AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BMTC Bus Pass: ವಿದ್ಯಾರ್ಥಿಗಳೇ ಗಮನಿಸಿ, ಬಿಎಂಟಿಸಿ ಬಸ್ ಪಾಸ್ ಅವಧಿ ವಿಸ್ತರಣೆ

ಕೊವಿಡ್ ಲಾಕ್​ಡೌನ್ ಹಿನ್ನೆಲೆಯಲ್ಲಿ ಭೌತಿಕ ತರಗತಿಗಳು ನಡೆದಿರಲಿಲ್ಲ. ಹೀಗಾಗಿ ಬಸ್​ಪಾಸ್ ಬಳಕೆಯಾಗಿರಲಿಲ್ಲ. ಈ ಕಾರಣಗಳಿಂದ ಬಸ್​ಪಾಸ್ ಅವಧಿಯನ್ನು ವಿಸ್ತರಿಸಿ ಬಿಎಂಟಿಸಿ ಆದೇಶ ಪ್ರಕಟಿಸಲಾಗಿದೆ.

BMTC Bus Pass: ವಿದ್ಯಾರ್ಥಿಗಳೇ ಗಮನಿಸಿ, ಬಿಎಂಟಿಸಿ ಬಸ್ ಪಾಸ್ ಅವಧಿ ವಿಸ್ತರಣೆ
ಸಾಂಕೇತಿಕ ಚಿತ್ರ
TV9 Web
| Updated By: guruganesh bhat|

Updated on: Aug 31, 2021 | 4:30 PM

Share

ಬೆಂಗಳೂರು: ವಿದ್ಯಾರ್ಥಿಗಳಿಗೆ 2020-2021ನೇ ಬಿಎಂಟಿಸಿ ಸಾಲಿನ ಬಸ್​ಪಾಸ್ ಅವಧಿ ವಿಸ್ತರಣೆ ಮಾಡಿ ಆದೇಶಿಸಲಾಗಿದೆ. 2021ರ ಸೆಪ್ಟೆಂಬರ್ 30ರವರೆಗೆ ಬಸ್ ಪಾಸ್ ಅವಧಿ ವಿಸ್ತರಣೆ ಮಾಡಲಾಗಿದೆ. ಬಿಎಂಟಿಸಿ ಪಾಸ್ ಅವಧಿ ವಿಸ್ತರಣೇ ಆದೇಶ ಐಟಿಐ, ಡಿಪ್ಲೊಮಾ, ಪದವಿ, ಪಿಜಿ, ಸಂಶೋಧಕರು, ತಾಂತ್ರಿಕ, ವೈದ್ಯಕೀಯ ಮತ್ತು ಸಂಜೆ ಕಾಲೇಜು ವಿದ್ಯಾರ್ಥಿಗಳಿಗೆ ಅನ್ವಯವಾಗಲಿದೆ. ದಿನಾಂಕ 30-09-2021ರವರೆಗೆ ಬಸ್​ಪಾಸ್ ಅವಧಿಯನ್ನು ವಿಸ್ತರಿಸಿಲಾಗಿದೆ. ಕೊವಿಡ್ ಲಾಕ್​ಡೌನ್ ಹಿನ್ನೆಲೆಯಲ್ಲಿ ಭೌತಿಕ ತರಗತಿಗಳು ನಡೆದಿರಲಿಲ್ಲ. ಹೀಗಾಗಿ ಬಸ್​ಪಾಸ್ ಬಳಕೆಯಾಗಿರಲಿಲ್ಲ. ಈ ಕಾರಣಗಳಿಂದ ಬಸ್​ಪಾಸ್ ಅವಧಿಯನ್ನು ವಿಸ್ತರಿಸಿ ಬಿಎಂಟಿಸಿ ಆದೇಶ ಪ್ರಕಟಿಸಲಾಗಿದೆ.

ಟಿಕೆಟ್ ಪಡೆಯದೆ ಪ್ರಯಾಣ; ಬಿಎಂಟಿಸಿಯಿಂದ ಜುಲೈನಲ್ಲಿ 2,67,950 ರೂ. ದಂಡ ವಸೂಲು ಟಿಕೆಟ್ ಪಡೆಯದೆ ಬಸ್​ನಲ್ಲಿ ಪ್ರಯಾಣ ಮಾಡುತ್ತಿದ್ದವರಿಂದ ಬಿಎಂಟಿಸಿ ದಂಡ ವಸೂಲಿ ಮಾಡಿದೆ. ಜೊತೆಗೆ ಟಿಕೆಟ್ ನೀಡದ ನಿರ್ವಾಹಕರ ವಿರುದ್ಧ, ಮಹಿಳೆಯರಿಗೆ ಮೀಸಲಿರಿಸಿದ ಸೀಟ್​ನಲ್ಲಿ ಪ್ರಯಾಣಿಸುತ್ತಿದ್ದ ಹಿನ್ನೆಲೆಯಲ್ಲಿ ಹೀಗೆ ಬಿಎಂಟಿಸಿ ದಂಡ ವಸೂಲಿ ಮಾಡಿಕೊಂಡಿದೆ. ಆ ಮೂಲಕ, ಜುಲೈ ತಿಂಗಳಲ್ಲಿ ಬಿಎಂಟಿಸಿಯಿಂದ 2,67,950 ರೂಪಾಯಿ ದಂಡ ವಸೂಲಿ ಮಾಡಲಾಗಿದೆ.

ಒಟ್ಟು 17,799 ಟ್ರಿಪ್ ತಪಾಸಣೆ ನಡೆಸಿದ ಬಿಎಂಟಿಸಿ ತನಿಖಾ ತಂಡ ಇಷ್ಟು ಮೊತ್ತದ ದಂಡ ವಸೂಲಿ ಮಾಡಿಕೊಂಡಿದೆ. ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದವರಿಂದ 2,67,950 ರೂಪಾಯಿ ದಂಡ ಪಡೆದುಕೊಂಡಿದೆ. ಟಿಕೆಟ್ ನೀಡದ ನಿರ್ವಾಹಕರ ವಿರುದ್ಧ 1188 ಕೇಸ್ ದಾಖಲು ಮಾಡಲಾಗಿದೆ. ಮಹಿಳೆಯರಿಗೆ ಮೀಸಲಿರಿಸಿದ ಸೀಟ್​ನಲ್ಲಿ ಪ್ರಯಾಣ ಹಿನ್ನೆಲೆ, ನಾಲ್ವರು ಪುರುಷ ಪ್ರಯಾಣಿಕರಿಂದ 400 ರೂಪಾಯಿ ದಂಡ ವಸೂಲಿ ಮಾಡಲಾಗಿದೆ. ಈ ಬಗ್ಗೆ, ಬಿಎಂಟಿಸಿಯಿಂದ ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದೆ.

ಇದನ್ನೂ ಓದಿ: 

BMTC Bus: ಬಿಎಂಟಿಸಿ ಬಸ್​ಗಳಲ್ಲಿ ಟಿಕೆಟ್ ನೀಡಲಾರದೇ ಕಂಡಕ್ಟರ್​ಗಳ ಪರದಾಟ; ಇಟಿಎಂ ಮಶಿನ್ ದುರಸ್ತಿಗೆ ನಿರ್ವಾಹಕರ ಆಗ್ರಹ

(BMTC Bus Pass extended to September 30th for Students)

ಪರಿಸ್ಥಿತಿಯ ಲಾಭ ಪಡೆಯಲು ಸುಲಿಗೆಗಿಳಿದ ಖಾಸಗಿ ಸಾರಿಗೆ ಸಂಸ್ಥೆಗಳು
ಪರಿಸ್ಥಿತಿಯ ಲಾಭ ಪಡೆಯಲು ಸುಲಿಗೆಗಿಳಿದ ಖಾಸಗಿ ಸಾರಿಗೆ ಸಂಸ್ಥೆಗಳು
ಅಪ್ಪು ಹೋದಮೇಲೆ ಏರಿಯಾನಲ್ಲಿ ಗಣೇಶ ಇಡುತ್ತಿಲ್ಲ: ವಿನಯ್ ರಾಜ್​ಕುಮಾರ್
ಅಪ್ಪು ಹೋದಮೇಲೆ ಏರಿಯಾನಲ್ಲಿ ಗಣೇಶ ಇಡುತ್ತಿಲ್ಲ: ವಿನಯ್ ರಾಜ್​ಕುಮಾರ್
ನನ್ನಷ್ಟು ಕನ್ನಡ ಬಳಸಿ ಸಾಧನೆ ಮಾಡಿದವರು ಮಾತ್ರ ನನ್ನ ಟೀಕಿಸಬಹುದು: ಬಾನು
ನನ್ನಷ್ಟು ಕನ್ನಡ ಬಳಸಿ ಸಾಧನೆ ಮಾಡಿದವರು ಮಾತ್ರ ನನ್ನ ಟೀಕಿಸಬಹುದು: ಬಾನು
ಚಾಮುಂಡೇಶ್ವರಿ ತಾಯಿಯೇ ಕರೆಸಿಕೊಳ್ಳುತ್ತಿದ್ದಾಳೆ: ಟೀಕೆಗಳಿಗೆ ಬಾನು ಟಾಂಗ್
ಚಾಮುಂಡೇಶ್ವರಿ ತಾಯಿಯೇ ಕರೆಸಿಕೊಳ್ಳುತ್ತಿದ್ದಾಳೆ: ಟೀಕೆಗಳಿಗೆ ಬಾನು ಟಾಂಗ್
ಪ್ರವಾಹದಿಂದ ಕೊಚ್ಚಿ ಹೋದ ಮನಾಲಿ ರಸ್ತೆ; ನದಿಯಲ್ಲಿ ಉರುಳಿ ಬಿದ್ದ ಕಾರು
ಪ್ರವಾಹದಿಂದ ಕೊಚ್ಚಿ ಹೋದ ಮನಾಲಿ ರಸ್ತೆ; ನದಿಯಲ್ಲಿ ಉರುಳಿ ಬಿದ್ದ ಕಾರು
ಮಟ್ಟಣ್ಣನವರ್ ವಿರುದ್ಧ ಕಾನೂನು ರೀತ್ಯಾ ಕ್ರಮ ಜರುಗಿಸಬೇಕು: ದೂರುದಾರ
ಮಟ್ಟಣ್ಣನವರ್ ವಿರುದ್ಧ ಕಾನೂನು ರೀತ್ಯಾ ಕ್ರಮ ಜರುಗಿಸಬೇಕು: ದೂರುದಾರ
ಕಳ್ಳರ ಕೈಯಲ್ಲಿ ಪಿಸ್ಟಲ್ ಕಂಡ ಮಾಲೀಕ ಪ್ಯಾನಿಕ್ ಆಗದೆ ಕಿರುಚಿದರು
ಕಳ್ಳರ ಕೈಯಲ್ಲಿ ಪಿಸ್ಟಲ್ ಕಂಡ ಮಾಲೀಕ ಪ್ಯಾನಿಕ್ ಆಗದೆ ಕಿರುಚಿದರು
ಬಾನು ಮುಷ್ತಾಕ್ ಕನ್ನಡದ ಬಗ್ಗೆ ಯಾವತ್ತೂ ಕೆಟ್ಟದ್ದಾಗಿ ಮಾತಾಡಿಲ್ಲ: ಸಚಿವ
ಬಾನು ಮುಷ್ತಾಕ್ ಕನ್ನಡದ ಬಗ್ಗೆ ಯಾವತ್ತೂ ಕೆಟ್ಟದ್ದಾಗಿ ಮಾತಾಡಿಲ್ಲ: ಸಚಿವ
ನಸುಕಿನ ಜಾವ 5 ಗಂಟೆಗೆ SIT ಕಚೇರಿಗೆ ಬಂದು ಕುಳಿತ ಸುಜಾತಾ ಭಟ್
ನಸುಕಿನ ಜಾವ 5 ಗಂಟೆಗೆ SIT ಕಚೇರಿಗೆ ಬಂದು ಕುಳಿತ ಸುಜಾತಾ ಭಟ್
ದಶಕಗಳಿಂದ ಕಾಂಗ್ರೆಸ್​ನಲ್ಲಿರುವ ನನ್ನ ಮೇಲೆ ಜವಾಬ್ದಾರಿ ಹೆಚ್ಚು: ಪ್ರಸಾದ್
ದಶಕಗಳಿಂದ ಕಾಂಗ್ರೆಸ್​ನಲ್ಲಿರುವ ನನ್ನ ಮೇಲೆ ಜವಾಬ್ದಾರಿ ಹೆಚ್ಚು: ಪ್ರಸಾದ್