AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಎಂಟಿಸಿ ಬಸ್ ಕಂಡಕ್ಟರ್-ಉತ್ತರ ಭಾರತೀಯ ವಲಸಿಗನ ನಡುವೆ ಕಪಾಳಮೋಕ್ಷ; ವಿಡಿಯೋ ವೈರಲ್

ಬಿಎಂಟಿಸಿ ಬಸ್​​ ಮತ್ತು ಉತ್ತರ ಭಾರತೀಯ ವಲಸಿಗನ ನಡುವೆ ನಡೆದ ಹೊಡೆದಾಟದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ಬಗ್ಗೆ ನಿಖರವಾದ ಮಾಹಿತಿ ನೀಡುವಂತೆ ಬೆಂಗಳೂರು ನಗರ ಪೊಲೀಸರು ಟ್ವೀಟ್ ಮಾಡಿದ್ದಾರೆ.

ಬಿಎಂಟಿಸಿ ಬಸ್ ಕಂಡಕ್ಟರ್-ಉತ್ತರ ಭಾರತೀಯ ವಲಸಿಗನ ನಡುವೆ ಕಪಾಳಮೋಕ್ಷ; ವಿಡಿಯೋ ವೈರಲ್
ಬಿಎಂಟಿಸಿ ಬಸ್ ಕಂಡಕ್ಟರ್ ಮತ್ತು ಉತ್ತರ ಭಾರತೀಯ ವಲಸಿಗನ ನಡುವೆ ಹೊಡೆದಾಟದ ವಿಡಿಯೋ ವೈರಲ್ (ಸಾಂದರ್ಭಿಕ ಚಿತ್ರ)
Rakesh Nayak Manchi
| Edited By: |

Updated on:Jul 25, 2023 | 8:46 AM

Share

ಬೆಂಗಳೂರು, ಜುಲೈ 24: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಬಸ್ ಕಂಡಕ್ಟರ್ ಮತ್ತು ಉತ್ತರ ಭಾರತೀಯ ವಲಸಿಗ ಎಂದು ಹೇಳಲಾಗುತ್ತಿರುವವನ ನಡುವೆ ನಡೆದ ಹೊಡೆದಾಟದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral Video) ಆಗುತ್ತಿದೆ. ಟಿಕೆಟ್ ಶುಲ್ಕ ನೀಡದೇ ಪ್ರಯಾಣಿಕ ಕಂಡಕ್ಟರ್​ ಜೊತೆ ಅಸಭ್ಯವಾಗಿ ಮಾತನಾಡಿದ್ದಾನೆ. ಈ ವಿಚಾರವಾಗಿ ಇಬ್ಬರ ನಡುವೆ ಜಗಳ ನಡೆದಿದೆ.

ರಾಮಯ್ಯ ಆಸ್ಪತ್ರೆ ಬಳಿ ಬಸ್ ಹತ್ತಿದ ಯುವಕ ಯಶವಂತಪುರಕ್ಕೆ ಹೋಗಲು ಟಿಕೆಟ್ ಕೇಳಿದ. ಆಗ ಬಸ್ ಕಂಡಕ್ಟರ್ ಮತ್ತಿಕೆರೆಗೆ ಟಿಕೆಟ್ ನೀಡಿದ್ರು. ಈ ವೇಳೆ ಮಹಿಳೆಯರಿಗೆ ಚಾರ್ಜ್ ಇಲ್ಲ, ನಮಗ್ಯಾಕೆ ಎಂದು ಯುವಕ ಕ್ಯಾತೆ ತೆಗೆದಿದ್ದಾನೆ. ಆಗ ಕಂಡಕ್ಟರ್ ಟಿಕೆಟ್ ಗೆ ಹಣ ನೀಡುವಂತೆ ಪಟ್ಟು ಹಿಡಿದಿದ್ದಾರೆ. ಈ ವೇಳೆ ಮಾತಿಗೆ ಮಾತು ಬೆಳೆದು ಕಂಡಕ್ಟರ್ ಮತ್ತು ಯುವಕ ಕೈ ಕೈ ಮಿಲಾಯಿಸಿದ್ದಾರೆ. ಇಬ್ಬರು ಮಹಿಳೆಯರು ತಡೆಯಲು ಯತ್ನಿಸಿದ್ದಾರೆ. ಆದರೂ ಇಬ್ಬರ ನಡುವೆ ಹೊಡೆದಾಟ ಮುಂದುವರಿಯುತ್ತದೆ. ಜಗಳ ತಾರಕಕ್ಕೇರುತ್ತಿದ್ದಂತೆ ಮಧ್ಯಪ್ರವೇಶಿಸಿದ ಚಾಲಕ, ಪ್ರಯಾಣಿಕನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಶುಲ್ಕ ಪಾವತಿಸುವಂತೆ ಹೇಳಿದ್ದಾರೆ.

ಇದನ್ನೂ ಓದಿ: Video Viral: 210 ಕೆಜಿ ಭಾರ ಎತ್ತುವ ಸಾಹಸ ಮಾಡಿ ಕುತ್ತಿಗೆ ಮುರಿತಕ್ಕೊಳಗಾಗಿ ಸಾವನ್ನಪ್ಪಿದ ಜಿಮ್​​ ಟ್ರೈನರ್

ಬಸ್ ಚಾಲಕ ಮತ್ತು ಕಂಡಕ್ಟರ್ ‘ಇವನನ್ನು ಠಾಣೆಗೆ ಕರೆದುಕೊಂಡು ಹೋಗೋಣ’ ಎಂದು ಹೇಳುತ್ತಿರುವುದು ವೀಡಿಯೋದಲ್ಲಿ ಕೇಳಿಸಬಹುದು. ಇದರ ವಿಡಿಯೋ ಟ್ವಿಟರ್​ನಲ್ಲಿ ವೈರಲ್ ಆಗುತ್ತಿದ್ದು, ಇದನ್ನು ಗಮನಿಸಿದ ನಗರ ಪೊಲೀಸರು, ರೀಟ್ವೀಟ್ ಮಾಡಿ, ನಿಖರವಾದ ಪ್ರದೇಶದ ಸ್ಥಳವನ್ನು ಒದಗಿಸುವಂತೆ ಮನವಿ ಮಾಡಿದ್ದಾರೆ. ಅದಾಗ್ಯೂ, ಈ ಘಟನೆ ಯಾವಾಗ ನಡೆದಿದ್ದು ಎಂಬುದರ ಬಗ್ಗೆ ನಿಖರವಾಗಿ ತಿಳಿದುಬಂದಿಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:32 pm, Mon, 24 July 23

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ