AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಂಗೇರಿ ಲಾಡ್ಜ್​ನಲ್ಲಿ BMTC ಬಸ್ ಚಾಲಕನ ಶವ ಪತ್ತೆ, ಸಾವಿನ ಸುತ್ತ ಯುವತಿಯ ಕರಿನೆರಳು..!

ಲಾಡ್ಜ್​ನಲ್ಲಿ ಅನುಮಾನಾಸ್ಪದ ರೀತಿಯಲ್ಲಿ BMTC ಬಸ್ ಚಾಲಕ ಮೃತದೇಹ ಪತ್ತೆಯಾಗಿದ್ದು, ಈ ಸಾವಿನ ಹಿಂದೆ ಯುವತಿಯ ಕರಿನೆರಳು ಬಿದ್ದಿದೆ ಎನ್ನಲಾಗಿದೆ.

ಕೆಂಗೇರಿ ಲಾಡ್ಜ್​ನಲ್ಲಿ BMTC ಬಸ್ ಚಾಲಕನ ಶವ ಪತ್ತೆ, ಸಾವಿನ ಸುತ್ತ ಯುವತಿಯ ಕರಿನೆರಳು..!
ಲಾಡ್ಜ್​ನಲ್ಲಿ BMTC ಬಸ್ ಚಾಲಕನ ಶವ ಪತ್ತೆ
TV9 Web
| Edited By: |

Updated on: Jan 30, 2023 | 9:11 PM

Share

ಬೆಂಗಳೂರು: ಕೆಲಸಕ್ಕೆಂದು ಮನೆಯಿಂದ ಹೋಗಿದ್ದ BMTC ಬಸ್ ಚಾಲಕನ (Driver)ಮೃತ ದೇಹ ಇಂದು(ಜನವರಿ 30) ಬೆಂಗಳೂರಿನ ಲಾಡ್ಜ್​ವೊಂದರಲ್ಲಿ (Lodge)  ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ರಾಮನಗರ(Ramanagara) ಜಿಲ್ಲೆಯ ಚನ್ನಪಟ್ಟಣ ಮೂಲದ ಪುಟ್ಟೇಗೌಡ(28) ಬೆಂಗಳೂರಿನ ಕೆಂಗೇರಿಯ ಲಾಡ್ಜ್​ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. 6 ತಿಂಗಳಿಂದ ಬಿಎಂಟಿಸಿ ಚಾಲಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪುಟ್ಟೇಗೌಡ ಸಾವಿನ ಬಗ್ಗೆ ಸಂಬಂಧಿಕರು ಓರ್ವ ಯುವತಿ ಮೇಲೆ ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಸಾವಿನ ಸುತ್ತ ಅನುಮಾನಗಳ ಹುತ್ತ ಎದ್ದಿದೆ.

ಹಣ ಬಾಕಿ ಇರುವ ಹಿನ್ನೆಲೆಯಲ್ಲಿ ಲಾಡ್ಜ್​ ಸಿಬ್ಬಂದಿ ರೂಮ್​ಗೆ ಹೋಗಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಕೂಡಲೇ ಲಾಡ್ಜ್ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಪುಟ್ಟೇಗೌಡ ಓರ್ವ ಯುವತಿ ಜೊತೆ ಲಾಡ್ಜ್​ಗೆ ಹೋಗಿದ್ದು, ಬಳಿಕ ರೂಮ್​ನಲ್ಲಿ ಪುಟ್ಟೇಗೌಡರನ್ನ ಬಿಟ್ಟು ಯುವತಿ ಲಾಡ್ಜ್​ನಿಂದ ಹೊರ ಹೋಗಿದ್ದಾಳೆ ಎನ್ನಲಾಗಿದೆ. ಅಲ್ಲದೇ ಆಕೆ ಹೋಗುವಾಗ ರೂಮ್​ನ ಬಾಗಿಲು ಲಾಕ್ ಮಾಡಿದ್ದಾಳೆ. ಅಲ್ಲದೇ ಮೃತ ಪುಟ್ಟೇಗೌಡ ಹಣೆ ಮೇಲೆ ಗಾಯಗಳಾಗಿವೆ ಎಂದು ಪುಟ್ಟೇಗೌಡ ಸಂಬಂಧಿಕರು ಆ ಯುವತಿ ಮೇಲೆ ಅನುಮಾನ ವ್ಯಕ್ತಪಡಿಸಿದ್ದಾರೆ.. ಆದ್ರೆ, ಈ ಬಗ್ಗೆ ಪೊಲೀಸರು ಅಥವಾ ಲಾಡ್ಜ್​ ಸಿಬ್ಬಂದಿ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ.

ಇನ್ನು ಕಂಗೇರಿ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ನಡೆದಿದ್ದು, ಪೊಲೀಸರ ತನಿಖೆ ಬಳಿಕ ಸಾವಿನ ಸತ್ಯಾಸತ್ಯತೆ ಹೊರಬರಲಿದೆ.

ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ