BMTC Bus Pass: ವಿದ್ಯಾರ್ಥಿಗಳೇ ಗಮನಿಸಿ, ಬಿಎಂಟಿಸಿ ಬಸ್ ಪಾಸ್ ಅವಧಿ ವಿಸ್ತರಣೆ

ಕೊವಿಡ್ ಲಾಕ್​ಡೌನ್ ಹಿನ್ನೆಲೆಯಲ್ಲಿ ಭೌತಿಕ ತರಗತಿಗಳು ನಡೆದಿರಲಿಲ್ಲ. ಹೀಗಾಗಿ ಬಸ್​ಪಾಸ್ ಬಳಕೆಯಾಗಿರಲಿಲ್ಲ. ಈ ಕಾರಣಗಳಿಂದ ಬಸ್​ಪಾಸ್ ಅವಧಿಯನ್ನು ವಿಸ್ತರಿಸಿ ಬಿಎಂಟಿಸಿ ಆದೇಶ ಪ್ರಕಟಿಸಲಾಗಿದೆ.

BMTC Bus Pass: ವಿದ್ಯಾರ್ಥಿಗಳೇ ಗಮನಿಸಿ, ಬಿಎಂಟಿಸಿ ಬಸ್ ಪಾಸ್ ಅವಧಿ ವಿಸ್ತರಣೆ
ಸಾಂಕೇತಿಕ ಚಿತ್ರ
Follow us
| Updated By: guruganesh bhat

Updated on: Aug 31, 2021 | 4:30 PM

ಬೆಂಗಳೂರು: ವಿದ್ಯಾರ್ಥಿಗಳಿಗೆ 2020-2021ನೇ ಬಿಎಂಟಿಸಿ ಸಾಲಿನ ಬಸ್​ಪಾಸ್ ಅವಧಿ ವಿಸ್ತರಣೆ ಮಾಡಿ ಆದೇಶಿಸಲಾಗಿದೆ. 2021ರ ಸೆಪ್ಟೆಂಬರ್ 30ರವರೆಗೆ ಬಸ್ ಪಾಸ್ ಅವಧಿ ವಿಸ್ತರಣೆ ಮಾಡಲಾಗಿದೆ. ಬಿಎಂಟಿಸಿ ಪಾಸ್ ಅವಧಿ ವಿಸ್ತರಣೇ ಆದೇಶ ಐಟಿಐ, ಡಿಪ್ಲೊಮಾ, ಪದವಿ, ಪಿಜಿ, ಸಂಶೋಧಕರು, ತಾಂತ್ರಿಕ, ವೈದ್ಯಕೀಯ ಮತ್ತು ಸಂಜೆ ಕಾಲೇಜು ವಿದ್ಯಾರ್ಥಿಗಳಿಗೆ ಅನ್ವಯವಾಗಲಿದೆ. ದಿನಾಂಕ 30-09-2021ರವರೆಗೆ ಬಸ್​ಪಾಸ್ ಅವಧಿಯನ್ನು ವಿಸ್ತರಿಸಿಲಾಗಿದೆ. ಕೊವಿಡ್ ಲಾಕ್​ಡೌನ್ ಹಿನ್ನೆಲೆಯಲ್ಲಿ ಭೌತಿಕ ತರಗತಿಗಳು ನಡೆದಿರಲಿಲ್ಲ. ಹೀಗಾಗಿ ಬಸ್​ಪಾಸ್ ಬಳಕೆಯಾಗಿರಲಿಲ್ಲ. ಈ ಕಾರಣಗಳಿಂದ ಬಸ್​ಪಾಸ್ ಅವಧಿಯನ್ನು ವಿಸ್ತರಿಸಿ ಬಿಎಂಟಿಸಿ ಆದೇಶ ಪ್ರಕಟಿಸಲಾಗಿದೆ.

ಟಿಕೆಟ್ ಪಡೆಯದೆ ಪ್ರಯಾಣ; ಬಿಎಂಟಿಸಿಯಿಂದ ಜುಲೈನಲ್ಲಿ 2,67,950 ರೂ. ದಂಡ ವಸೂಲು ಟಿಕೆಟ್ ಪಡೆಯದೆ ಬಸ್​ನಲ್ಲಿ ಪ್ರಯಾಣ ಮಾಡುತ್ತಿದ್ದವರಿಂದ ಬಿಎಂಟಿಸಿ ದಂಡ ವಸೂಲಿ ಮಾಡಿದೆ. ಜೊತೆಗೆ ಟಿಕೆಟ್ ನೀಡದ ನಿರ್ವಾಹಕರ ವಿರುದ್ಧ, ಮಹಿಳೆಯರಿಗೆ ಮೀಸಲಿರಿಸಿದ ಸೀಟ್​ನಲ್ಲಿ ಪ್ರಯಾಣಿಸುತ್ತಿದ್ದ ಹಿನ್ನೆಲೆಯಲ್ಲಿ ಹೀಗೆ ಬಿಎಂಟಿಸಿ ದಂಡ ವಸೂಲಿ ಮಾಡಿಕೊಂಡಿದೆ. ಆ ಮೂಲಕ, ಜುಲೈ ತಿಂಗಳಲ್ಲಿ ಬಿಎಂಟಿಸಿಯಿಂದ 2,67,950 ರೂಪಾಯಿ ದಂಡ ವಸೂಲಿ ಮಾಡಲಾಗಿದೆ.

ಒಟ್ಟು 17,799 ಟ್ರಿಪ್ ತಪಾಸಣೆ ನಡೆಸಿದ ಬಿಎಂಟಿಸಿ ತನಿಖಾ ತಂಡ ಇಷ್ಟು ಮೊತ್ತದ ದಂಡ ವಸೂಲಿ ಮಾಡಿಕೊಂಡಿದೆ. ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದವರಿಂದ 2,67,950 ರೂಪಾಯಿ ದಂಡ ಪಡೆದುಕೊಂಡಿದೆ. ಟಿಕೆಟ್ ನೀಡದ ನಿರ್ವಾಹಕರ ವಿರುದ್ಧ 1188 ಕೇಸ್ ದಾಖಲು ಮಾಡಲಾಗಿದೆ. ಮಹಿಳೆಯರಿಗೆ ಮೀಸಲಿರಿಸಿದ ಸೀಟ್​ನಲ್ಲಿ ಪ್ರಯಾಣ ಹಿನ್ನೆಲೆ, ನಾಲ್ವರು ಪುರುಷ ಪ್ರಯಾಣಿಕರಿಂದ 400 ರೂಪಾಯಿ ದಂಡ ವಸೂಲಿ ಮಾಡಲಾಗಿದೆ. ಈ ಬಗ್ಗೆ, ಬಿಎಂಟಿಸಿಯಿಂದ ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದೆ.

ಇದನ್ನೂ ಓದಿ: 

BMTC Bus: ಬಿಎಂಟಿಸಿ ಬಸ್​ಗಳಲ್ಲಿ ಟಿಕೆಟ್ ನೀಡಲಾರದೇ ಕಂಡಕ್ಟರ್​ಗಳ ಪರದಾಟ; ಇಟಿಎಂ ಮಶಿನ್ ದುರಸ್ತಿಗೆ ನಿರ್ವಾಹಕರ ಆಗ್ರಹ

(BMTC Bus Pass extended to September 30th for Students)

ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್