AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಂಗೇರಿ ಲಾಡ್ಜ್​ನಲ್ಲಿ BMTC ಬಸ್ ಚಾಲಕನ ಶವ ಪತ್ತೆ, ಸಾವಿನ ಸುತ್ತ ಯುವತಿಯ ಕರಿನೆರಳು..!

ಲಾಡ್ಜ್​ನಲ್ಲಿ ಅನುಮಾನಾಸ್ಪದ ರೀತಿಯಲ್ಲಿ BMTC ಬಸ್ ಚಾಲಕ ಮೃತದೇಹ ಪತ್ತೆಯಾಗಿದ್ದು, ಈ ಸಾವಿನ ಹಿಂದೆ ಯುವತಿಯ ಕರಿನೆರಳು ಬಿದ್ದಿದೆ ಎನ್ನಲಾಗಿದೆ.

ಕೆಂಗೇರಿ ಲಾಡ್ಜ್​ನಲ್ಲಿ BMTC ಬಸ್ ಚಾಲಕನ ಶವ ಪತ್ತೆ, ಸಾವಿನ ಸುತ್ತ ಯುವತಿಯ ಕರಿನೆರಳು..!
ಲಾಡ್ಜ್​ನಲ್ಲಿ BMTC ಬಸ್ ಚಾಲಕನ ಶವ ಪತ್ತೆ
TV9 Web
| Edited By: |

Updated on: Jan 30, 2023 | 9:11 PM

Share

ಬೆಂಗಳೂರು: ಕೆಲಸಕ್ಕೆಂದು ಮನೆಯಿಂದ ಹೋಗಿದ್ದ BMTC ಬಸ್ ಚಾಲಕನ (Driver)ಮೃತ ದೇಹ ಇಂದು(ಜನವರಿ 30) ಬೆಂಗಳೂರಿನ ಲಾಡ್ಜ್​ವೊಂದರಲ್ಲಿ (Lodge)  ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ರಾಮನಗರ(Ramanagara) ಜಿಲ್ಲೆಯ ಚನ್ನಪಟ್ಟಣ ಮೂಲದ ಪುಟ್ಟೇಗೌಡ(28) ಬೆಂಗಳೂರಿನ ಕೆಂಗೇರಿಯ ಲಾಡ್ಜ್​ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. 6 ತಿಂಗಳಿಂದ ಬಿಎಂಟಿಸಿ ಚಾಲಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪುಟ್ಟೇಗೌಡ ಸಾವಿನ ಬಗ್ಗೆ ಸಂಬಂಧಿಕರು ಓರ್ವ ಯುವತಿ ಮೇಲೆ ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಸಾವಿನ ಸುತ್ತ ಅನುಮಾನಗಳ ಹುತ್ತ ಎದ್ದಿದೆ.

ಹಣ ಬಾಕಿ ಇರುವ ಹಿನ್ನೆಲೆಯಲ್ಲಿ ಲಾಡ್ಜ್​ ಸಿಬ್ಬಂದಿ ರೂಮ್​ಗೆ ಹೋಗಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಕೂಡಲೇ ಲಾಡ್ಜ್ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಪುಟ್ಟೇಗೌಡ ಓರ್ವ ಯುವತಿ ಜೊತೆ ಲಾಡ್ಜ್​ಗೆ ಹೋಗಿದ್ದು, ಬಳಿಕ ರೂಮ್​ನಲ್ಲಿ ಪುಟ್ಟೇಗೌಡರನ್ನ ಬಿಟ್ಟು ಯುವತಿ ಲಾಡ್ಜ್​ನಿಂದ ಹೊರ ಹೋಗಿದ್ದಾಳೆ ಎನ್ನಲಾಗಿದೆ. ಅಲ್ಲದೇ ಆಕೆ ಹೋಗುವಾಗ ರೂಮ್​ನ ಬಾಗಿಲು ಲಾಕ್ ಮಾಡಿದ್ದಾಳೆ. ಅಲ್ಲದೇ ಮೃತ ಪುಟ್ಟೇಗೌಡ ಹಣೆ ಮೇಲೆ ಗಾಯಗಳಾಗಿವೆ ಎಂದು ಪುಟ್ಟೇಗೌಡ ಸಂಬಂಧಿಕರು ಆ ಯುವತಿ ಮೇಲೆ ಅನುಮಾನ ವ್ಯಕ್ತಪಡಿಸಿದ್ದಾರೆ.. ಆದ್ರೆ, ಈ ಬಗ್ಗೆ ಪೊಲೀಸರು ಅಥವಾ ಲಾಡ್ಜ್​ ಸಿಬ್ಬಂದಿ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ.

ಇನ್ನು ಕಂಗೇರಿ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ನಡೆದಿದ್ದು, ಪೊಲೀಸರ ತನಿಖೆ ಬಳಿಕ ಸಾವಿನ ಸತ್ಯಾಸತ್ಯತೆ ಹೊರಬರಲಿದೆ.

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು