AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಂಗೇರಿ ಲಾಡ್ಜ್​ನಲ್ಲಿ BMTC ಬಸ್ ಚಾಲಕನ ಶವ ಪತ್ತೆ, ಸಾವಿನ ಸುತ್ತ ಯುವತಿಯ ಕರಿನೆರಳು..!

ಲಾಡ್ಜ್​ನಲ್ಲಿ ಅನುಮಾನಾಸ್ಪದ ರೀತಿಯಲ್ಲಿ BMTC ಬಸ್ ಚಾಲಕ ಮೃತದೇಹ ಪತ್ತೆಯಾಗಿದ್ದು, ಈ ಸಾವಿನ ಹಿಂದೆ ಯುವತಿಯ ಕರಿನೆರಳು ಬಿದ್ದಿದೆ ಎನ್ನಲಾಗಿದೆ.

ಕೆಂಗೇರಿ ಲಾಡ್ಜ್​ನಲ್ಲಿ BMTC ಬಸ್ ಚಾಲಕನ ಶವ ಪತ್ತೆ, ಸಾವಿನ ಸುತ್ತ ಯುವತಿಯ ಕರಿನೆರಳು..!
ಲಾಡ್ಜ್​ನಲ್ಲಿ BMTC ಬಸ್ ಚಾಲಕನ ಶವ ಪತ್ತೆ
TV9 Web
| Edited By: |

Updated on: Jan 30, 2023 | 9:11 PM

Share

ಬೆಂಗಳೂರು: ಕೆಲಸಕ್ಕೆಂದು ಮನೆಯಿಂದ ಹೋಗಿದ್ದ BMTC ಬಸ್ ಚಾಲಕನ (Driver)ಮೃತ ದೇಹ ಇಂದು(ಜನವರಿ 30) ಬೆಂಗಳೂರಿನ ಲಾಡ್ಜ್​ವೊಂದರಲ್ಲಿ (Lodge)  ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ರಾಮನಗರ(Ramanagara) ಜಿಲ್ಲೆಯ ಚನ್ನಪಟ್ಟಣ ಮೂಲದ ಪುಟ್ಟೇಗೌಡ(28) ಬೆಂಗಳೂರಿನ ಕೆಂಗೇರಿಯ ಲಾಡ್ಜ್​ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. 6 ತಿಂಗಳಿಂದ ಬಿಎಂಟಿಸಿ ಚಾಲಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪುಟ್ಟೇಗೌಡ ಸಾವಿನ ಬಗ್ಗೆ ಸಂಬಂಧಿಕರು ಓರ್ವ ಯುವತಿ ಮೇಲೆ ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಸಾವಿನ ಸುತ್ತ ಅನುಮಾನಗಳ ಹುತ್ತ ಎದ್ದಿದೆ.

ಹಣ ಬಾಕಿ ಇರುವ ಹಿನ್ನೆಲೆಯಲ್ಲಿ ಲಾಡ್ಜ್​ ಸಿಬ್ಬಂದಿ ರೂಮ್​ಗೆ ಹೋಗಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಕೂಡಲೇ ಲಾಡ್ಜ್ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಪುಟ್ಟೇಗೌಡ ಓರ್ವ ಯುವತಿ ಜೊತೆ ಲಾಡ್ಜ್​ಗೆ ಹೋಗಿದ್ದು, ಬಳಿಕ ರೂಮ್​ನಲ್ಲಿ ಪುಟ್ಟೇಗೌಡರನ್ನ ಬಿಟ್ಟು ಯುವತಿ ಲಾಡ್ಜ್​ನಿಂದ ಹೊರ ಹೋಗಿದ್ದಾಳೆ ಎನ್ನಲಾಗಿದೆ. ಅಲ್ಲದೇ ಆಕೆ ಹೋಗುವಾಗ ರೂಮ್​ನ ಬಾಗಿಲು ಲಾಕ್ ಮಾಡಿದ್ದಾಳೆ. ಅಲ್ಲದೇ ಮೃತ ಪುಟ್ಟೇಗೌಡ ಹಣೆ ಮೇಲೆ ಗಾಯಗಳಾಗಿವೆ ಎಂದು ಪುಟ್ಟೇಗೌಡ ಸಂಬಂಧಿಕರು ಆ ಯುವತಿ ಮೇಲೆ ಅನುಮಾನ ವ್ಯಕ್ತಪಡಿಸಿದ್ದಾರೆ.. ಆದ್ರೆ, ಈ ಬಗ್ಗೆ ಪೊಲೀಸರು ಅಥವಾ ಲಾಡ್ಜ್​ ಸಿಬ್ಬಂದಿ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ.

ಇನ್ನು ಕಂಗೇರಿ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ನಡೆದಿದ್ದು, ಪೊಲೀಸರ ತನಿಖೆ ಬಳಿಕ ಸಾವಿನ ಸತ್ಯಾಸತ್ಯತೆ ಹೊರಬರಲಿದೆ.

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!