AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ನಗರ ಪೊಲೀಸ್ ಆಯುಕ್ತರ ಸಮೀಪದ ಬಸ್​ ನಿಲ್ದಾಣವನ್ನೇ ಕದ್ದೊಯ್ದ ಖದೀಮರು

ಕಳ್ಳರು ಹಣ, ಬೈಕ್ ಸೇರಿದಂತೆ ಕೈಗೆ ಸಿಗುವ ವಸ್ತುಗಳನ್ನು ಕಳ್ಳತನ ಮಾಡುವುದನ್ನು ಕೇಳಿದ್ದೇವೆ. ಇಲ್ಲ, ಮನೆ-ಬ್ಯಾಂಕ್​ಗೆ ನುಗ್ಗಿ ಕೈಗೆ ಸಿಗುವ ಬೆಲೆಬಾಳುವ ವಸ್ತುಗಳನ್ನು ದೋಚಿಕೊಂಡು ಹೋಗುವುದನ್ನು ಕೇಳಿದ್ದೇವೆ. ಆದ್ರೆ, ಬೆಂಗಳೂರಿನಲ್ಲಿ ಪ್ರಯಾಣಿಕರಿಗಾಗಿ ನಿರ್ಮಾನಿಸಲಾಗಿದ್ದು ಬಸ್​ ನಿಲ್ದಾಣವನ್ನೇ ಕದ್ದೊಯ್ದಿದ್ದಾರೆ.

ಬೆಂಗಳೂರು ನಗರ ಪೊಲೀಸ್ ಆಯುಕ್ತರ ಸಮೀಪದ ಬಸ್​ ನಿಲ್ದಾಣವನ್ನೇ ಕದ್ದೊಯ್ದ ಖದೀಮರು
ಬಸ್​ ನಿಲ್ದಾಣ ನಿರ್ಮಿಸಲಾಗಿದ್ದ ಸ್ಥಳ
ಜಗದೀಶ ಬಿ.
| Edited By: |

Updated on: Oct 05, 2023 | 10:52 AM

Share

ಬೆಂಗಳೂರು, (ಅಕ್ಟೋಬರ್ 05): ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯ ಕೊಂಚ ದೂರದಲ್ಲೇ ಕಳ್ಳರು ತಮ್ಮ ಕೈಚಳಕ ತೋರಿಸಿದ್ದಾರೆ. ಹೌದು.. ಪೊಲೀಸ್ ಕಮಿಷನರ್ ಕಚೇರಿಯ ಹಿಂಭಾಗ,  ವಿಧಾನಸೌಧದಿಂದ 1 ಕಿ.ಮೀಗಿಂತ ಕಡಿಮೆ ದೂರದಲ್ಲಿರುವ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿ  ನಿರ್ಮಿಸಲಾಗಿದ್ದ ಪ್ರಯಾಣಿಕರ ತಂಗುದಾಣವನ್ನು (BMTC bus shelter )ಕದ್ದೊಯ್ದಿದ್ದಾರೆ. ನಿರ್ಮಿಸಿದ್ದ ಒಂದು ವಾರದೊಳಗೆ ಮಾಯವಾಗಿದ್ದು ಅಚ್ಚರಿಗೆ ಕಾರಣವಾಗಿದೆ.

ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿ 10 ಲಕ್ಷ ರೂಪಾಯಿ ವೆಚ್ಚದಲ್ಲಿ ಖಾಸಗಿ ಕಂಪನಿಯೊಂದು ಸ್ಟೀಲ್​ನಿಂದ ಬಿಎಂಟಿಸಿ ಬಸ್ ನಿಲ್ದಾಣವನ್ನು ನಿರ್ಮಿಸಿತ್ತು. ಆದ್ರೆ, ಒಂದು ತಿಂಗಳಲ್ಲಿ ಸ್ಥಳದಿಂದ ಬಸ್​ ನಿಲ್ದಾಣ ನಾಪತ್ತೆಯಾಗಿದೆ. ಕಂಪನಿಯ ಸಹಾಯಕ ಉಪಾಧ್ಯಕ್ಷ ಎನ್ ರವಿ ರೆಡ್ಡಿ ಅವರು ನಿರ್ಮಿಸಲಾಗಿದ್ದ ಬಸ್​ ನಿಲ್ದಾವನ್ನು ನೋಡಲು ಸ್ಥಳಕ್ಕೆ ಬಂದಿದ್ದಾರೆ. ಆದ್ರೆ, ಅಲ್ಲಿ ಬಸ್​ ನಿಲ್ದಾಣ ಇಲ್ಲದಿರುವುದು ಬೆಳಕಿಗೆ ಬಂದಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಸಿನಿಮಾ ಕಥೆಯಂತೆ ನಡೆದ ರಿಯಲ್ ಸ್ಟೋರಿ: ಚಾಕು ಹಿಡಿದು ಬೆದರಿಸಲು ಹೋದವ ಕೊಲೆಯಾದ

ಇದರಿಂದ ಅವಕ್ಕಾದ ಎನ್ ರವಿ ರೆಡ್ಡಿ, ಈ ಬಗ್ಗೆ ಬಿಬಿಎಂಪಿ ಬಳಿ ವಿಚಾರಿಸಿದ್ದಾರೆ. ತಂಗುದಾಣವನ್ನು ತಾವು ತೆರುವು ಮಾಡಿಲ್ಲ ಎಂದು ಬಿಬಿಎಂಪಿ ಸಹ ಹೇಳಿದೆ. ಬಳಿಕ ಕಂಪನಿ ಸೆಪ್ಟೆಂಬರ್ 30ರಂದು ಈ  ಘಟನೆ ಸಂಬಂಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ದೂರಿನ ಮೇರೆಗೆ ಪೊಲಿಸರು, ಕದ್ದುಕೊಂಡು ಹೋಗಿರುವ ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದು, ಬಸ್​ ನಿಲ್ದಾಣದ ಅಕ್ಕ-ಪಕ್ಕದ ಸಿಸಿಟಿವಿಗಳನ್ನು ಪರಿಶೀಲನೆ ನಡೆಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ