AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಕ್ತಿ ಯೋಜನೆ: ಬೇಕಾಬಿಟ್ಟಿಯಾಗಿ ಫ್ರೀ ಟಿಕೆಟ್​ ಹರಿಯುತ್ತಿದ್ದ ಬಿಎಂಟಿಸಿ ಕಂಡೆಕ್ಟರ್​ಗೆ ಕ್ಲಾಸ್ ತೆಗೆದುಕೊಂಡ ಮಹಿಳೆ

ಕಳೆದ ಒಂದು ವಾರದಲ್ಲಿ ಅಂದರೆ ಅ.11 ರಿಂದ ಅ.14ರವರೆಗೆ ನಾಲ್ಕು ನಿಗಮದ ಬಸ್​ಗಳಲ್ಲಿ 77,56,72,604 ಮಹಿಳೆಯರು ಸಂಚರಿಸಿದ್ದಾರೆ. ಮಹಿಳಾ ಪ್ರಯಾಣಿಕರ ಟಿಕೆಟ್​​ ಮೌಲ್ಯ 1808,45,54, 754 ಆಗಿದೆ.

ಶಕ್ತಿ ಯೋಜನೆ: ಬೇಕಾಬಿಟ್ಟಿಯಾಗಿ ಫ್ರೀ ಟಿಕೆಟ್​ ಹರಿಯುತ್ತಿದ್ದ ಬಿಎಂಟಿಸಿ ಕಂಡೆಕ್ಟರ್​ಗೆ ಕ್ಲಾಸ್ ತೆಗೆದುಕೊಂಡ ಮಹಿಳೆ
ಫ್ರೀ ಟಿಕೆಟ್​ ಹರಿದು ಬಿಸಾಡುತ್ತಿರುವ ಕಂಡಕ್ಟರ್​
ಕಿರಣ್​ ಸೂರ್ಯ
| Edited By: ವಿವೇಕ ಬಿರಾದಾರ|

Updated on: Oct 16, 2023 | 10:16 AM

Share

ಬೆಂಗಳೂರು ಅ.16: ರಾಜ್ಯ ಸರ್ಕಾರವು ಶಕ್ತಿ ಯೋಜನೆ (Shakti Yojana) ಜಾರಿ ಮಾಡಿದ್ದು, ಮಹಿಳೆಯರು ಸರ್ಕಾರಿ ಬಸ್​ಗಳಲ್ಲಿ (Government Buses) ಉಚಿತವಾಗಿ ಪ್ರಯಾಣಿಸುತ್ತಿದ್ದಾರೆ. ಸರ್ಕಾರಿ ಬಸ್​​ಗಳಲ್ಲಿ ನಿರ್ವಾಹಕರು (Conductor) ಮಹಿಳೆಯರಿಗೆ ಫ್ರೀ ಟಿಕೆಟ್​ ನೀಡುತ್ತಿದ್ದು, ಈ ಟಿಕೆಟ್​​ನ ಹಣವನ್ನು ಸರ್ಕಾರ ನಿಗಮಗಳಿಗೆ ನೀಡುತ್ತದೆ. ಕಳೆದ ಒಂದು ವಾರದಲ್ಲಿ ಅಂದರೆ ಅ.11 ರಿಂದ ಅ.14ರವರೆಗೆ ನಾಲ್ಕು ನಿಗಮದ ಬಸ್​ಗಳಲ್ಲಿ 77,56,72,604 ಮಹಿಳೆಯರು ಸಂಚರಿಸಿದ್ದಾರೆ. ಮಹಿಳಾ ಪ್ರಯಾಣಿಕರ ಟಿಕೆಟ್​​ ಮೌಲ್ಯ 1808,45,54, 754 ಆಗಿದೆ. ಇನ್ನು ಕಂಡಕ್ಟರ್​​ಗಳು ಮಹಿಳಾ ಪ್ರಯಾಣಿಕರಿಗೆ ನೀಡಿದ ಟಿಕೆಟ್​ ಸಂಖ್ಯೆಗಳನ್ನು ನಿಗಮಗಳಿಗೆ ತಪ್ಪಾಗಿ ನೀಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಇನ್ನು ಹೆಚ್ಚಿನ ಇನ್ಷೆಂಟಿವ್​ ಆಸೆಗೆ ಬಿಎಂಟಿಸಿ ಕಂಡೆಕ್ಟರೊಬ್ಬ ಬೇಕಾ ಬಿಟ್ಟಿಯಾಗಿ ಫ್ರೀ ಟಿಕೆಟ್​ಗಳನ್ನು ಹರಿಯುತ್ತಿರುವ ವೇಳೆ ಸಿಕ್ಕಿಬಿದ್ದಾರೆ. ಮೆಜೆಸ್ಟಿಕ್​ನಿಂದ – ತಾವರಕೆರೆಗೆ ಹೋಗುವ (242-ಬಿ) ಬಿಬಿಎಂಟಿಸಿ ಬಸ್​​ನ ಕಂಡೆಕ್ಟರ್ ನಿನ್ನೆ (ಅ.15) ರಂದು ಸುಖಾಸುಮ್ಮನೇ ಫ್ರೀ ಟಿಕೆಟ್ ಹರಿದು ಬಿಸಾಕುತ್ತಿದ್ದನು. ಇದನ್ನು ಕಂಡ ಮಹಿಳಾ ಪ್ರಯಾಣಿಕರೊಬ್ಬರು “ಯಾಕೆ ಟಿಕೆಟ್ ಹರಿದು ಬಿಸಾಕುತ್ತಿದ್ದೀರಿ ಎಂದು ಪ್ರಶ್ನೆ ಮಾಡಿದ್ದಾರೆ. ಅಲ್ಲದೆ ನಿಮ್ಮಂತವರಿಂದಲೇ ಶಕ್ತಿ ಯೋಜನೆಗೆ ಕೆಟ್ಟ ಹೆಸರೆಂದು” ತರಾಟೆಗೆ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ: ಸರ್ಕಾರದ ಗ್ಯಾರಂಟಿಗೆ ಬಲಿಪಶುಗಳಾಗುತ್ತಿರುವ ಸರಕಾರಿ ಬಸ್ ನಿರ್ವಾಹಕರು: ಶಕ್ತಿ ಯೋಜನೆ ಜಾರಿ ಬಳಿಕ 300 ಜನ ಕಂಡಕ್ಟರ್ಸ್​​​ ಸಸ್ಪೆಂಡ್

ಈ ಮೂಲಕ ಕಂಡೆಕ್ಟರ್ ವಿಭಾಗಕ್ಕೆ ಹೆಚ್ಚಿನ ಪ್ರಯಾಣಿಕರ ಲೆಕ್ಕವನ್ನು ತೋರಿಸಲು ಮುಂದಾಗಿದ್ದಾರೆ. ಅಲ್ಲದೆ ಹೆಚ್ಚು ಫ್ರೀ ಟಿಕೆಟ್​ ​ಹರಿದರೇ ತನಗೆ ಹೆಚ್ಚು ಇನ್ಷೆಂಟಿವ್​ ಸಿಗುತ್ತದೆ ಎಂಬ ಆಸೆಯಿಂದ ಫ್ರೀ ಟಿಕೆಟ್​ ಹರಿದಿದ್ದಾರೆ ಎಂದು ಪ್ರಯಾಣಿಕರು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್