ಬೆಂಗಳೂರು ನಗರ ಪೊಲೀಸ್ ಆಯುಕ್ತರ ಸಮೀಪದ ಬಸ್​ ನಿಲ್ದಾಣವನ್ನೇ ಕದ್ದೊಯ್ದ ಖದೀಮರು

ಕಳ್ಳರು ಹಣ, ಬೈಕ್ ಸೇರಿದಂತೆ ಕೈಗೆ ಸಿಗುವ ವಸ್ತುಗಳನ್ನು ಕಳ್ಳತನ ಮಾಡುವುದನ್ನು ಕೇಳಿದ್ದೇವೆ. ಇಲ್ಲ, ಮನೆ-ಬ್ಯಾಂಕ್​ಗೆ ನುಗ್ಗಿ ಕೈಗೆ ಸಿಗುವ ಬೆಲೆಬಾಳುವ ವಸ್ತುಗಳನ್ನು ದೋಚಿಕೊಂಡು ಹೋಗುವುದನ್ನು ಕೇಳಿದ್ದೇವೆ. ಆದ್ರೆ, ಬೆಂಗಳೂರಿನಲ್ಲಿ ಪ್ರಯಾಣಿಕರಿಗಾಗಿ ನಿರ್ಮಾನಿಸಲಾಗಿದ್ದು ಬಸ್​ ನಿಲ್ದಾಣವನ್ನೇ ಕದ್ದೊಯ್ದಿದ್ದಾರೆ.

ಬೆಂಗಳೂರು ನಗರ ಪೊಲೀಸ್ ಆಯುಕ್ತರ ಸಮೀಪದ ಬಸ್​ ನಿಲ್ದಾಣವನ್ನೇ ಕದ್ದೊಯ್ದ ಖದೀಮರು
ಬಸ್​ ನಿಲ್ದಾಣ ನಿರ್ಮಿಸಲಾಗಿದ್ದ ಸ್ಥಳ
Follow us
| Updated By: ರಮೇಶ್ ಬಿ. ಜವಳಗೇರಾ

Updated on: Oct 05, 2023 | 10:52 AM

ಬೆಂಗಳೂರು, (ಅಕ್ಟೋಬರ್ 05): ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯ ಕೊಂಚ ದೂರದಲ್ಲೇ ಕಳ್ಳರು ತಮ್ಮ ಕೈಚಳಕ ತೋರಿಸಿದ್ದಾರೆ. ಹೌದು.. ಪೊಲೀಸ್ ಕಮಿಷನರ್ ಕಚೇರಿಯ ಹಿಂಭಾಗ,  ವಿಧಾನಸೌಧದಿಂದ 1 ಕಿ.ಮೀಗಿಂತ ಕಡಿಮೆ ದೂರದಲ್ಲಿರುವ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿ  ನಿರ್ಮಿಸಲಾಗಿದ್ದ ಪ್ರಯಾಣಿಕರ ತಂಗುದಾಣವನ್ನು (BMTC bus shelter )ಕದ್ದೊಯ್ದಿದ್ದಾರೆ. ನಿರ್ಮಿಸಿದ್ದ ಒಂದು ವಾರದೊಳಗೆ ಮಾಯವಾಗಿದ್ದು ಅಚ್ಚರಿಗೆ ಕಾರಣವಾಗಿದೆ.

ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿ 10 ಲಕ್ಷ ರೂಪಾಯಿ ವೆಚ್ಚದಲ್ಲಿ ಖಾಸಗಿ ಕಂಪನಿಯೊಂದು ಸ್ಟೀಲ್​ನಿಂದ ಬಿಎಂಟಿಸಿ ಬಸ್ ನಿಲ್ದಾಣವನ್ನು ನಿರ್ಮಿಸಿತ್ತು. ಆದ್ರೆ, ಒಂದು ತಿಂಗಳಲ್ಲಿ ಸ್ಥಳದಿಂದ ಬಸ್​ ನಿಲ್ದಾಣ ನಾಪತ್ತೆಯಾಗಿದೆ. ಕಂಪನಿಯ ಸಹಾಯಕ ಉಪಾಧ್ಯಕ್ಷ ಎನ್ ರವಿ ರೆಡ್ಡಿ ಅವರು ನಿರ್ಮಿಸಲಾಗಿದ್ದ ಬಸ್​ ನಿಲ್ದಾವನ್ನು ನೋಡಲು ಸ್ಥಳಕ್ಕೆ ಬಂದಿದ್ದಾರೆ. ಆದ್ರೆ, ಅಲ್ಲಿ ಬಸ್​ ನಿಲ್ದಾಣ ಇಲ್ಲದಿರುವುದು ಬೆಳಕಿಗೆ ಬಂದಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಸಿನಿಮಾ ಕಥೆಯಂತೆ ನಡೆದ ರಿಯಲ್ ಸ್ಟೋರಿ: ಚಾಕು ಹಿಡಿದು ಬೆದರಿಸಲು ಹೋದವ ಕೊಲೆಯಾದ

ಇದರಿಂದ ಅವಕ್ಕಾದ ಎನ್ ರವಿ ರೆಡ್ಡಿ, ಈ ಬಗ್ಗೆ ಬಿಬಿಎಂಪಿ ಬಳಿ ವಿಚಾರಿಸಿದ್ದಾರೆ. ತಂಗುದಾಣವನ್ನು ತಾವು ತೆರುವು ಮಾಡಿಲ್ಲ ಎಂದು ಬಿಬಿಎಂಪಿ ಸಹ ಹೇಳಿದೆ. ಬಳಿಕ ಕಂಪನಿ ಸೆಪ್ಟೆಂಬರ್ 30ರಂದು ಈ  ಘಟನೆ ಸಂಬಂಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ದೂರಿನ ಮೇರೆಗೆ ಪೊಲಿಸರು, ಕದ್ದುಕೊಂಡು ಹೋಗಿರುವ ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದು, ಬಸ್​ ನಿಲ್ದಾಣದ ಅಕ್ಕ-ಪಕ್ಕದ ಸಿಸಿಟಿವಿಗಳನ್ನು ಪರಿಶೀಲನೆ ನಡೆಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ