AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BMTC Bus Accident: ಬಿಎಂಟಿಸಿ ಬಸ್ – ಬೈಕ್ ಡಿಕ್ಕಿ: ಮಲ್ಲೇಶ್ವರ ನಿವಾಸಿ ಯುವತಿ ಸಾವು

ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್​ನಿಂದ ಮತ್ತೊಂದು ಅಪಘಾತ ಸಂಭವಿಸಿದ್ದು, ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಮೃತಪಟ್ಟಿದ್ದಾರೆ. ಇದರೊಂದಿಗೆ ನಗರದಲ್ಲಿ ಬಿಎಂಟಿಸಿಯಿಂದಾಗುವ ಅಪಘಾತಗಳ ಸಂಖ್ಯೆ ಹೆಚ್ಚಳವಾಗಿದೆ. ಕಳೆದ ಕೆಲವು ತಿಂಗಳುಗಳಲ್ಲಿ ಬಿಎಂಟಿಸಿ ಬಸ್ ಡಿಕ್ಕಿಯಾಗಿ ಐದಾರು ಮಂದಿ ಮೃತಪಟ್ಟಿದ್ದಾರೆ. ಕಳೆದ ತಿಂಗಳು ಸಹ ಬಿಎಂಟಿಸಿ ಬಸ್ ಬೈಕ್​ಗೆ ಡಿಕ್ಕಿಯಾಗಿ ಯುವಕ ಮೃತಪಟ್ಟಿದ್ದರು.

BMTC Bus Accident: ಬಿಎಂಟಿಸಿ ಬಸ್ - ಬೈಕ್ ಡಿಕ್ಕಿ: ಮಲ್ಲೇಶ್ವರ ನಿವಾಸಿ ಯುವತಿ ಸಾವು
ಮೃತ ಯುವತಿ ಕುಸುಮಿತಾ ಹಾಗೂ ಬಿಎಂಟಿಸಿ ಬಸ್
Jagadisha B
| Edited By: |

Updated on: Feb 02, 2024 | 12:04 PM

Share

ಬೆಂಗಳೂರು, ಫೆಬ್ರವರಿ 2: ಬಿಎಂಟಿಸಿ ಬಸ್ ಮತ್ತು ಬೈಕ್ ಡಿಕ್ಕಿಯಾಗಿ (BMTC Bus Accident) ಎಂಜಿನಿಯರಿಂಗ್ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಬೆಂಗಳೂರಿನ (Bengaluru) ಹರಿಶ್ಚಂದ್ರ ಘಾಟ್​ ಬಳಿ ಶುಕ್ರವಾರ ಬೆಳಗ್ಗೆ ಸಂಭವಿಸಿದೆ. ಕೆಂಗೇರಿಯ ಖಾಸಗಿ ಕಾಲೇಜಿನಲ್ಲಿ ಎರಡನೇ ವರ್ಷದ ಎಂಜಿನಿಯರಿಂಗ್ ವ್ಯಾಸಂಗ ಮಾಡುತಿದ್ದ ಮಲ್ಲೇಶ್ವರ ನಿವಾಸಿ ಯುವತಿ ಕುಸುಮಿತಾ (21) ಇಂದು ಬೆಳಗ್ಗೆ 8.30ಕ್ಕೆ ಕಾಲೇಜಿಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ.

ಮಲ್ಲೇಶ್ವರಂನಿಂದ ಹರಿಶ್ಚಂದ್ರಘಾಟ್​​​ಗೆ ಬೈಕ್ ನಲ್ಲಿ ಬರುತಿದ್ದ ಯುವತಿ, ಬಳಿಕ ಮೆಟ್ರೋ ಬಳಸಿ ಕಾಲೇಜಿಗೆ ತೆರಳುತಿದ್ದಳು. ಶುಕ್ರವಾರ ಬೆಳಗ್ಗೆ ಸಹ ಎಂದಿನಂತೆಯೇ, ಮಲ್ಲೇಶ್ವರದಿಂದ ಹೊರಟಿದ್ದಳು. ಈ ವೇಳೆ ಅದೇ ಮಾರ್ಗದಲ್ಲಿ ಬಂದ ಬಸ್ ಆಕೆ ತೆರಳುತ್ತಿದ್ದ ಬೈಕ್​ಗೆ ಡಿಕ್ಕಿಹೊಡೆದಿದೆ. ಬಳಿಕ ಬೈಕ್ ಸಮೇತ ಎಳೆದೊಯ್ದಿದೆ.

ಬಳಿಕ ಗಾಯಾಗೊಂಡಿದ್ದ ಆಕೆಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಿಸದೇ ವಿದ್ಯಾರ್ಥಿನಿ ಮೃತಪಟ್ಟಿದ್ದಾರೆ. ಸದ್ಯ ಮೃತದೇಹವನ್ನು ಕೆಸಿ ಜನರಲ್ ಆಸ್ಪತ್ರೆಯಲ್ಲಿರಿಸಲಾಗಿದೆ.

ಮಾರತ್ತಹಳ್ಳಿಯ ವರ್ತೂರು ಮುಖ್ಯ ರಸ್ತೆಯಲ್ಲಿ ಬಿಎಂಟಿಸಿ ವೋಲ್ವೋ ಬಸ್​ ಹರಿದು ಬೈಕ್ ಸವಾರರೊಬ್ಬರು ಮೃತಪಟ್ಟ ಘಟನೆ ಇತ್ತೀಚೆಗೆ ಸಂಭವಿಸಿತ್ತು.

ಹೆಚ್ಚುತ್ತಿರುವ ಬಿಎಂಟಿಸಿ ಅಪಘಾತ

ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಅಪಘಾತಗಳು ಕಳೆದ ಕೆಲವು ತಿಂಗಳುಗಳಲ್ಲಿ ಹೆಚ್ಚಾಗಿದೆ. 2023 ರ ಅಕ್ಟೋಬರ್​​ ತಿಂಗಳೊಂದರಲ್ಲೇ ಬಿಎಂಟಿಸಿ ಬಸ್ ಡಿಕ್ಕಿಯಾಗಿ ಮೂವರು ಮೃತಪಟ್ಟ ಪ್ರತ್ಯೇಕ ಘಟನೆಗಳು ವರದಿಯಾಗಿದ್ದವು. ಡಿಸೆಂಬರ್​​ 28ರಂದು ಬಿಎಂಟಿಸಿ ಬಸ್​ಗೆ ಡಿಕ್ಕಿಯಾಗಿ ಪಾದಚಾರಿ ಮಹಿಳೆ ಸಾವನ್ನಪ್ಪಿದ್ದರು. ಅದಾದ ನಂತರ ಜನವರಿ 6ರಂದು ಬಿಎಂಟಿಸಿ ವೋಲ್ವೋ ಬಸ್​ ಹರಿದು ಬೈಕ್ ಸವಾರ ಮೃತಪಟ್ಟಿದ್ದರು.

ದೇವನಹಳ್ಳಿ: ಕ್ರಷರ್​​ನಲ್ಲಿ ಮಹಿಳೆ ಮೇಲೆ ಹರಿದ ಟಿಪ್ಪರ್​​, ಮಹಿಳೆ ಸಾವು

ಕ್ರಷರ್​​ನಲ್ಲಿ ಮಹಿಳೆ ಮೇಲೆ ಟಿಪ್ಪರ್ ಹರಿದು ಮಹಿಳೆಯೊಬ್ಬರು ಮೃತಪಟ್ಟ ದಾರುಣ ಘಟನೆ ಹೊಸಕೋಟೆ ತಾಲೂಕಿನ ಮುತುಕದಹಳ್ಳಿ ಗ್ರಾಮದಲ್ಲಿ ಸಂಭವಿಸಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕು ಮುತುಕದಹಳ್ಳಿ ಗ್ರಾಮದ ಮಂಜುಳಾ (39) ಮೃತ ಮಹಿಳೆಯಾಗಿದ್ದಾರೆ. ಮಹಿಳೆ ವಿಶ್ವ ವಿನಾಯಕ ಸ್ಟೋನ್ ಕ್ರಷರ್​​ನಲ್ಲಿ ಕೆಲಸಕ್ಕಿದ್ದರು. ಮಹಿಳೆ ಕೆಲಸ ಮಾಡುತ್ತಿದ್ದ ವೇಳೆ ಟಿಪ್ಪರ್​​ ಹಿಮ್ಮುಖವಾಗಿ ಚಲಿಸಿದ್ದು, ಮಹಿಳೆ ಮೇಲೆ ಟಿಪ್ಪರ್​ ಚಕ್ರ ಹರಿದಿದೆ. ಪರಿಣಾಮವಾಗಿ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಕಿಲ್ಲರ್ ಬಿಎಂಟಿಸಿ ವೋಲ್ವೋ ಬಸ್​ಗೆ ಬೈಕ್ ಸವಾರ ಬಲಿ

ಘಟನೆ ಬಳಿಕ ಸ್ಥಳದಲ್ಲಿ ಟಿಪ್ಪರ್ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ನಂದಗುಡಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ