AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BMTC Bus Pass: ವಿದ್ಯಾರ್ಥಿಗಳೇ ಗಮನಿಸಿ, ಬಿಎಂಟಿಸಿ ಬಸ್ ಪಾಸ್ ಅವಧಿ ವಿಸ್ತರಣೆ

ಕೊವಿಡ್ ಲಾಕ್​ಡೌನ್ ಹಿನ್ನೆಲೆಯಲ್ಲಿ ಭೌತಿಕ ತರಗತಿಗಳು ನಡೆದಿರಲಿಲ್ಲ. ಹೀಗಾಗಿ ಬಸ್​ಪಾಸ್ ಬಳಕೆಯಾಗಿರಲಿಲ್ಲ. ಈ ಕಾರಣಗಳಿಂದ ಬಸ್​ಪಾಸ್ ಅವಧಿಯನ್ನು ವಿಸ್ತರಿಸಿ ಬಿಎಂಟಿಸಿ ಆದೇಶ ಪ್ರಕಟಿಸಲಾಗಿದೆ.

BMTC Bus Pass: ವಿದ್ಯಾರ್ಥಿಗಳೇ ಗಮನಿಸಿ, ಬಿಎಂಟಿಸಿ ಬಸ್ ಪಾಸ್ ಅವಧಿ ವಿಸ್ತರಣೆ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Aug 31, 2021 | 4:30 PM

Share

ಬೆಂಗಳೂರು: ವಿದ್ಯಾರ್ಥಿಗಳಿಗೆ 2020-2021ನೇ ಬಿಎಂಟಿಸಿ ಸಾಲಿನ ಬಸ್​ಪಾಸ್ ಅವಧಿ ವಿಸ್ತರಣೆ ಮಾಡಿ ಆದೇಶಿಸಲಾಗಿದೆ. 2021ರ ಸೆಪ್ಟೆಂಬರ್ 30ರವರೆಗೆ ಬಸ್ ಪಾಸ್ ಅವಧಿ ವಿಸ್ತರಣೆ ಮಾಡಲಾಗಿದೆ. ಬಿಎಂಟಿಸಿ ಪಾಸ್ ಅವಧಿ ವಿಸ್ತರಣೇ ಆದೇಶ ಐಟಿಐ, ಡಿಪ್ಲೊಮಾ, ಪದವಿ, ಪಿಜಿ, ಸಂಶೋಧಕರು, ತಾಂತ್ರಿಕ, ವೈದ್ಯಕೀಯ ಮತ್ತು ಸಂಜೆ ಕಾಲೇಜು ವಿದ್ಯಾರ್ಥಿಗಳಿಗೆ ಅನ್ವಯವಾಗಲಿದೆ. ದಿನಾಂಕ 30-09-2021ರವರೆಗೆ ಬಸ್​ಪಾಸ್ ಅವಧಿಯನ್ನು ವಿಸ್ತರಿಸಿಲಾಗಿದೆ. ಕೊವಿಡ್ ಲಾಕ್​ಡೌನ್ ಹಿನ್ನೆಲೆಯಲ್ಲಿ ಭೌತಿಕ ತರಗತಿಗಳು ನಡೆದಿರಲಿಲ್ಲ. ಹೀಗಾಗಿ ಬಸ್​ಪಾಸ್ ಬಳಕೆಯಾಗಿರಲಿಲ್ಲ. ಈ ಕಾರಣಗಳಿಂದ ಬಸ್​ಪಾಸ್ ಅವಧಿಯನ್ನು ವಿಸ್ತರಿಸಿ ಬಿಎಂಟಿಸಿ ಆದೇಶ ಪ್ರಕಟಿಸಲಾಗಿದೆ.

ಟಿಕೆಟ್ ಪಡೆಯದೆ ಪ್ರಯಾಣ; ಬಿಎಂಟಿಸಿಯಿಂದ ಜುಲೈನಲ್ಲಿ 2,67,950 ರೂ. ದಂಡ ವಸೂಲು ಟಿಕೆಟ್ ಪಡೆಯದೆ ಬಸ್​ನಲ್ಲಿ ಪ್ರಯಾಣ ಮಾಡುತ್ತಿದ್ದವರಿಂದ ಬಿಎಂಟಿಸಿ ದಂಡ ವಸೂಲಿ ಮಾಡಿದೆ. ಜೊತೆಗೆ ಟಿಕೆಟ್ ನೀಡದ ನಿರ್ವಾಹಕರ ವಿರುದ್ಧ, ಮಹಿಳೆಯರಿಗೆ ಮೀಸಲಿರಿಸಿದ ಸೀಟ್​ನಲ್ಲಿ ಪ್ರಯಾಣಿಸುತ್ತಿದ್ದ ಹಿನ್ನೆಲೆಯಲ್ಲಿ ಹೀಗೆ ಬಿಎಂಟಿಸಿ ದಂಡ ವಸೂಲಿ ಮಾಡಿಕೊಂಡಿದೆ. ಆ ಮೂಲಕ, ಜುಲೈ ತಿಂಗಳಲ್ಲಿ ಬಿಎಂಟಿಸಿಯಿಂದ 2,67,950 ರೂಪಾಯಿ ದಂಡ ವಸೂಲಿ ಮಾಡಲಾಗಿದೆ.

ಒಟ್ಟು 17,799 ಟ್ರಿಪ್ ತಪಾಸಣೆ ನಡೆಸಿದ ಬಿಎಂಟಿಸಿ ತನಿಖಾ ತಂಡ ಇಷ್ಟು ಮೊತ್ತದ ದಂಡ ವಸೂಲಿ ಮಾಡಿಕೊಂಡಿದೆ. ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದವರಿಂದ 2,67,950 ರೂಪಾಯಿ ದಂಡ ಪಡೆದುಕೊಂಡಿದೆ. ಟಿಕೆಟ್ ನೀಡದ ನಿರ್ವಾಹಕರ ವಿರುದ್ಧ 1188 ಕೇಸ್ ದಾಖಲು ಮಾಡಲಾಗಿದೆ. ಮಹಿಳೆಯರಿಗೆ ಮೀಸಲಿರಿಸಿದ ಸೀಟ್​ನಲ್ಲಿ ಪ್ರಯಾಣ ಹಿನ್ನೆಲೆ, ನಾಲ್ವರು ಪುರುಷ ಪ್ರಯಾಣಿಕರಿಂದ 400 ರೂಪಾಯಿ ದಂಡ ವಸೂಲಿ ಮಾಡಲಾಗಿದೆ. ಈ ಬಗ್ಗೆ, ಬಿಎಂಟಿಸಿಯಿಂದ ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದೆ.

ಇದನ್ನೂ ಓದಿ: 

BMTC Bus: ಬಿಎಂಟಿಸಿ ಬಸ್​ಗಳಲ್ಲಿ ಟಿಕೆಟ್ ನೀಡಲಾರದೇ ಕಂಡಕ್ಟರ್​ಗಳ ಪರದಾಟ; ಇಟಿಎಂ ಮಶಿನ್ ದುರಸ್ತಿಗೆ ನಿರ್ವಾಹಕರ ಆಗ್ರಹ

(BMTC Bus Pass extended to September 30th for Students)

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು