AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BMTC bus fire: ಮಕ್ಕಳ ಕೂಟ ಬಳಿ ನಡು ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಬಿಎಂಟಿಸಿ ಬಸ್

K.R. ಮಾರ್ಕೆಟ್ ಕಡೆ ತೆರಳುತ್ತಿದ್ದ ಬಿಎಂಟಿಸಿ ಬಸ್‌ನಲ್ಲಿ ಮಕ್ಕಳಕೂಟ ಬಳಿ ಬೆಂಕಿ ಕಾಣಿಸಿಕೊಂಡಿತ್ತು.

BMTC bus fire: ಮಕ್ಕಳ ಕೂಟ ಬಳಿ ನಡು ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಬಿಎಂಟಿಸಿ ಬಸ್
K.R. ಮಾರ್ಕೆಟ್ ಕಡೆ ತೆರಳುತ್ತಿದ್ದ ಬಿಎಂಟಿಸಿ ಬಸ್‌ನಲ್ಲಿ ಮಕ್ಕಳಕೂಟ ಬಳಿ ಬೆಂಕಿ ಕಾಣಿಸಿಕೊಂಡಿತ್ತು.
TV9 Web
| Updated By: ಸಾಧು ಶ್ರೀನಾಥ್​|

Updated on:Jan 21, 2022 | 12:40 PM

Share

ಬೆಂಗಳೂರು: ಬಿಎಂಟಿಸಿ ಬಸ್ಸೊಂದು ನಡು ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಘಟನೆ ನಡೆದಿದೆ. ಬೆಂಗಳೂರಿನ ಚಾಮರಾಜಪೇಟೆಯ ಮಕ್ಕಳಕೂಟ ಬಳಿ ಈ ಘಟನೆ ನಡೆದಿದೆ. ಇದರಿಂದ ದೀಪಾಂಜಲಿನಗರ ಡಿಪೋಗೆ ಸೇರಿದ ಬಸ್ ಸುಟ್ಟು ಕರಕಲಾಗಿದೆ. K.R. ಮಾರ್ಕೆಟ್ ಕಡೆ ತೆರಳುತ್ತಿದ್ದ ಬಿಎಂಟಿಸಿ ಬಸ್‌ನಲ್ಲಿ ಮಕ್ಕಳಕೂಟ ಬಳಿ ಬೆಂಕಿ ಕಾಣಿಸಿಕೊಂಡಿತ್ತು. ಚಾಮರಾಜಪೇಟೆಯಲ್ಲಿ (makkala kuta, chamrajpet) ಬಿಎಂಟಿಸಿ ಬಸ್ ಹೊತ್ತಿ ಉರಿದ ಪ್ರಕರಣದಲ್ಲಿ ಅದೃಷ್ಟವಶಾತ್ ಪ್ರಯಾಣಿಕರು ಪಾರಾಗಿದ್ದಾರೆ. ಇಂಜಿನಲ್ಲಿ ಹೊಗೆ ಕಾಣಿಸಿಕೊಳ್ತಿದ್ದಂತೆ ಬಸ್ ನಿಂದ ಪ್ರಯಾಣಿಕರು ಲಘುಬಗೆಯಿಂದ ಕೆಳಗಿಳಿದು ಬಚಾವಾಗಿದ್ದಾರೆ (BMTC bus fire).

ಚಲಿಸುವ ವೇಳೆ ಬಸ್ ನಲ್ಲಿ ಮೊದಲು ಹೊಗೆ ಕಾಣಿಸಿಕೊಂಡಿದೆ. ಡ್ರೈವರ್ ಕೂಡಲೇ ಹೊಗೆ, ಬೆಂಕಿ ಎಂದು ಕಿರುಚಿದ್ದಾರೆ. ಈ ವೇಳೆ ಬಸ್ ನಿಂದ ಕೆಳಗಿಳಿದ ಡ್ರೈವರ್ ಹಾಗೂ ಕಂಡಕ್ಟರ್ ಕೂಡಲೇ ಪ್ರಯಾಣಿಕರನ್ನು ಕೆಳಗೆ ಇಳಿಯಲು ನೆರವಾಗಿದ್ದಾರೆ. ನೋಡನೋಡುತ್ತಿದ್ದಂತೆ ಬಿಎಂಟಿಸಿ ಬಸ್ ಬೆಂಕಿಯಿಂದ ಹೊತ್ತಿ ಉರಿದಿದೆ.

ಸುಮಾರು 40 ಪ್ರಯಾಣಿಕರಿದ್ದ KA 57 F 1592 ನಂಬರ್ ನ ಈ ನತದೃಷ್ಟ ಬಿಎಂಟಿಸಿ ಬಸ್ ಹೊಸಕೆರೆಹಳ್ಳಿ ಇಂದ ಕೆ‌.ಆರ್. ಮಾರುಕಟ್ಟೆಗೆ ಬರುತ್ತಿತ್ತು. ಶಾರ್ಟ್​ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ. ಘಟನೆ ನಡೆಯುತ್ತಿದ್ದಂತೆ ಚಾಲಕ ಅಗ್ನಿಶಾಮಕ ದಳಕ್ಕೆ ಕರೆ ಮಾಡಿದರೆ, ಪ್ರಯಾಣಿಕರನ್ನ ಕೆಳಗಿಳಿಸಿ ಬೇರೆ ಬಸ್ ವ್ಯವಸ್ಥೆ ಕಲ್ಪಿಸುವುದರಲ್ಲಿ ಕಂಡಕ್ಟರ್​ ಮಗ್ನರಾದರು. ಬಸ್ ನಲ್ಲಿದ್ದ ಫಸ್ಟ್ ಏಯ್ಡ್​ ಹಾಗೂ ಟಿಕೆಟ್ ಹಾಗೂ ದಿನದ ಪಾಸ್ ಗಳು ಬೆಂಕಿಗೆ ಆಹುತಿಯಾಗಿವೆ.

ಫ್ಲೈಓವರ್ ಮೇಲೆ ಕ್ಯಾಂಟರ್ ಹರಿದು ಯುವತಿ ಸಾವು: ಭದ್ರಪ್ಪ ಲೇಔಟ್ ಫ್ಲೈಓವರ್ ಮೇಲೆ ಸ್ನೇಹಿತನೊಂದಿಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಕ್ಯಾಂಟರ್ ಹರಿದು ಮೇಘಷ್ಠಿ(19) ಎಂಬ ಯುವತಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಮೇಘಷ್ಠಿ ಆಯತಪ್ಪಿ ಕೆಳಕ್ಕೆ ಬಿದ್ದಾಗ ಕ್ಯಾಂಟರ್ ಅವರ ಮೈಮೇಲೆ ಹರಿದಿದೆ. ಹೆಬ್ಬಾಳ ಸಂಚಾರಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Sudhakar Weekend Carfue |ವೀಕೆಂಡ್ ಕರ್ಫ್ಯೂ ಹಿಂಪಡೆಯುವ ಸುಳಿವು ಕೊಟ್ಟ ಡಾ. ಕೆ. ಸುಧಾಕರ್

Published On - 12:06 pm, Fri, 21 January 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ