋಡಿ
CET ಪರೀಕ್ಷೆ ಬಗ್ಗೆ ಭಯ ಬೇಡ; ತಜ್ಞರು ನೀಡಿರುವ ಟಿಪ್ಸ್​​ ಇಲ್ಲಿದೆ
CET ಪರೀಕ್ಷೆ ಬಗ್ಗೆ ಭಯ ಬೇಡ; ತಜ್ಞರು ನೀಡಿರುವ ಟಿಪ್ಸ್​​ ಇಲ್ಲಿದೆ