AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಂಗೇರಿ ಲಾಡ್ಜ್​ನಲ್ಲಿ BMTC ಬಸ್ ಚಾಲಕನ ಶವ ಪತ್ತೆ, ಸಾವಿನ ಸುತ್ತ ಯುವತಿಯ ಕರಿನೆರಳು..!

ಲಾಡ್ಜ್​ನಲ್ಲಿ ಅನುಮಾನಾಸ್ಪದ ರೀತಿಯಲ್ಲಿ BMTC ಬಸ್ ಚಾಲಕ ಮೃತದೇಹ ಪತ್ತೆಯಾಗಿದ್ದು, ಈ ಸಾವಿನ ಹಿಂದೆ ಯುವತಿಯ ಕರಿನೆರಳು ಬಿದ್ದಿದೆ ಎನ್ನಲಾಗಿದೆ.

ಕೆಂಗೇರಿ ಲಾಡ್ಜ್​ನಲ್ಲಿ BMTC ಬಸ್ ಚಾಲಕನ ಶವ ಪತ್ತೆ, ಸಾವಿನ ಸುತ್ತ ಯುವತಿಯ ಕರಿನೆರಳು..!
ಲಾಡ್ಜ್​ನಲ್ಲಿ BMTC ಬಸ್ ಚಾಲಕನ ಶವ ಪತ್ತೆ
TV9 Web
| Edited By: |

Updated on: Jan 30, 2023 | 9:11 PM

Share

ಬೆಂಗಳೂರು: ಕೆಲಸಕ್ಕೆಂದು ಮನೆಯಿಂದ ಹೋಗಿದ್ದ BMTC ಬಸ್ ಚಾಲಕನ (Driver)ಮೃತ ದೇಹ ಇಂದು(ಜನವರಿ 30) ಬೆಂಗಳೂರಿನ ಲಾಡ್ಜ್​ವೊಂದರಲ್ಲಿ (Lodge)  ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ರಾಮನಗರ(Ramanagara) ಜಿಲ್ಲೆಯ ಚನ್ನಪಟ್ಟಣ ಮೂಲದ ಪುಟ್ಟೇಗೌಡ(28) ಬೆಂಗಳೂರಿನ ಕೆಂಗೇರಿಯ ಲಾಡ್ಜ್​ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. 6 ತಿಂಗಳಿಂದ ಬಿಎಂಟಿಸಿ ಚಾಲಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪುಟ್ಟೇಗೌಡ ಸಾವಿನ ಬಗ್ಗೆ ಸಂಬಂಧಿಕರು ಓರ್ವ ಯುವತಿ ಮೇಲೆ ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಸಾವಿನ ಸುತ್ತ ಅನುಮಾನಗಳ ಹುತ್ತ ಎದ್ದಿದೆ.

ಹಣ ಬಾಕಿ ಇರುವ ಹಿನ್ನೆಲೆಯಲ್ಲಿ ಲಾಡ್ಜ್​ ಸಿಬ್ಬಂದಿ ರೂಮ್​ಗೆ ಹೋಗಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಕೂಡಲೇ ಲಾಡ್ಜ್ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಪುಟ್ಟೇಗೌಡ ಓರ್ವ ಯುವತಿ ಜೊತೆ ಲಾಡ್ಜ್​ಗೆ ಹೋಗಿದ್ದು, ಬಳಿಕ ರೂಮ್​ನಲ್ಲಿ ಪುಟ್ಟೇಗೌಡರನ್ನ ಬಿಟ್ಟು ಯುವತಿ ಲಾಡ್ಜ್​ನಿಂದ ಹೊರ ಹೋಗಿದ್ದಾಳೆ ಎನ್ನಲಾಗಿದೆ. ಅಲ್ಲದೇ ಆಕೆ ಹೋಗುವಾಗ ರೂಮ್​ನ ಬಾಗಿಲು ಲಾಕ್ ಮಾಡಿದ್ದಾಳೆ. ಅಲ್ಲದೇ ಮೃತ ಪುಟ್ಟೇಗೌಡ ಹಣೆ ಮೇಲೆ ಗಾಯಗಳಾಗಿವೆ ಎಂದು ಪುಟ್ಟೇಗೌಡ ಸಂಬಂಧಿಕರು ಆ ಯುವತಿ ಮೇಲೆ ಅನುಮಾನ ವ್ಯಕ್ತಪಡಿಸಿದ್ದಾರೆ.. ಆದ್ರೆ, ಈ ಬಗ್ಗೆ ಪೊಲೀಸರು ಅಥವಾ ಲಾಡ್ಜ್​ ಸಿಬ್ಬಂದಿ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ.

ಇನ್ನು ಕಂಗೇರಿ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ನಡೆದಿದ್ದು, ಪೊಲೀಸರ ತನಿಖೆ ಬಳಿಕ ಸಾವಿನ ಸತ್ಯಾಸತ್ಯತೆ ಹೊರಬರಲಿದೆ.

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್