AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಬಿಎಂಟಿಸಿ ಬಸ್ ಅಡಿ ಸಿಲುಕಿ​ ಬೈಕ್ ಸವಾರ ಸಾವು

BMTC: ಬಿಎಂಟಿಸಿ ಬಸ್​ನಡಿ ಸಿಲುಕಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಸೋಮನಹಳ್ಳಿ ಬ್ರಿಡ್ಜ್​ ಬಳಿ ನಡೆದಿದೆ.

ಬೆಂಗಳೂರು: ಬಿಎಂಟಿಸಿ ಬಸ್ ಅಡಿ ಸಿಲುಕಿ​ ಬೈಕ್ ಸವಾರ ಸಾವು
BMTC bus
TV9 Web
| Edited By: |

Updated on:Jan 18, 2023 | 3:03 PM

Share

ಬೆಂಗಳೂರು: ಕೆಲವು ತಿಂಗಳ ಕೆಳಗೆ ಬಿಎಂಟಿಸಿ (BMTC) ಬಸ್​ ಕೆಳಗೆ ಸಿಲುಕಿ ಬೆಂಗಳೂರು ವಿಶ್ವವಿದ್ಯಾಲಯ ವಿದ್ಯಾರ್ಥಿನಿ ಸಾವನ್ನಪ್ಪಿದ್ದಳು. ಈಗ ಬಿಎಂಟಿಸಿ ಬಸ್​ನಡಿ ಸಿಲುಕಿ ಬೈಕ್ ಸವಾರ (Bike Rider) ಸಾವನ್ನಪ್ಪಿರುವ ಘಟನೆ ಸೋಮನಹಳ್ಳಿ ಬ್ರಿಡ್ಜ್​ ಬಳಿ ನಡೆದಿದೆ. ಸೋಮನಹಳ್ಳಿ ಬ್ರಿಡ್ಜ್​ ಬಳಿ ಮುಂದೆ ತೆರಳುತ್ತಿದ್ದ, ಬೈಕ್​ಗೆ ಬಿಎಂಟಿಎಸ್​​ ಬಸ್​ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಸವಾರನ್ನು ಪೊಲೀಸರು ಮತ್ತು ಸ್ಥಳಿಯರು ಕೆ.ಸಿ.ಜನರಲ್‌ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬೈಕ್​ ಸವಾರ ಸಾವನ್ನಪ್ಪಿದ್ದಾನೆ. ವಿಜಯನಗರ ಕುಲದೀಪ್ ಬಗರೇಚಾ ಮೃತ ಬೈಕ್ ಸವಾರ. ಸ್ಥಳಕ್ಕೆ ಕಾಮಾಕ್ಷಿಪಾಳ್ಯ ಸಂಚಾರಿ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸದ್ಯ ಕಾಮಾಕ್ಷಿ ಪಾಳ್ಯ ಸಂಚಾರಿ ಪೊಲೀಸರು ಬಸ್ ಚಾಲಕ ಆನಂದ್ ರಾವ್ ಹಾಗು ಬಸ್​ನ್ನು ವಶಕ್ಕೆ ಪಡೆದಿದ್ದಾರೆ.

BMTC ಬಸ್, ಬೈಕ್ ನಡುವೆ ಅಪಘಾತ; ಸವಾರರಿಬ್ಬರು ಸಾವು

ನವೆಂಬರ್​ 29 ರಂದು ಬಿಎಂಟಿಸಿ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್​ ಸವಾರರಿಬ್ಬರು ಸಾವನ್ನಪ್ಪಿರುವ ಘಟನೆ ನಗರದ ಮಾಗಡಿ ರಸ್ತೆ ಜಂಕ್ಷನ್ ಬಳಿ ನಡೆದಿತ್ತು. ಘಟನೆಯಲ್ಲಿ ಮಂಜುನಾಥ್(25), ಶಿವರಾಜ್(29) ಸಾವನ್ನಪ್ಪಿದ್ದರು.  ಮೃತರು ಗೊಲ್ಲರಹಟ್ಟಿಯ ಇಂದಿರಾ ಕಾಲೋನಿ ನಿವಾಸಿಗಳು ಎಂದು ತಿಳಿಬಂದಿತ್ತು. ತಾವರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 2:05 pm, Wed, 18 January 23

ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?