AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಂಗೇರಿ ಲಾಡ್ಜ್​ನಲ್ಲಿ BMTC ಬಸ್ ಚಾಲಕನ ಶವ ಪತ್ತೆ, ಸಾವಿನ ಸುತ್ತ ಯುವತಿಯ ಕರಿನೆರಳು..!

ಲಾಡ್ಜ್​ನಲ್ಲಿ ಅನುಮಾನಾಸ್ಪದ ರೀತಿಯಲ್ಲಿ BMTC ಬಸ್ ಚಾಲಕ ಮೃತದೇಹ ಪತ್ತೆಯಾಗಿದ್ದು, ಈ ಸಾವಿನ ಹಿಂದೆ ಯುವತಿಯ ಕರಿನೆರಳು ಬಿದ್ದಿದೆ ಎನ್ನಲಾಗಿದೆ.

ಕೆಂಗೇರಿ ಲಾಡ್ಜ್​ನಲ್ಲಿ BMTC ಬಸ್ ಚಾಲಕನ ಶವ ಪತ್ತೆ, ಸಾವಿನ ಸುತ್ತ ಯುವತಿಯ ಕರಿನೆರಳು..!
ಲಾಡ್ಜ್​ನಲ್ಲಿ BMTC ಬಸ್ ಚಾಲಕನ ಶವ ಪತ್ತೆ
TV9 Web
| Edited By: |

Updated on: Jan 30, 2023 | 9:11 PM

Share

ಬೆಂಗಳೂರು: ಕೆಲಸಕ್ಕೆಂದು ಮನೆಯಿಂದ ಹೋಗಿದ್ದ BMTC ಬಸ್ ಚಾಲಕನ (Driver)ಮೃತ ದೇಹ ಇಂದು(ಜನವರಿ 30) ಬೆಂಗಳೂರಿನ ಲಾಡ್ಜ್​ವೊಂದರಲ್ಲಿ (Lodge)  ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ರಾಮನಗರ(Ramanagara) ಜಿಲ್ಲೆಯ ಚನ್ನಪಟ್ಟಣ ಮೂಲದ ಪುಟ್ಟೇಗೌಡ(28) ಬೆಂಗಳೂರಿನ ಕೆಂಗೇರಿಯ ಲಾಡ್ಜ್​ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. 6 ತಿಂಗಳಿಂದ ಬಿಎಂಟಿಸಿ ಚಾಲಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪುಟ್ಟೇಗೌಡ ಸಾವಿನ ಬಗ್ಗೆ ಸಂಬಂಧಿಕರು ಓರ್ವ ಯುವತಿ ಮೇಲೆ ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಸಾವಿನ ಸುತ್ತ ಅನುಮಾನಗಳ ಹುತ್ತ ಎದ್ದಿದೆ.

ಹಣ ಬಾಕಿ ಇರುವ ಹಿನ್ನೆಲೆಯಲ್ಲಿ ಲಾಡ್ಜ್​ ಸಿಬ್ಬಂದಿ ರೂಮ್​ಗೆ ಹೋಗಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಕೂಡಲೇ ಲಾಡ್ಜ್ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಪುಟ್ಟೇಗೌಡ ಓರ್ವ ಯುವತಿ ಜೊತೆ ಲಾಡ್ಜ್​ಗೆ ಹೋಗಿದ್ದು, ಬಳಿಕ ರೂಮ್​ನಲ್ಲಿ ಪುಟ್ಟೇಗೌಡರನ್ನ ಬಿಟ್ಟು ಯುವತಿ ಲಾಡ್ಜ್​ನಿಂದ ಹೊರ ಹೋಗಿದ್ದಾಳೆ ಎನ್ನಲಾಗಿದೆ. ಅಲ್ಲದೇ ಆಕೆ ಹೋಗುವಾಗ ರೂಮ್​ನ ಬಾಗಿಲು ಲಾಕ್ ಮಾಡಿದ್ದಾಳೆ. ಅಲ್ಲದೇ ಮೃತ ಪುಟ್ಟೇಗೌಡ ಹಣೆ ಮೇಲೆ ಗಾಯಗಳಾಗಿವೆ ಎಂದು ಪುಟ್ಟೇಗೌಡ ಸಂಬಂಧಿಕರು ಆ ಯುವತಿ ಮೇಲೆ ಅನುಮಾನ ವ್ಯಕ್ತಪಡಿಸಿದ್ದಾರೆ.. ಆದ್ರೆ, ಈ ಬಗ್ಗೆ ಪೊಲೀಸರು ಅಥವಾ ಲಾಡ್ಜ್​ ಸಿಬ್ಬಂದಿ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ.

ಇನ್ನು ಕಂಗೇರಿ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ನಡೆದಿದ್ದು, ಪೊಲೀಸರ ತನಿಖೆ ಬಳಿಕ ಸಾವಿನ ಸತ್ಯಾಸತ್ಯತೆ ಹೊರಬರಲಿದೆ.

Follow Us
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK