ಪ್ರಯಾಣಿಕರಿಗೆ ಸಿಹಿ ಸುದ್ದಿ: ಬೆಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್ 2ನಿಂದ ಬಿಎಂಟಿಸಿ ಬಸ್​ ಕಾರ್ಯಾರಂಭ

ಇತ್ತೀಚಿಗೆ ಪ್ರಧಾನಿ ನರೇಂದ್ರ ಮೋದಿಯವರು ಉದ್ಘಾಟಿಸಿದ್ದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ನಿಂದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ಬಸ್ ಸಂಚಾರ ಆರಂಭವಾಗಿದೆ.

ಪ್ರಯಾಣಿಕರಿಗೆ ಸಿಹಿ ಸುದ್ದಿ: ಬೆಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್ 2ನಿಂದ ಬಿಎಂಟಿಸಿ ಬಸ್​ ಕಾರ್ಯಾರಂಭ
ಕೆಐಎನ ಟರ್ಮಿನಲ್​ 2 ನಿಂದ ಬಿಎಂಟಿಸಿ ಬಸ್​ ಸಂಚಾರ ಆರಂಭ
Follow us
|

Updated on:Jul 03, 2023 | 1:12 PM

ಬೆಂಗಳೂರು: ಇತ್ತೀಚಿಗೆ ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಉದ್ಘಾಟಿಸಿದ್ದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (KIA) ಟರ್ಮಿನಲ್ 2 (T2) ನಿಂದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಬಸ್ ಸಂಚಾರ ಆರಂಭವಾಗಿದೆ. ಹೌದು ಟರ್ಮಿನಲ್ 2 ನಿಂದ ಬಿಎಂಟಿಸಿಯ ವಾಯು ವಜ್ರ ಬಸ್‌ಗಳು ಕಾರ್ಯಾರಂಭ ಮಾಡಿವೆ. ಸುರಕ್ಷಿತ, ಆರಾಮದಾಯಕ ಮತ್ತು ಕೈಗೆಟುಕುವ ಪ್ರಯಾಣಕ್ಕಾಗಿ ಬಿಎಂಟಿಸಿ ಸೇವೆಗಳನ್ನು ಆರಿಸಿಕೊಳ್ಳಿ. ನಿಮ್ಮ ಮನೆ ಬಾಗಿಲಿಗೆ ನಮ್ಮ ಸೇವೆಯನ್ನು ತರುತ್ತಿದ್ದೇವೆ ಎಂದು ಬಿಎಂಟಿಸಿ ಭಾನುವಾರ ಟ್ವಿಟ್ ಮಾಡಿದೆ.

ಇದನ್ನೂ ಓದಿ: Namma BMTC: ಕೊನೆಗೂ ಅಸ್ತಿತ್ವಕ್ಕೆ ಬಂತು ‘ನಮ್ಮ ಬಿಎಂಟಿಸಿ’ ಬಸ್ ಟ್ರ್ಯಾಕಿಂಗ್ ಮೊಬೈಲ್​ ಆ್ಯಪ್

ಟರ್ಮಿನಲ್​ 2ನಿಂದ ಜನವರಿ 15, 2023 ರಿಂದ ದೇಶಿ ವಿಮಾನಗಳು ಕಾರ್ಯಾಚರಣೆ ಪ್ರಾರಂಭವಾಯಿತು. ಆದರೆ ಇತ್ತೀಚಿನ ವರದಿಗಳ ಪ್ರಕಾರ, ಈ ವರ್ಷದ ಸೆಪ್ಟೆಂಬರ್‌ನಲ್ಲಿ ಅಂತರರಾಷ್ಟ್ರೀಯ ಕಾರ್ಯಾಚರಣೆಗಳನ್ನು ಸಂಪೂರ್ಣವಾಗಿ ಟರ್ಮಿನಲ್ 1ನಿಂದ ಟರ್ಮಿನಲ್​ 2ಗೆ ಸ್ಥಳಾಂತರಿಸಲಾಗುವುದು. ಇನ್ನು ಟರ್ಮಿನಲ್​ 1ನಿಂದ ದೇಶಿ ವಿಮಾನಗಳು ಕಾರ್ಯಾಚರಣೆ ಆರಂಭಿಸುತ್ತವೆ ಎಂದು ಟೈಮ್ಸ್ ಆಫ್ ಇಂಡಿಯಾ ಜೂನ್ 8 ರಂದು ವರದಿ ಮಾಡಿತ್ತು.

BMTC ಯ ಟ್ವೀಟ್​ಗೆ ತಿಕ್ರಿಯಿಸಿದ ನಿಹಾರ್ ಠಕ್ಕರ್ ಎಂಬುವರು ಎಲ್ಲ ಮಾರ್ಗಗಳ ಬಸ್​​​ಗಳು ಟರ್ಮಿನಲ್​​1 ಮತ್ತು ಟರ್ಮಿನಲ್​​2ನಲ್ಲಿ ನಿಲ್ಲುತ್ತವೆಯೇ ಅಥವಾ ಕೆಲವು ಮಾತ್ರವೇ ಎಂಬುದನ್ನು ದಯವಿಟ್ಟು ಸ್ಪಷ್ಟಪಡಿಸಿ ಎಂದಿದ್ದಾರೆ. ಇನ್ನು ಅನೇಕರು ಬಸ್​ ಸೇವೆಗಳ ವೇಳಾಪಟ್ಟಿಯನ್ನು ಕೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:08 pm, Mon, 3 July 23

ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ