AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BMTC: ಬಾಕಿ ಬಿಲ್ ಪಾವತಿಸಲು ಬಿಎಂಟಿಸಿಗೆ 200 ಕೋಟಿ ರೂಪಾಯಿ ಬಿಡುಗಡೆ

Bengaluru BMTC: ಬಾಕಿ ಬಿಲ್​ ಪಾವತಿಸಲು 200 ಕೋಟಿ ರೂಪಾಯಿ ಬಿಡುಗಡೆ ಮಾಡಿ ಆದೇಶ ಹೊರಡಿಸಲಾಗಿದೆ. ಈ ಬಗ್ಗೆ ಟ್ವೀಟ್​ ಮೂಲಕ ವಿಷಯ ಸಾರಿಗೆ ಸಚಿವ ಶ್ರೀರಾಮುಲು ಬುಧವಾರ (ಫೆಬ್ರವರಿ 9) ತಿಳಿಸಿದ್ದಾರೆ.

BMTC: ಬಾಕಿ ಬಿಲ್ ಪಾವತಿಸಲು ಬಿಎಂಟಿಸಿಗೆ 200 ಕೋಟಿ ರೂಪಾಯಿ ಬಿಡುಗಡೆ
ಬಿಎಂಟಿಸಿ ಬಸ್
TV9 Web
| Edited By: |

Updated on:Feb 09, 2022 | 5:53 PM

Share

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ (ಬಿಎಂಟಿಸಿ) 200 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ. ಬಿಎಂಟಿಸಿ ನೌಕರರ ಭವಿಷ್ಯ ನಿಧಿ, ಉಪ ಧನ, ನಿವೃತ್ತಿ ಪಿಂಚಣಿ, ಮರಣ ಹೊಂದಿದ ಬಿಎಂಟಿಸಿ ನೌಕರರ ಗಳಿಕೆ ರಜೆ ಮರುಪಾವತಿ ಮಾಡಲಾಗಿದೆ. ಬಾಕಿ ಬಿಲ್​ ಪಾವತಿಸಲು 200 ಕೋಟಿ ರೂಪಾಯಿ ಬಿಡುಗಡೆ ಮಾಡಿ ಆದೇಶ ಹೊರಡಿಸಲಾಗಿದೆ. ಈ ಬಗ್ಗೆ ಟ್ವೀಟ್​ ಮೂಲಕ ವಿಷಯ ಸಾರಿಗೆ ಸಚಿವ ಶ್ರೀರಾಮುಲು ಬುಧವಾರ (ಫೆಬ್ರವರಿ 9) ತಿಳಿಸಿದ್ದಾರೆ.

ಬಳ್ಳಾರಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಕ್ಷೇತ್ರದ ಭಕ್ತಾದಿಗಳ (Devotees) ಬಹುದಿನಗಳ ಬೇಡಿಕೆಗೆ ಸ್ಪಂದಿಸಿರುವ ಸಾರಿಗೆ ಇಲಾಖೆಯು ಈ ಮೊದಲು, ಬಳ್ಳಾರಿಯಿಂದ ಸವದತ್ತಿಗೆ ನೂತನ ಬಸ್ (Bus) ಸೇವೆಯನ್ನು ಫೆಬ್ರವರಿ 07 ರಂದು ಆರಂಭಿಸಿತ್ತು. ಈ ಮೂಲಕ ಭಕ್ತಾದಿಗಳ ಬಹುದಿನಗಳ ಆಸೆ ಈಡೇರಿದಂತಾಗಿತ್ತು.

ಸಾರಿಗೆ, ಪರಿಶಿಷ್ಟವರ್ಗಗಳ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ನೂತನ ಬಸ್‍ಗೆ ಹಸಿರುನಿಶಾನೆ ತೋರುವುದರ ಮೂಲಕ ಸಂಚಾರಕ್ಕೆ ಚಾಲನೆ ನೀಡಿದ್ದರು. ಬಳ್ಳಾರಿಯಿಂದ ಬೆಳಗ್ಗೆ 8ಕ್ಕೆ ಹೊರಡಲಿರುವ ಬಸ್​ ಸವದತ್ತಿಗೆ ಮಧ್ಯಾಹ್ನ 2ಕ್ಕೆ ತಲುಪಲಿದೆ. ಸವದತ್ತಿಯಿಂದ ಬಳ್ಳಾರಿಗೆ ಮಧ್ಯಾಹ್ನ 2:30ಕ್ಕೆ ಹೊರಡಲಿದೆ. 263 ರೂ.ಗಳಷ್ಟು ಟೀಕೆಟ್​ ದರ ಇದೆ. ಬಳ್ಳಾರಿಯಿಂದ ಹೊಸಪೇಟೆ, ಕೊಪ್ಪಳ, ಗದಗ, ನವಲಗುಂದ, ಯಲ್ಲಮ್ಮನಗ ಗುಡ್ಡದ ಮಾರ್ಗವಾಗಿ ಸವದತ್ತಿಗೆ ತೆರಳಲಿದೆ. ಬಸ್ ಸಂಚಾರಕ್ಕೆ ಚಾಲನೆ ನೀಡಿದ ನಂತರ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಶ್ರೀರಾಮುಲು(sriramulu) ಬಳ್ಳಾರಿಯಿಂದ ತಿರುಪತಿ, ಶ್ರೀಶೈಲ, ಧರ್ಮಸ್ಥಳ, ಮಂತ್ರಾಲಯ ಸೇರಿದಂತೆ ವಿವಿಧ ಧಾರ್ಮಿಕ ಕ್ಷೇತ್ರಗಳಿಗೆ ಬಸ್ ಸೇವೆ ಆರಂಭಿಸಲಾಗಿದೆ ಎಂದು ಹೇಳಿದ್ದರು.

ಈ ಬಾರಿಯ ಬಜೆಟ್‍ನಲ್ಲಿ ಸಾರಿಗೆ ಇಲಾಖೆಯನ್ನು ಮುಂದಿನ ದಿನಗಳಲ್ಲಿ ಲಾಭದಯಕವನ್ನಾಗಿ ತೆಗೆದುಕೊಂಡು ಹೋಗುವ ನಿಟ್ಟಿನಲ್ಲಿ ಸಾರಿಗೆ ಇಲಾಖೆ ನೇಮಿಸಲಾದ ಶ್ರೀನಿವಾಸ್‍ ಮೂರ್ತಿ ನೇತೃತ್ವದ ಉನ್ನತ ಸಮಿತಿ ವರದಿ ನೀಡಿದ್ದು, ಆ ವರದಿಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವುದರ ಮೂಲಕ ಇಲಾಖೆಯನ್ನು ಲಾಭದಾಯಕವನ್ನಾಗಿ ಮಾಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶ್ರೀರಾಮುಲು ಹೇಳಿದ್ದರು.

ಇದನ್ನೂ ಓದಿ: ರಾಜಕೀಯಕ್ಕೆ ಬರಲು ಆಹ್ವಾನ ಕೊಟ್ಟ ಶ್ರೀರಾಮುಲು, ಈ ಬಗ್ಗೆ ಸ್ಪಷ್ಟ ನಿಲುವು ಹಂಚಿಕೊಂಡ ಜನಾರ್ದನ ರೆಡ್ಡಿ

ಇದನ್ನೂ ಓದಿ: ಹಿಜಾಬ್ ವಿಚಾರದಲ್ಲಿ ತಟಸ್ಥ ನಿಲುವು ತಾಳಿದ ಸಚಿವ ಶ್ರೀರಾಮುಲು, ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು!

Published On - 5:52 pm, Wed, 9 February 22

Follow Us
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
"ಕಳೆದ 2 ವರ್ಷಗಳಲ್ಲಿ 3000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ"