AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ನಗರ ಪೊಲೀಸ್ ಆಯುಕ್ತರ ಸಮೀಪದ ಬಸ್​ ನಿಲ್ದಾಣವನ್ನೇ ಕದ್ದೊಯ್ದ ಖದೀಮರು

ಕಳ್ಳರು ಹಣ, ಬೈಕ್ ಸೇರಿದಂತೆ ಕೈಗೆ ಸಿಗುವ ವಸ್ತುಗಳನ್ನು ಕಳ್ಳತನ ಮಾಡುವುದನ್ನು ಕೇಳಿದ್ದೇವೆ. ಇಲ್ಲ, ಮನೆ-ಬ್ಯಾಂಕ್​ಗೆ ನುಗ್ಗಿ ಕೈಗೆ ಸಿಗುವ ಬೆಲೆಬಾಳುವ ವಸ್ತುಗಳನ್ನು ದೋಚಿಕೊಂಡು ಹೋಗುವುದನ್ನು ಕೇಳಿದ್ದೇವೆ. ಆದ್ರೆ, ಬೆಂಗಳೂರಿನಲ್ಲಿ ಪ್ರಯಾಣಿಕರಿಗಾಗಿ ನಿರ್ಮಾನಿಸಲಾಗಿದ್ದು ಬಸ್​ ನಿಲ್ದಾಣವನ್ನೇ ಕದ್ದೊಯ್ದಿದ್ದಾರೆ.

ಬೆಂಗಳೂರು ನಗರ ಪೊಲೀಸ್ ಆಯುಕ್ತರ ಸಮೀಪದ ಬಸ್​ ನಿಲ್ದಾಣವನ್ನೇ ಕದ್ದೊಯ್ದ ಖದೀಮರು
ಬಸ್​ ನಿಲ್ದಾಣ ನಿರ್ಮಿಸಲಾಗಿದ್ದ ಸ್ಥಳ
ಜಗದೀಶ ಬಿ.
| Edited By: |

Updated on: Oct 05, 2023 | 10:52 AM

Share

ಬೆಂಗಳೂರು, (ಅಕ್ಟೋಬರ್ 05): ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯ ಕೊಂಚ ದೂರದಲ್ಲೇ ಕಳ್ಳರು ತಮ್ಮ ಕೈಚಳಕ ತೋರಿಸಿದ್ದಾರೆ. ಹೌದು.. ಪೊಲೀಸ್ ಕಮಿಷನರ್ ಕಚೇರಿಯ ಹಿಂಭಾಗ,  ವಿಧಾನಸೌಧದಿಂದ 1 ಕಿ.ಮೀಗಿಂತ ಕಡಿಮೆ ದೂರದಲ್ಲಿರುವ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿ  ನಿರ್ಮಿಸಲಾಗಿದ್ದ ಪ್ರಯಾಣಿಕರ ತಂಗುದಾಣವನ್ನು (BMTC bus shelter )ಕದ್ದೊಯ್ದಿದ್ದಾರೆ. ನಿರ್ಮಿಸಿದ್ದ ಒಂದು ವಾರದೊಳಗೆ ಮಾಯವಾಗಿದ್ದು ಅಚ್ಚರಿಗೆ ಕಾರಣವಾಗಿದೆ.

ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿ 10 ಲಕ್ಷ ರೂಪಾಯಿ ವೆಚ್ಚದಲ್ಲಿ ಖಾಸಗಿ ಕಂಪನಿಯೊಂದು ಸ್ಟೀಲ್​ನಿಂದ ಬಿಎಂಟಿಸಿ ಬಸ್ ನಿಲ್ದಾಣವನ್ನು ನಿರ್ಮಿಸಿತ್ತು. ಆದ್ರೆ, ಒಂದು ತಿಂಗಳಲ್ಲಿ ಸ್ಥಳದಿಂದ ಬಸ್​ ನಿಲ್ದಾಣ ನಾಪತ್ತೆಯಾಗಿದೆ. ಕಂಪನಿಯ ಸಹಾಯಕ ಉಪಾಧ್ಯಕ್ಷ ಎನ್ ರವಿ ರೆಡ್ಡಿ ಅವರು ನಿರ್ಮಿಸಲಾಗಿದ್ದ ಬಸ್​ ನಿಲ್ದಾವನ್ನು ನೋಡಲು ಸ್ಥಳಕ್ಕೆ ಬಂದಿದ್ದಾರೆ. ಆದ್ರೆ, ಅಲ್ಲಿ ಬಸ್​ ನಿಲ್ದಾಣ ಇಲ್ಲದಿರುವುದು ಬೆಳಕಿಗೆ ಬಂದಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಸಿನಿಮಾ ಕಥೆಯಂತೆ ನಡೆದ ರಿಯಲ್ ಸ್ಟೋರಿ: ಚಾಕು ಹಿಡಿದು ಬೆದರಿಸಲು ಹೋದವ ಕೊಲೆಯಾದ

ಇದರಿಂದ ಅವಕ್ಕಾದ ಎನ್ ರವಿ ರೆಡ್ಡಿ, ಈ ಬಗ್ಗೆ ಬಿಬಿಎಂಪಿ ಬಳಿ ವಿಚಾರಿಸಿದ್ದಾರೆ. ತಂಗುದಾಣವನ್ನು ತಾವು ತೆರುವು ಮಾಡಿಲ್ಲ ಎಂದು ಬಿಬಿಎಂಪಿ ಸಹ ಹೇಳಿದೆ. ಬಳಿಕ ಕಂಪನಿ ಸೆಪ್ಟೆಂಬರ್ 30ರಂದು ಈ  ಘಟನೆ ಸಂಬಂಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ದೂರಿನ ಮೇರೆಗೆ ಪೊಲಿಸರು, ಕದ್ದುಕೊಂಡು ಹೋಗಿರುವ ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದು, ಬಸ್​ ನಿಲ್ದಾಣದ ಅಕ್ಕ-ಪಕ್ಕದ ಸಿಸಿಟಿವಿಗಳನ್ನು ಪರಿಶೀಲನೆ ನಡೆಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ