AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೈಸ್ ರಸ್ತೆ ಮೂಲಕ ಮಾದವಾರ – ಎಲೆಕ್ಟ್ರಾನಿಕ್‌ ಸಿಟಿ ನಡುವೆ ಬಿಎಂಟಿಸಿ ಬಸ್‌ ಸೇವೆ ಆರಂಭ

ಎಲೆಕ್ಟ್ರಾನಿಕ್ ಸಿಟಿಯಿಂದ ಮಾದವಾರ ರೂಟ್​ಗೆ ಹೊಸ ಮಾರ್ಗವಾಗಿ ಬಿಎಂಟಿಸಿ ಬಸ್​ಗಳ ಸೇವೆ ಆರಂಭವಾಗಿದೆ. ಈ ಎರಡು ಸ್ಥಳಗಳಿಗೆ ನೈಸ್ ರೋಡ್ ಮೂಲಕವಾಗಿ ಬಿಎಂಟಿಸಿ ಬಸ್ ಸಂಚಾರ ನಡೆಸಲಿದೆ.ಬೆಳಗ್ಗೆ 6:40 ರಿಂದ ರಾತ್ರಿ 8 ಗಂಟೆವರೆಗೆ ಬಿಎಂಟಿಸಿ ಬಸ್ ಗಳ ಸೇವೆ ಇರಲಿದೆ.

ನೈಸ್ ರಸ್ತೆ ಮೂಲಕ ಮಾದವಾರ - ಎಲೆಕ್ಟ್ರಾನಿಕ್‌ ಸಿಟಿ ನಡುವೆ ಬಿಎಂಟಿಸಿ ಬಸ್‌ ಸೇವೆ ಆರಂಭ
ಬಿಎಂಟಿಸಿ
ಕಿರಣ್​ ಸೂರ್ಯ
| Edited By: |

Updated on: Nov 22, 2023 | 11:09 AM

Share

ಬೆಂಗಳೂರು, ನ.22: ಬೆಂಗಳೂರಿನ ಸಂಚಾರ ಜೀವನಾಡಿ ಬಿಎಂಟಿಸಿ (BMTC) ಇನ್ಮುಂದೆ ನೈಸ್ ರಸ್ತೆಯಲ್ಲೂ (Nice Road) ಸಂಚರಿಸಲಿದೆ. ಪ್ರಯಾಣಿಕರ ಬೇಡಿಕೆ ಮೇರೆಗೆ ನೈಸ್ ರಸ್ತೆಯಲ್ಲೂ ಬಿಎಂಟಿಸಿ ಬಸ್​ಗಳ ಸಂಚಾರಕ್ಕೆ ಸಾರಿಗೆ ಇಲಾಖೆ ನಿರ್ಧರಿಸಿದೆ. ಎಲೆಕ್ಟ್ರಾನಿಕ್ ಸಿಟಿಯಿಂದ ಮಾದವಾರ ರೂಟ್​ಗೆ ಹೊಸ ಮಾರ್ಗವಾಗಿ ಬಿಎಂಟಿಸಿ ಬಸ್​ಗಳ ಸೇವೆ ಆರಂಭವಾಗಿದೆ. ಈ ಎರಡು ಸ್ಥಳಗಳಿಗೆ ನೈಸ್ ರೋಡ್ ಮೂಲಕವಾಗಿ ಬಿಎಂಟಿಸಿ ಬಸ್ ಸಂಚಾರ ನಡೆಸಲಿದೆ.

ದೂರದ ಊರುಗಳಿಂದ ಬೆಂಗಳೂರಿಗೆ ಬರುತ್ತಿದ್ದವರು ಮೆಜೆಸ್ಟಿಕ್‌ ತಲುಪಿ ಅಲ್ಲಿಂದ ಎಲೆಕ್ಟ್ರಾನಿಕ್‌ ಸಿಟಿ ಬಸ್‌ ಹಿಡಿದು ಸಂಚಾರ ನಡೆಸಬೇಕಿತ್ತು. ಇದಕ್ಕೆ ಕನಿಷ್ಠ 2 ಗಂಟೆ ವ್ಯರ್ಥವಾಗುತ್ತಿತ್ತು. ಸದ್ಯ ಪ್ರಯಾಣಿಕರ ಬೇಡಿಕೆ ಮೇರೆಗೆ ಹೆಚ್ಚವರಿ ರೂಟ್ ಗೆ ಬಸ್​ಗಳನ್ನು ನಿಯೋಜಿಸಲಾಗಿದೆ. ಬೆಂಗಳೂರು ನಗರಕ್ಕೆ ತುಮಕೂರು, ಹಾಸನ ಭಾಗಗಳಿಂದ ಬೆಂಗಳೂರಿಗೆ ಆಗಮಿಸುವವರು ಮಾದವಾರದಿಂದಲೇ ನೇರವಾಗಿ ಎಲೆಕ್ಟ್ರಾನಿಕ್‌ ಸಿಟಿ ತಲುಪಲು ಅನುಕೂಲವಾಗಲಿದೆ.

ಇದನ್ನೂ ಓದಿ: ಬಿಎಂಟಿಸಿಯಿಂದಲೇ ನಗರದಲ್ಲಿ ಟ್ರಾಫಿಕ್ ಜಾಮ್, ಬೆಂಗಳೂರು ಟ್ರಾಫಿಕ್ ಪೊಲೀಸರ ಅಂಕಿ ಅಂಶ ಬಿಚ್ಚಿಟ್ಟ ರಹಸ್ಯವೇನು?

ಇನ್ನು ಬಸ್ ಒದಗಿಸುವಂತೆ ಪ್ರಯಾಣಿಕರು ಹಲವಾರು ಬಾರಿ ಮನವಿ ಪತ್ರ ಬರೆದಿದ್ದರು. ಬಿಎಂಟಿಸಿ ಬಸ್​ಗಳಿಲ್ಲದೇ ಪ್ರಯಾಣಿಕರು ಟೆಂಪೋ, ಆಟೋ, ಲಾರಿಗಳಲ್ಲಿ ಸಂಚಾರ ಮಾಡ್ತಿದ್ದರು. ಸದ್ಯ ಬಿಎಂಟಿಸಿ ಬಸ್ ಗಳಿಲ್ಲದೇ ತೊಂದರೆ ಅನುಭವಿಸುತ್ತಿದ್ದ ಜನರಿಗೆ ಶುಭ ಸುದ್ದಿ ಸಿಕ್ಕಿದೆ. ಎಲೆಕ್ಟ್ರಾನಿಕ್ ಸಿಟಿ to ಮಾದವಾರ ಭಾಗಕ್ಕೆ ಬಿಎಂಟಿಸಿ ಬಸ್ ಸೇವೆ ಆರಂಭವಾಗಿದೆ. ಬೆಳಗ್ಗೆ 6:40 ರಿಂದ ರಾತ್ರಿ 8 ಗಂಟೆವರೆಗೆ ಬಿಎಂಟಿಸಿ ಬಸ್ ಗಳ ಸೇವೆ ಇರಲಿದೆ. ನವೆಂಬರ್‌ 20 ರಿಂದಲೇ ಈ ಬಸ್‌ ಸೌಲಭ್ಯ ಆರಂಭವಾಗಿದೆ ಎಂದು ಬಿಎಂಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ.

ಮಾದವಾರ ಬಿಎಂಟಿಸಿ ಬಸ್‌ ನಿಲ್ದಾಣದಿಂದ ಹೊರಡುವ ಸಮಯ

ಬೆಳಿಗ್ಗೆ 6.40, 7.10, 7.40, 8.00, 8.30, 8.50, 9.20, 9.50, 10.20, 10.50, 11.40, ಮಧ್ಯಾಹ್ನ 12.10, 12.40, 1.10, 1.50, 2.30, 3.00, 3.40, ಸಂಜೆ 4.25, 4.50, 5.20, 6.00, 6.30, 7.00, 7.30, ರಾತ್ರಿ 8.00, 9.30.

ಎಲೆಕ್ಟ್ರಾನಿಕ್‌ ಸಿಟಿ ಬಿಎಂಟಿಸಿ ಬಸ್‌ ನಿಲ್ದಾಣದಿಂದ ಬಸ್‌ ಹೊರಡುವ ಸಮಯ

ಬೆಳಿಗ್ಗೆ 7.10, 7.40, 8.10, 8.40, 9.10, 9.40, 10.10, 10.40, 11.10, 11.40, 12.15, 12.55, ಮಧ್ಯಾಹ್ನ 1.35, 2.05, 2.45, ಸಂಜೆ 4.00, 4.30, 5.00, 5.30, 6.00, 6.15, 6.30, 7.00, 7.30, ರಾತ್ರಿ 8.00.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Kiran Surya
Kiran Surya

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!