Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಂಗೇರಿ ಲಾಡ್ಜ್​ನಲ್ಲಿ BMTC ಬಸ್ ಚಾಲಕನ ಶವ ಪತ್ತೆ, ಸಾವಿನ ಸುತ್ತ ಯುವತಿಯ ಕರಿನೆರಳು..!

ಲಾಡ್ಜ್​ನಲ್ಲಿ ಅನುಮಾನಾಸ್ಪದ ರೀತಿಯಲ್ಲಿ BMTC ಬಸ್ ಚಾಲಕ ಮೃತದೇಹ ಪತ್ತೆಯಾಗಿದ್ದು, ಈ ಸಾವಿನ ಹಿಂದೆ ಯುವತಿಯ ಕರಿನೆರಳು ಬಿದ್ದಿದೆ ಎನ್ನಲಾಗಿದೆ.

ಕೆಂಗೇರಿ ಲಾಡ್ಜ್​ನಲ್ಲಿ BMTC ಬಸ್ ಚಾಲಕನ ಶವ ಪತ್ತೆ, ಸಾವಿನ ಸುತ್ತ ಯುವತಿಯ ಕರಿನೆರಳು..!
ಲಾಡ್ಜ್​ನಲ್ಲಿ BMTC ಬಸ್ ಚಾಲಕನ ಶವ ಪತ್ತೆ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Jan 30, 2023 | 9:11 PM

ಬೆಂಗಳೂರು: ಕೆಲಸಕ್ಕೆಂದು ಮನೆಯಿಂದ ಹೋಗಿದ್ದ BMTC ಬಸ್ ಚಾಲಕನ (Driver)ಮೃತ ದೇಹ ಇಂದು(ಜನವರಿ 30) ಬೆಂಗಳೂರಿನ ಲಾಡ್ಜ್​ವೊಂದರಲ್ಲಿ (Lodge)  ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ರಾಮನಗರ(Ramanagara) ಜಿಲ್ಲೆಯ ಚನ್ನಪಟ್ಟಣ ಮೂಲದ ಪುಟ್ಟೇಗೌಡ(28) ಬೆಂಗಳೂರಿನ ಕೆಂಗೇರಿಯ ಲಾಡ್ಜ್​ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. 6 ತಿಂಗಳಿಂದ ಬಿಎಂಟಿಸಿ ಚಾಲಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪುಟ್ಟೇಗೌಡ ಸಾವಿನ ಬಗ್ಗೆ ಸಂಬಂಧಿಕರು ಓರ್ವ ಯುವತಿ ಮೇಲೆ ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಸಾವಿನ ಸುತ್ತ ಅನುಮಾನಗಳ ಹುತ್ತ ಎದ್ದಿದೆ.

ಹಣ ಬಾಕಿ ಇರುವ ಹಿನ್ನೆಲೆಯಲ್ಲಿ ಲಾಡ್ಜ್​ ಸಿಬ್ಬಂದಿ ರೂಮ್​ಗೆ ಹೋಗಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಕೂಡಲೇ ಲಾಡ್ಜ್ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಪುಟ್ಟೇಗೌಡ ಓರ್ವ ಯುವತಿ ಜೊತೆ ಲಾಡ್ಜ್​ಗೆ ಹೋಗಿದ್ದು, ಬಳಿಕ ರೂಮ್​ನಲ್ಲಿ ಪುಟ್ಟೇಗೌಡರನ್ನ ಬಿಟ್ಟು ಯುವತಿ ಲಾಡ್ಜ್​ನಿಂದ ಹೊರ ಹೋಗಿದ್ದಾಳೆ ಎನ್ನಲಾಗಿದೆ. ಅಲ್ಲದೇ ಆಕೆ ಹೋಗುವಾಗ ರೂಮ್​ನ ಬಾಗಿಲು ಲಾಕ್ ಮಾಡಿದ್ದಾಳೆ. ಅಲ್ಲದೇ ಮೃತ ಪುಟ್ಟೇಗೌಡ ಹಣೆ ಮೇಲೆ ಗಾಯಗಳಾಗಿವೆ ಎಂದು ಪುಟ್ಟೇಗೌಡ ಸಂಬಂಧಿಕರು ಆ ಯುವತಿ ಮೇಲೆ ಅನುಮಾನ ವ್ಯಕ್ತಪಡಿಸಿದ್ದಾರೆ.. ಆದ್ರೆ, ಈ ಬಗ್ಗೆ ಪೊಲೀಸರು ಅಥವಾ ಲಾಡ್ಜ್​ ಸಿಬ್ಬಂದಿ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ.

ಇನ್ನು ಕಂಗೇರಿ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ನಡೆದಿದ್ದು, ಪೊಲೀಸರ ತನಿಖೆ ಬಳಿಕ ಸಾವಿನ ಸತ್ಯಾಸತ್ಯತೆ ಹೊರಬರಲಿದೆ.

ಅಣ್ಣಮ್ಮ ದೇವಾಲಯಕ್ಕೆ ಭೇಟಿ ನೀಡಿದ್ದೇಕೆ ವಿಜಯಲಕ್ಷ್ಮಿ, ಇಲ್ಲಿದೆ ಮಾಹಿತಿ
ಅಣ್ಣಮ್ಮ ದೇವಾಲಯಕ್ಕೆ ಭೇಟಿ ನೀಡಿದ್ದೇಕೆ ವಿಜಯಲಕ್ಷ್ಮಿ, ಇಲ್ಲಿದೆ ಮಾಹಿತಿ
ಗುತ್ತಿಗೆದಾರರು ಈ ಸರ್ಕಾರವನ್ನೂ ಅಧಿಕಾರದಿಂದ ಕೆಳಗಿಳಿಸಲಿದ್ದಾರೆ: ಸೋಮಣ್ಣ
ಗುತ್ತಿಗೆದಾರರು ಈ ಸರ್ಕಾರವನ್ನೂ ಅಧಿಕಾರದಿಂದ ಕೆಳಗಿಳಿಸಲಿದ್ದಾರೆ: ಸೋಮಣ್ಣ
ಪುಣ್ಯಸ್ನಾನ ಮಾಡಿ ಸಂಗಮ ತೀರದಲ್ಲೇ ಬಟ್ಟೆ ಬಿಸಾಡಿ ಹೋಗುತ್ತಿರುವ ಜನ
ಪುಣ್ಯಸ್ನಾನ ಮಾಡಿ ಸಂಗಮ ತೀರದಲ್ಲೇ ಬಟ್ಟೆ ಬಿಸಾಡಿ ಹೋಗುತ್ತಿರುವ ಜನ
ಎಲೆಕೋಸು ಬೆಲೆ ದಿಢೀರ್​​ ಕುಸಿತ: ಕುರಿಗಳನ್ನ ಬಿಟ್ಟು ಬೆಳೆ ನಾಶ ಪಡಿಸಿದ ರೈತ
ಎಲೆಕೋಸು ಬೆಲೆ ದಿಢೀರ್​​ ಕುಸಿತ: ಕುರಿಗಳನ್ನ ಬಿಟ್ಟು ಬೆಳೆ ನಾಶ ಪಡಿಸಿದ ರೈತ
ಸಂಸದರಾಗಿ 50ನೇ ಬಾರಿಗೆ ವಾರಾಣಸಿಗೆ ಪ್ರಧಾನಿ ಮೋದಿ ಭೇಟಿ
ಸಂಸದರಾಗಿ 50ನೇ ಬಾರಿಗೆ ವಾರಾಣಸಿಗೆ ಪ್ರಧಾನಿ ಮೋದಿ ಭೇಟಿ
ಅಂಬೇಡ್ಕರ್ ಎರಡು ಬಾರಿ ಚುನಾವಣೆಯಲ್ಲಿ ಸೋಲುವಂತೆ ಮಾಡಿದ್ದು ನೆಹರೂ: ಕಾರಜೋಳ
ಅಂಬೇಡ್ಕರ್ ಎರಡು ಬಾರಿ ಚುನಾವಣೆಯಲ್ಲಿ ಸೋಲುವಂತೆ ಮಾಡಿದ್ದು ನೆಹರೂ: ಕಾರಜೋಳ
ಕರಡಿಗಳಲ್ಲಿ ಮಾನವರ ಮೇಲೆ ಹಲ್ಲೆ ಮಾಡುವ ಪ್ರವೃತ್ತಿ, ಕೆಲವೊಮ್ಮೆ ಮಾರಣಾಂತಿಕ
ಕರಡಿಗಳಲ್ಲಿ ಮಾನವರ ಮೇಲೆ ಹಲ್ಲೆ ಮಾಡುವ ಪ್ರವೃತ್ತಿ, ಕೆಲವೊಮ್ಮೆ ಮಾರಣಾಂತಿಕ
ಒಂದೇ ಸ್ಟ್ರಾಟಿಜಿ ಎಲ್ಲ ಪಂದ್ಯಗಳಿಗೆ ನಡೆಯಲ್ಲ, ಬದಲಾಯಿಸಬೇಕು: ಅಭಿಮಾನಿ
ಒಂದೇ ಸ್ಟ್ರಾಟಿಜಿ ಎಲ್ಲ ಪಂದ್ಯಗಳಿಗೆ ನಡೆಯಲ್ಲ, ಬದಲಾಯಿಸಬೇಕು: ಅಭಿಮಾನಿ
ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆಯೇ ಮಳೆ ಆರ್ಭಟ
ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆಯೇ ಮಳೆ ಆರ್ಭಟ
‘ನಾನು ಇಲ್ಲಿಯವನು, ಬೆಂಗಳೂರು ಹೃದಯದಲ್ಲಿದೆ’; ಕನ್ನಡಿಗ ಕೆಎಲ್ ರಾಹುಲ್
‘ನಾನು ಇಲ್ಲಿಯವನು, ಬೆಂಗಳೂರು ಹೃದಯದಲ್ಲಿದೆ’; ಕನ್ನಡಿಗ ಕೆಎಲ್ ರಾಹುಲ್