AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಂಗೇರಿ ಲಾಡ್ಜ್​ನಲ್ಲಿ BMTC ಬಸ್ ಚಾಲಕನ ಶವ ಪತ್ತೆ, ಸಾವಿನ ಸುತ್ತ ಯುವತಿಯ ಕರಿನೆರಳು..!

ಲಾಡ್ಜ್​ನಲ್ಲಿ ಅನುಮಾನಾಸ್ಪದ ರೀತಿಯಲ್ಲಿ BMTC ಬಸ್ ಚಾಲಕ ಮೃತದೇಹ ಪತ್ತೆಯಾಗಿದ್ದು, ಈ ಸಾವಿನ ಹಿಂದೆ ಯುವತಿಯ ಕರಿನೆರಳು ಬಿದ್ದಿದೆ ಎನ್ನಲಾಗಿದೆ.

ಕೆಂಗೇರಿ ಲಾಡ್ಜ್​ನಲ್ಲಿ BMTC ಬಸ್ ಚಾಲಕನ ಶವ ಪತ್ತೆ, ಸಾವಿನ ಸುತ್ತ ಯುವತಿಯ ಕರಿನೆರಳು..!
ಲಾಡ್ಜ್​ನಲ್ಲಿ BMTC ಬಸ್ ಚಾಲಕನ ಶವ ಪತ್ತೆ
TV9 Web
| Edited By: |

Updated on: Jan 30, 2023 | 9:11 PM

Share

ಬೆಂಗಳೂರು: ಕೆಲಸಕ್ಕೆಂದು ಮನೆಯಿಂದ ಹೋಗಿದ್ದ BMTC ಬಸ್ ಚಾಲಕನ (Driver)ಮೃತ ದೇಹ ಇಂದು(ಜನವರಿ 30) ಬೆಂಗಳೂರಿನ ಲಾಡ್ಜ್​ವೊಂದರಲ್ಲಿ (Lodge)  ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ರಾಮನಗರ(Ramanagara) ಜಿಲ್ಲೆಯ ಚನ್ನಪಟ್ಟಣ ಮೂಲದ ಪುಟ್ಟೇಗೌಡ(28) ಬೆಂಗಳೂರಿನ ಕೆಂಗೇರಿಯ ಲಾಡ್ಜ್​ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. 6 ತಿಂಗಳಿಂದ ಬಿಎಂಟಿಸಿ ಚಾಲಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪುಟ್ಟೇಗೌಡ ಸಾವಿನ ಬಗ್ಗೆ ಸಂಬಂಧಿಕರು ಓರ್ವ ಯುವತಿ ಮೇಲೆ ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಸಾವಿನ ಸುತ್ತ ಅನುಮಾನಗಳ ಹುತ್ತ ಎದ್ದಿದೆ.

ಹಣ ಬಾಕಿ ಇರುವ ಹಿನ್ನೆಲೆಯಲ್ಲಿ ಲಾಡ್ಜ್​ ಸಿಬ್ಬಂದಿ ರೂಮ್​ಗೆ ಹೋಗಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಕೂಡಲೇ ಲಾಡ್ಜ್ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಪುಟ್ಟೇಗೌಡ ಓರ್ವ ಯುವತಿ ಜೊತೆ ಲಾಡ್ಜ್​ಗೆ ಹೋಗಿದ್ದು, ಬಳಿಕ ರೂಮ್​ನಲ್ಲಿ ಪುಟ್ಟೇಗೌಡರನ್ನ ಬಿಟ್ಟು ಯುವತಿ ಲಾಡ್ಜ್​ನಿಂದ ಹೊರ ಹೋಗಿದ್ದಾಳೆ ಎನ್ನಲಾಗಿದೆ. ಅಲ್ಲದೇ ಆಕೆ ಹೋಗುವಾಗ ರೂಮ್​ನ ಬಾಗಿಲು ಲಾಕ್ ಮಾಡಿದ್ದಾಳೆ. ಅಲ್ಲದೇ ಮೃತ ಪುಟ್ಟೇಗೌಡ ಹಣೆ ಮೇಲೆ ಗಾಯಗಳಾಗಿವೆ ಎಂದು ಪುಟ್ಟೇಗೌಡ ಸಂಬಂಧಿಕರು ಆ ಯುವತಿ ಮೇಲೆ ಅನುಮಾನ ವ್ಯಕ್ತಪಡಿಸಿದ್ದಾರೆ.. ಆದ್ರೆ, ಈ ಬಗ್ಗೆ ಪೊಲೀಸರು ಅಥವಾ ಲಾಡ್ಜ್​ ಸಿಬ್ಬಂದಿ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ.

ಇನ್ನು ಕಂಗೇರಿ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ನಡೆದಿದ್ದು, ಪೊಲೀಸರ ತನಿಖೆ ಬಳಿಕ ಸಾವಿನ ಸತ್ಯಾಸತ್ಯತೆ ಹೊರಬರಲಿದೆ.

Follow Us
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ