AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಕ್ತಿ ಯೋಜನೆ: ಬೇಕಾಬಿಟ್ಟಿಯಾಗಿ ಫ್ರೀ ಟಿಕೆಟ್​ ಹರಿಯುತ್ತಿದ್ದ ಬಿಎಂಟಿಸಿ ಕಂಡೆಕ್ಟರ್​ಗೆ ಕ್ಲಾಸ್ ತೆಗೆದುಕೊಂಡ ಮಹಿಳೆ

ಕಳೆದ ಒಂದು ವಾರದಲ್ಲಿ ಅಂದರೆ ಅ.11 ರಿಂದ ಅ.14ರವರೆಗೆ ನಾಲ್ಕು ನಿಗಮದ ಬಸ್​ಗಳಲ್ಲಿ 77,56,72,604 ಮಹಿಳೆಯರು ಸಂಚರಿಸಿದ್ದಾರೆ. ಮಹಿಳಾ ಪ್ರಯಾಣಿಕರ ಟಿಕೆಟ್​​ ಮೌಲ್ಯ 1808,45,54, 754 ಆಗಿದೆ.

ಶಕ್ತಿ ಯೋಜನೆ: ಬೇಕಾಬಿಟ್ಟಿಯಾಗಿ ಫ್ರೀ ಟಿಕೆಟ್​ ಹರಿಯುತ್ತಿದ್ದ ಬಿಎಂಟಿಸಿ ಕಂಡೆಕ್ಟರ್​ಗೆ ಕ್ಲಾಸ್ ತೆಗೆದುಕೊಂಡ ಮಹಿಳೆ
ಫ್ರೀ ಟಿಕೆಟ್​ ಹರಿದು ಬಿಸಾಡುತ್ತಿರುವ ಕಂಡಕ್ಟರ್​
ಕಿರಣ್​ ಸೂರ್ಯ
| Edited By: ವಿವೇಕ ಬಿರಾದಾರ|

Updated on: Oct 16, 2023 | 10:16 AM

Share

ಬೆಂಗಳೂರು ಅ.16: ರಾಜ್ಯ ಸರ್ಕಾರವು ಶಕ್ತಿ ಯೋಜನೆ (Shakti Yojana) ಜಾರಿ ಮಾಡಿದ್ದು, ಮಹಿಳೆಯರು ಸರ್ಕಾರಿ ಬಸ್​ಗಳಲ್ಲಿ (Government Buses) ಉಚಿತವಾಗಿ ಪ್ರಯಾಣಿಸುತ್ತಿದ್ದಾರೆ. ಸರ್ಕಾರಿ ಬಸ್​​ಗಳಲ್ಲಿ ನಿರ್ವಾಹಕರು (Conductor) ಮಹಿಳೆಯರಿಗೆ ಫ್ರೀ ಟಿಕೆಟ್​ ನೀಡುತ್ತಿದ್ದು, ಈ ಟಿಕೆಟ್​​ನ ಹಣವನ್ನು ಸರ್ಕಾರ ನಿಗಮಗಳಿಗೆ ನೀಡುತ್ತದೆ. ಕಳೆದ ಒಂದು ವಾರದಲ್ಲಿ ಅಂದರೆ ಅ.11 ರಿಂದ ಅ.14ರವರೆಗೆ ನಾಲ್ಕು ನಿಗಮದ ಬಸ್​ಗಳಲ್ಲಿ 77,56,72,604 ಮಹಿಳೆಯರು ಸಂಚರಿಸಿದ್ದಾರೆ. ಮಹಿಳಾ ಪ್ರಯಾಣಿಕರ ಟಿಕೆಟ್​​ ಮೌಲ್ಯ 1808,45,54, 754 ಆಗಿದೆ. ಇನ್ನು ಕಂಡಕ್ಟರ್​​ಗಳು ಮಹಿಳಾ ಪ್ರಯಾಣಿಕರಿಗೆ ನೀಡಿದ ಟಿಕೆಟ್​ ಸಂಖ್ಯೆಗಳನ್ನು ನಿಗಮಗಳಿಗೆ ತಪ್ಪಾಗಿ ನೀಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಇನ್ನು ಹೆಚ್ಚಿನ ಇನ್ಷೆಂಟಿವ್​ ಆಸೆಗೆ ಬಿಎಂಟಿಸಿ ಕಂಡೆಕ್ಟರೊಬ್ಬ ಬೇಕಾ ಬಿಟ್ಟಿಯಾಗಿ ಫ್ರೀ ಟಿಕೆಟ್​ಗಳನ್ನು ಹರಿಯುತ್ತಿರುವ ವೇಳೆ ಸಿಕ್ಕಿಬಿದ್ದಾರೆ. ಮೆಜೆಸ್ಟಿಕ್​ನಿಂದ – ತಾವರಕೆರೆಗೆ ಹೋಗುವ (242-ಬಿ) ಬಿಬಿಎಂಟಿಸಿ ಬಸ್​​ನ ಕಂಡೆಕ್ಟರ್ ನಿನ್ನೆ (ಅ.15) ರಂದು ಸುಖಾಸುಮ್ಮನೇ ಫ್ರೀ ಟಿಕೆಟ್ ಹರಿದು ಬಿಸಾಕುತ್ತಿದ್ದನು. ಇದನ್ನು ಕಂಡ ಮಹಿಳಾ ಪ್ರಯಾಣಿಕರೊಬ್ಬರು “ಯಾಕೆ ಟಿಕೆಟ್ ಹರಿದು ಬಿಸಾಕುತ್ತಿದ್ದೀರಿ ಎಂದು ಪ್ರಶ್ನೆ ಮಾಡಿದ್ದಾರೆ. ಅಲ್ಲದೆ ನಿಮ್ಮಂತವರಿಂದಲೇ ಶಕ್ತಿ ಯೋಜನೆಗೆ ಕೆಟ್ಟ ಹೆಸರೆಂದು” ತರಾಟೆಗೆ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ: ಸರ್ಕಾರದ ಗ್ಯಾರಂಟಿಗೆ ಬಲಿಪಶುಗಳಾಗುತ್ತಿರುವ ಸರಕಾರಿ ಬಸ್ ನಿರ್ವಾಹಕರು: ಶಕ್ತಿ ಯೋಜನೆ ಜಾರಿ ಬಳಿಕ 300 ಜನ ಕಂಡಕ್ಟರ್ಸ್​​​ ಸಸ್ಪೆಂಡ್

ಈ ಮೂಲಕ ಕಂಡೆಕ್ಟರ್ ವಿಭಾಗಕ್ಕೆ ಹೆಚ್ಚಿನ ಪ್ರಯಾಣಿಕರ ಲೆಕ್ಕವನ್ನು ತೋರಿಸಲು ಮುಂದಾಗಿದ್ದಾರೆ. ಅಲ್ಲದೆ ಹೆಚ್ಚು ಫ್ರೀ ಟಿಕೆಟ್​ ​ಹರಿದರೇ ತನಗೆ ಹೆಚ್ಚು ಇನ್ಷೆಂಟಿವ್​ ಸಿಗುತ್ತದೆ ಎಂಬ ಆಸೆಯಿಂದ ಫ್ರೀ ಟಿಕೆಟ್​ ಹರಿದಿದ್ದಾರೆ ಎಂದು ಪ್ರಯಾಣಿಕರು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ
ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ; ಜನರಿಂದ ತುಂಬಿ ಹೋಯ್ತು ಕೆ.ಆರ್ ಮಾರ್ಕೆಟ್!
ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ; ಜನರಿಂದ ತುಂಬಿ ಹೋಯ್ತು ಕೆ.ಆರ್ ಮಾರ್ಕೆಟ್!
ಶಿಗ್ಗಾಂವಿ ದೇವಾಲಯದ ಆವರಣದಲ್ಲಿ ಮೂತ್ರ ವಿಸರ್ಜನೆ ಮಾಡಿದ ಯುವಕ
ಶಿಗ್ಗಾಂವಿ ದೇವಾಲಯದ ಆವರಣದಲ್ಲಿ ಮೂತ್ರ ವಿಸರ್ಜನೆ ಮಾಡಿದ ಯುವಕ