ಬಿಎಂಟಿಸಿ ಬಸ್ ಕಂಡಕ್ಟರ್-ಉತ್ತರ ಭಾರತೀಯ ವಲಸಿಗನ ನಡುವೆ ಕಪಾಳಮೋಕ್ಷ; ವಿಡಿಯೋ ವೈರಲ್

ಬಿಎಂಟಿಸಿ ಬಸ್​​ ಮತ್ತು ಉತ್ತರ ಭಾರತೀಯ ವಲಸಿಗನ ನಡುವೆ ನಡೆದ ಹೊಡೆದಾಟದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ಬಗ್ಗೆ ನಿಖರವಾದ ಮಾಹಿತಿ ನೀಡುವಂತೆ ಬೆಂಗಳೂರು ನಗರ ಪೊಲೀಸರು ಟ್ವೀಟ್ ಮಾಡಿದ್ದಾರೆ.

ಬಿಎಂಟಿಸಿ ಬಸ್ ಕಂಡಕ್ಟರ್-ಉತ್ತರ ಭಾರತೀಯ ವಲಸಿಗನ ನಡುವೆ ಕಪಾಳಮೋಕ್ಷ; ವಿಡಿಯೋ ವೈರಲ್
ಬಿಎಂಟಿಸಿ ಬಸ್ ಕಂಡಕ್ಟರ್ ಮತ್ತು ಉತ್ತರ ಭಾರತೀಯ ವಲಸಿಗನ ನಡುವೆ ಹೊಡೆದಾಟದ ವಿಡಿಯೋ ವೈರಲ್ (ಸಾಂದರ್ಭಿಕ ಚಿತ್ರ)
Follow us
| Updated By: ಆಯೇಷಾ ಬಾನು

Updated on:Jul 25, 2023 | 8:46 AM

ಬೆಂಗಳೂರು, ಜುಲೈ 24: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಬಸ್ ಕಂಡಕ್ಟರ್ ಮತ್ತು ಉತ್ತರ ಭಾರತೀಯ ವಲಸಿಗ ಎಂದು ಹೇಳಲಾಗುತ್ತಿರುವವನ ನಡುವೆ ನಡೆದ ಹೊಡೆದಾಟದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral Video) ಆಗುತ್ತಿದೆ. ಟಿಕೆಟ್ ಶುಲ್ಕ ನೀಡದೇ ಪ್ರಯಾಣಿಕ ಕಂಡಕ್ಟರ್​ ಜೊತೆ ಅಸಭ್ಯವಾಗಿ ಮಾತನಾಡಿದ್ದಾನೆ. ಈ ವಿಚಾರವಾಗಿ ಇಬ್ಬರ ನಡುವೆ ಜಗಳ ನಡೆದಿದೆ.

ರಾಮಯ್ಯ ಆಸ್ಪತ್ರೆ ಬಳಿ ಬಸ್ ಹತ್ತಿದ ಯುವಕ ಯಶವಂತಪುರಕ್ಕೆ ಹೋಗಲು ಟಿಕೆಟ್ ಕೇಳಿದ. ಆಗ ಬಸ್ ಕಂಡಕ್ಟರ್ ಮತ್ತಿಕೆರೆಗೆ ಟಿಕೆಟ್ ನೀಡಿದ್ರು. ಈ ವೇಳೆ ಮಹಿಳೆಯರಿಗೆ ಚಾರ್ಜ್ ಇಲ್ಲ, ನಮಗ್ಯಾಕೆ ಎಂದು ಯುವಕ ಕ್ಯಾತೆ ತೆಗೆದಿದ್ದಾನೆ. ಆಗ ಕಂಡಕ್ಟರ್ ಟಿಕೆಟ್ ಗೆ ಹಣ ನೀಡುವಂತೆ ಪಟ್ಟು ಹಿಡಿದಿದ್ದಾರೆ. ಈ ವೇಳೆ ಮಾತಿಗೆ ಮಾತು ಬೆಳೆದು ಕಂಡಕ್ಟರ್ ಮತ್ತು ಯುವಕ ಕೈ ಕೈ ಮಿಲಾಯಿಸಿದ್ದಾರೆ. ಇಬ್ಬರು ಮಹಿಳೆಯರು ತಡೆಯಲು ಯತ್ನಿಸಿದ್ದಾರೆ. ಆದರೂ ಇಬ್ಬರ ನಡುವೆ ಹೊಡೆದಾಟ ಮುಂದುವರಿಯುತ್ತದೆ. ಜಗಳ ತಾರಕಕ್ಕೇರುತ್ತಿದ್ದಂತೆ ಮಧ್ಯಪ್ರವೇಶಿಸಿದ ಚಾಲಕ, ಪ್ರಯಾಣಿಕನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಶುಲ್ಕ ಪಾವತಿಸುವಂತೆ ಹೇಳಿದ್ದಾರೆ.

ಇದನ್ನೂ ಓದಿ: Video Viral: 210 ಕೆಜಿ ಭಾರ ಎತ್ತುವ ಸಾಹಸ ಮಾಡಿ ಕುತ್ತಿಗೆ ಮುರಿತಕ್ಕೊಳಗಾಗಿ ಸಾವನ್ನಪ್ಪಿದ ಜಿಮ್​​ ಟ್ರೈನರ್

ಬಸ್ ಚಾಲಕ ಮತ್ತು ಕಂಡಕ್ಟರ್ ‘ಇವನನ್ನು ಠಾಣೆಗೆ ಕರೆದುಕೊಂಡು ಹೋಗೋಣ’ ಎಂದು ಹೇಳುತ್ತಿರುವುದು ವೀಡಿಯೋದಲ್ಲಿ ಕೇಳಿಸಬಹುದು. ಇದರ ವಿಡಿಯೋ ಟ್ವಿಟರ್​ನಲ್ಲಿ ವೈರಲ್ ಆಗುತ್ತಿದ್ದು, ಇದನ್ನು ಗಮನಿಸಿದ ನಗರ ಪೊಲೀಸರು, ರೀಟ್ವೀಟ್ ಮಾಡಿ, ನಿಖರವಾದ ಪ್ರದೇಶದ ಸ್ಥಳವನ್ನು ಒದಗಿಸುವಂತೆ ಮನವಿ ಮಾಡಿದ್ದಾರೆ. ಅದಾಗ್ಯೂ, ಈ ಘಟನೆ ಯಾವಾಗ ನಡೆದಿದ್ದು ಎಂಬುದರ ಬಗ್ಗೆ ನಿಖರವಾಗಿ ತಿಳಿದುಬಂದಿಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:32 pm, Mon, 24 July 23

ತಾಜಾ ಸುದ್ದಿ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ