AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸ್​ಗಳಲ್ಲಿ ಮಹಿಳಾ ಆಸನಗಳನ್ನು ಆಕ್ರಮಿಸಿಕೊಂಡ ಪುರುಷರಿಗೆ ದಂಡ! 2021ರಲ್ಲಿ ಬಿಎಂಟಿಸಿ ಸಂಗ್ರಹಿಸಿದ ದಂಡದ ಮೊತ್ತ ಎಷ್ಟು ಲಕ್ಷ ಗೊತ್ತಾ?

2021ರಲ್ಲಿ ಟಿಕೆಟ್ ಪಡೆಯದೇ ಪ್ರಯಾಣ ಮಾಡಿದ ಪ್ರಯಾಣಿಕರಿಗೆ ಮತ್ತು ಬಿಎಂಟಿಸಿ ಬಸ್​ಗಳಲ್ಲಿ ಮಹಿಳೆಯರಿಗೆ ಮೀಸಲಿಟ್ಟ ಆಸನಗಳನ್ನು ಆಕ್ರಮಿಸಿಕೊಂಡ ಪುರುಷರಿಗೆ ಬಿಎಂಟಿಸಿ ದಂಡ ಹಾಕಿದೆ.

ಬಸ್​ಗಳಲ್ಲಿ ಮಹಿಳಾ ಆಸನಗಳನ್ನು ಆಕ್ರಮಿಸಿಕೊಂಡ ಪುರುಷರಿಗೆ ದಂಡ! 2021ರಲ್ಲಿ ಬಿಎಂಟಿಸಿ ಸಂಗ್ರಹಿಸಿದ ದಂಡದ ಮೊತ್ತ ಎಷ್ಟು ಲಕ್ಷ ಗೊತ್ತಾ?
ಬಿಎಂಟಿಸಿ ( ಸಾಂದರ್ಭಿಕ ಚಿತ್ರ)
TV9 Web
| Edited By: sandhya thejappa|

Updated on: Feb 26, 2022 | 11:09 AM

Share

ಬೆಂಗಳೂರು: ಸರ್ಕಾರಿ ಬಸ್​ಗಳಲ್ಲಿ ಮಹಿಳೆಯರಿಗಾಗಿ ಕೆಲ ಆಸನಗಳನ್ನು ಮೀಸಲಿಡಲಾಗುತ್ತದೆ. ಬಸ್​ನ ಮುಂಭಾಗದ ಕೆಲ ಆಸನಗಳು ಮಹಿಳೆಯರಿಗೆಂದು ನೀಡಲಾಗುತ್ತದೆ. ಹೀಗೆ ಮೀಸಲಿಟ್ಟ ಆಸನಗಳಲ್ಲಿ ಪುರುಷರು ಕೂರುವಂತಿಲ್ಲ. ಅಂತಹ ಆಸನಗಳನ್ನ ಆಕ್ರಮಿಸಿಕೊಂಡರೆ ಪುರುಷರಿಗೆ ದಂಡವನ್ನೂ (Fine) ಹಾಕಲಾಗುತ್ತದೆ. 2021ರಲ್ಲಿ ಮಹಿಳೆಯರ ಆಸನದಲ್ಲಿ ಕುಳಿತ ಪುರುಷರಿಗೆ ದಂಡ ಹಾಕಿದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಸುಮಾರು 1,00,300 ರೂ. ಹಣ ಸಂಗ್ರಹಿಸಿದೆ.

2021ರಲ್ಲಿ ಟಿಕೆಟ್ ಪಡೆಯದೇ ಪ್ರಯಾಣ ಮಾಡಿದ ಪ್ರಯಾಣಿಕರಿಗೆ ಮತ್ತು ಬಿಎಂಟಿಸಿ ಬಸ್​ಗಳಲ್ಲಿ ಮಹಿಳೆಯರಿಗೆ ಮೀಸಲಿಟ್ಟ ಆಸನಗಳನ್ನು ಆಕ್ರಮಿಸಿಕೊಂಡ ಪುರುಷರಿಗೆ ಬಿಎಂಟಿಸಿ ದಂಡ ಹಾಕಿದೆ. ಟಿಕೆಟ್ ಪಡೆಯದೇ ಪ್ರಯಾಣ ನಡೆಸಿದ ಪ್ರಯಾಣಿಕರ ದಂಡದ ಮೊತ್ತ 39,78,638 ರೂ.ಗಳಾಗಿದ್ದರೆ, ಮಹಿಳೆಯರಿಗೆ ಮೀಸಲಿಟ್ಟ ಆಸನಗಳನ್ನು ಬಳಸಿದ ಪುರುಷ ಪ್ರಯಾಣಿಕರಿಂದ 1,00,300 ರೂ. ದಂಡ ಸಂಗ್ರಹಿಸಿದೆ. ಅಂದರೆ 2021ರಲ್ಲಿ ಬಿಬಿಎಂಟಿ ಒಟ್ಟು 40 ಲಕ್ಷಕ್ಕೂ ಹೆಚ್ಚು ಹಣ ಸಂಗ್ರಹ ಮಾಡಿದೆ.

ಇನ್ನು 2022ರ ಜನವರಿಯಲ್ಲಿ ಬೆಂಗಳೂರು ಸೇರಿ ಸುತ್ತಮುತ್ತಲಿನ ಬಸ್ಗಳನ್ನು ಪರಿಶೀಲಿಸಿದ ನಿಗಮದ ತಪಾಸಣಾ ಸಿಬ್ಬಂದಿ 2,511 ಪ್ರಯಾಣಿಕರಿಗೆ 4,08,305 ರೂ. ದಂಡ ವಿಧಿಸಿದೆ.

ಈ ಬಗ್ಗೆ Bangalore Mirror ಜೊತೆ ಮಾತನಾಡಿದ ಅಧಿಕಾರಿಯೊಬ್ಬರು, ಮುಂದಿನ ತಿಂಗಳುಗಳಲ್ಲಿ ತಪಾಸಣೆಯನ್ನು ತೀವ್ರಗೊಳಿಸಲು ಸಿದ್ಧವಾಗಿದೆ. ಕೊರೊನಾ ಕಾರಣದಿಂದ 2021ರಲ್ಲಿ ಹೆಚ್ಚು ಕಾರ್ಯಾಚರಣೆಗಳನ್ನು ನಡೆಸಲಾಗಿಲ್ಲ. ಅಲ್ಲದೆ ಪ್ರಯಾಣಿಕರ ಸಂಖ್ಯೆಯೂ ಕಡಿಮೆಯಾಗಿತ್ತು ಅಂತ ತಿಳಿಸಿದ್ದಾರೆ. ಜೊತೆಗೆ ಈ ವರ್ಷ 2,377 ಟಿಕೆಟ್ ರಹಿತ ಪ್ರಯಾಣಿಕರಿಗೆ ದಂಡ ವಿಧಿಸಿದ ಬಿಎಂಟಿಸಿ ತಪಾಸಣಾ ಸಿಬ್ಬಂದಿ 3,94,905 ರೂ. ಹಣ ಸಂಹಗ್ರಹಿಸಿದೆ. ಹಾಗೂ ಮಹಿಳೆಯರ ಆಸನಗಳನ್ನ ಆಕ್ರಮಿಸಿಕೊಂಡ 134 ಪುರುಷ ಪ್ರಯಾಣಿಕರಿಂದ ಒಟ್ಟು 13,400 ರೂ. ಪಡೆಯಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ

ಧರ್ಮಸ್ಥಳದ ಕನ್ಯಾಡಿ ಬಳಿ ದಿನೇಶ್ ಕೊಲೆ ಪ್ರಕರಣ; ಟಿವಿ9ಗೆ ಹಲ್ಲೆ ಮಾಡಿದ ಸಿಸಿಟಿವಿ ದೃಶ್ಯ ಲಭ್ಯ

ನಂಜನಗೂಡು ಶ್ರೀಕಂಠೇಶ್ವರನ ಹುಂಡಿ ಹಣ ಏಣಿಕೆ; ಎರಡು ತಿಂಗಳಲ್ಲಿ 2 ಕೋಟಿ ರೂ. ಹಣ ಸಂಗ್ರಹ

Follow Us
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು