AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಕ್ತಿ ಯೋಜನೆ: ಬೇಕಾಬಿಟ್ಟಿಯಾಗಿ ಫ್ರೀ ಟಿಕೆಟ್​ ಹರಿಯುತ್ತಿದ್ದ ಬಿಎಂಟಿಸಿ ಕಂಡೆಕ್ಟರ್​ಗೆ ಕ್ಲಾಸ್ ತೆಗೆದುಕೊಂಡ ಮಹಿಳೆ

ಕಳೆದ ಒಂದು ವಾರದಲ್ಲಿ ಅಂದರೆ ಅ.11 ರಿಂದ ಅ.14ರವರೆಗೆ ನಾಲ್ಕು ನಿಗಮದ ಬಸ್​ಗಳಲ್ಲಿ 77,56,72,604 ಮಹಿಳೆಯರು ಸಂಚರಿಸಿದ್ದಾರೆ. ಮಹಿಳಾ ಪ್ರಯಾಣಿಕರ ಟಿಕೆಟ್​​ ಮೌಲ್ಯ 1808,45,54, 754 ಆಗಿದೆ.

ಶಕ್ತಿ ಯೋಜನೆ: ಬೇಕಾಬಿಟ್ಟಿಯಾಗಿ ಫ್ರೀ ಟಿಕೆಟ್​ ಹರಿಯುತ್ತಿದ್ದ ಬಿಎಂಟಿಸಿ ಕಂಡೆಕ್ಟರ್​ಗೆ ಕ್ಲಾಸ್ ತೆಗೆದುಕೊಂಡ ಮಹಿಳೆ
ಫ್ರೀ ಟಿಕೆಟ್​ ಹರಿದು ಬಿಸಾಡುತ್ತಿರುವ ಕಂಡಕ್ಟರ್​
Kiran Surya
| Edited By: |

Updated on: Oct 16, 2023 | 10:16 AM

Share

ಬೆಂಗಳೂರು ಅ.16: ರಾಜ್ಯ ಸರ್ಕಾರವು ಶಕ್ತಿ ಯೋಜನೆ (Shakti Yojana) ಜಾರಿ ಮಾಡಿದ್ದು, ಮಹಿಳೆಯರು ಸರ್ಕಾರಿ ಬಸ್​ಗಳಲ್ಲಿ (Government Buses) ಉಚಿತವಾಗಿ ಪ್ರಯಾಣಿಸುತ್ತಿದ್ದಾರೆ. ಸರ್ಕಾರಿ ಬಸ್​​ಗಳಲ್ಲಿ ನಿರ್ವಾಹಕರು (Conductor) ಮಹಿಳೆಯರಿಗೆ ಫ್ರೀ ಟಿಕೆಟ್​ ನೀಡುತ್ತಿದ್ದು, ಈ ಟಿಕೆಟ್​​ನ ಹಣವನ್ನು ಸರ್ಕಾರ ನಿಗಮಗಳಿಗೆ ನೀಡುತ್ತದೆ. ಕಳೆದ ಒಂದು ವಾರದಲ್ಲಿ ಅಂದರೆ ಅ.11 ರಿಂದ ಅ.14ರವರೆಗೆ ನಾಲ್ಕು ನಿಗಮದ ಬಸ್​ಗಳಲ್ಲಿ 77,56,72,604 ಮಹಿಳೆಯರು ಸಂಚರಿಸಿದ್ದಾರೆ. ಮಹಿಳಾ ಪ್ರಯಾಣಿಕರ ಟಿಕೆಟ್​​ ಮೌಲ್ಯ 1808,45,54, 754 ಆಗಿದೆ. ಇನ್ನು ಕಂಡಕ್ಟರ್​​ಗಳು ಮಹಿಳಾ ಪ್ರಯಾಣಿಕರಿಗೆ ನೀಡಿದ ಟಿಕೆಟ್​ ಸಂಖ್ಯೆಗಳನ್ನು ನಿಗಮಗಳಿಗೆ ತಪ್ಪಾಗಿ ನೀಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಇನ್ನು ಹೆಚ್ಚಿನ ಇನ್ಷೆಂಟಿವ್​ ಆಸೆಗೆ ಬಿಎಂಟಿಸಿ ಕಂಡೆಕ್ಟರೊಬ್ಬ ಬೇಕಾ ಬಿಟ್ಟಿಯಾಗಿ ಫ್ರೀ ಟಿಕೆಟ್​ಗಳನ್ನು ಹರಿಯುತ್ತಿರುವ ವೇಳೆ ಸಿಕ್ಕಿಬಿದ್ದಾರೆ. ಮೆಜೆಸ್ಟಿಕ್​ನಿಂದ – ತಾವರಕೆರೆಗೆ ಹೋಗುವ (242-ಬಿ) ಬಿಬಿಎಂಟಿಸಿ ಬಸ್​​ನ ಕಂಡೆಕ್ಟರ್ ನಿನ್ನೆ (ಅ.15) ರಂದು ಸುಖಾಸುಮ್ಮನೇ ಫ್ರೀ ಟಿಕೆಟ್ ಹರಿದು ಬಿಸಾಕುತ್ತಿದ್ದನು. ಇದನ್ನು ಕಂಡ ಮಹಿಳಾ ಪ್ರಯಾಣಿಕರೊಬ್ಬರು “ಯಾಕೆ ಟಿಕೆಟ್ ಹರಿದು ಬಿಸಾಕುತ್ತಿದ್ದೀರಿ ಎಂದು ಪ್ರಶ್ನೆ ಮಾಡಿದ್ದಾರೆ. ಅಲ್ಲದೆ ನಿಮ್ಮಂತವರಿಂದಲೇ ಶಕ್ತಿ ಯೋಜನೆಗೆ ಕೆಟ್ಟ ಹೆಸರೆಂದು” ತರಾಟೆಗೆ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ: ಸರ್ಕಾರದ ಗ್ಯಾರಂಟಿಗೆ ಬಲಿಪಶುಗಳಾಗುತ್ತಿರುವ ಸರಕಾರಿ ಬಸ್ ನಿರ್ವಾಹಕರು: ಶಕ್ತಿ ಯೋಜನೆ ಜಾರಿ ಬಳಿಕ 300 ಜನ ಕಂಡಕ್ಟರ್ಸ್​​​ ಸಸ್ಪೆಂಡ್

ಈ ಮೂಲಕ ಕಂಡೆಕ್ಟರ್ ವಿಭಾಗಕ್ಕೆ ಹೆಚ್ಚಿನ ಪ್ರಯಾಣಿಕರ ಲೆಕ್ಕವನ್ನು ತೋರಿಸಲು ಮುಂದಾಗಿದ್ದಾರೆ. ಅಲ್ಲದೆ ಹೆಚ್ಚು ಫ್ರೀ ಟಿಕೆಟ್​ ​ಹರಿದರೇ ತನಗೆ ಹೆಚ್ಚು ಇನ್ಷೆಂಟಿವ್​ ಸಿಗುತ್ತದೆ ಎಂಬ ಆಸೆಯಿಂದ ಫ್ರೀ ಟಿಕೆಟ್​ ಹರಿದಿದ್ದಾರೆ ಎಂದು ಪ್ರಯಾಣಿಕರು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!