AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಚಾರ ಮಾಡದಿದ್ದರೂ ಬಿಎಂಟಿಸಿ ಬಸ್​ಗೆ ಬೇಕಂತೆ ಡೀಸೆಲ್! 4 ಸಾವಿರ ಲೀಟರ್ ಡೀಸೆಲ್ ಹಣ ಲೂಟಿ

ಈ ಬಿಎಂಟಿಸಿ ಅಧಿಕಾರಿಗಳನ್ನು ಹೇಳುವವರು, ಕೇಳುವವರು ಯಾರೂ ಇಲ್ಲ ಎಂಬಂತಾಗಿದೆ ಪರಿಸ್ಥಿತಿ. ಬಸ್​​ಗಳು ಸಂಚಾರ ಮಾಡದೇ ಇದ್ದರೂ ಸುಳ್ಳು ಲೆಕ್ಕ ಕೊಟ್ಟು, ಸಾವಿರಾರು ಲೀಟರ್ ಡಿಸೇಲ್ ಕಳ್ಳತನ ಮಾಡಿರುವ ಬಗ್ಗೆ ಸುಮ್ಮನಹಳ್ಳಿ ಡಿಪೋ ಅಧಿಕಾರಿಗಳ ವಿರುದ್ಧ ದೂರುಗಳು ಕೇಳಿ ಬಂದಿವೆ. ಆದರೂ ಸಂಬಂಧಪಟ್ಟವರು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ.

ಸಂಚಾರ ಮಾಡದಿದ್ದರೂ ಬಿಎಂಟಿಸಿ ಬಸ್​ಗೆ ಬೇಕಂತೆ ಡೀಸೆಲ್! 4 ಸಾವಿರ ಲೀಟರ್ ಡೀಸೆಲ್ ಹಣ ಲೂಟಿ
ಸುಮ್ಮನಹಳ್ಳಿ ಡಿಪೋ
ಕಿರಣ್​ ಸೂರ್ಯ
| Edited By: |

Updated on: Jul 07, 2025 | 8:50 AM

Share

ಬೆಂಗಳೂರು, ಜುಲೈ 7: ಬಿಎಂಟಿಸಿಯಲ್ಲಿ (BMTC) 54 ಡಿಪೋಗಳಿದ್ದು, ಸುಮಾರು 6800 ಬಸ್​​ಗಳಿವೆ. ಅದರಲ್ಲಿ ಪ್ರತಿದಿನ ಡಿಪೋದಿಂದ ಒಪ್ಪಂದದ ಮೇರೆಗೆ ನೂರಾರು ಬಸ್​​ಗಳು (BMTC Buses) ಬಾಡಿಗೆಗೆ ಹೋಗುತ್ತವೆ. ಈ ವೇಳೆ, ಡಿಪೋದ ಹಿರಿಯ ಅಧಿಕಾರಿಗಳು ಡ್ರೈವರ್ ಮತ್ತು ಕಂಡಕ್ಟರ್​ಗಳನ್ನು ಸೆಟ್ ಮಾಡಿಕೊಂಡು ಸುಳ್ಳು ಲೆಕ್ಕ ಕೊಟ್ಟು ಡಿಸೇಲ್ ಕಳ್ಳತನ ಮಾಡುತ್ತಿರುವ ಆರೋಪ ಕೇಳಿಬಂದಿದೆ. ಇದೀಗ ಇಂತಹದ್ದೇ ಪ್ರಕರಣ ಬೆಳಕಿಗೆ ಬಂದಿದೆ. ಘಟಕ 31 ರ ಸುಮ್ಮನಹಳ್ಳಿ ಡಿಪೋದಿಂದ ಸಿಸಿ ಕಾಂಟ್ಯಾಕ್ಟ್ ಕ್ಯಾರೇಜ್ ಮೇಲೆ ಬೇರೆಬೇರೆ ಊರಿಗೆ ಮತ್ತು ಮದುವೆ-ಶುಭ ಸಮಾರಂಭಗಳಿಗೆ ಬಿಎಂಟಿಸಿ ಬಸ್​​ಗಳನ್ನು ತೆಗೆದುಕೊಂಡು ಹೋಗಿದ್ದಾರೆ. ಈ ವೇಳೆ, ಬಸ್ ಕಡಿಮೆ ದೂರ ಸಂಚಾರ ಮಾಡಿದ್ದರೂ ಹೆಚ್ಚಿನ ಸಂಚಾರ ಮಾಡಿದೆ ಎಂದು ಲೆಕ್ಕ ತೋರಿಸಿ ಡಿಪೋದ ಹಿರಿಯ ಅಧಿಕಾರಿಗಳು ಸುಮಾರು 4 ಸಾವಿರ ಲೀಟರ್​ನಷ್ಟು ಡಿಸೇಲ್ ಕಳವು ಮಾಡಿ ಬಿಎಂಟಿಸಿಗೆ ಲಕ್ಷಾಂತರ ರುಪಾಯಿ ಮೋಸ ಮಾಡಿರುವ ಆರೋಪ ಕೇಳಿ ಬಂದಿದೆ.

ಈ ಆರೋಪದ ಬಗ್ಗೆ ದಾಖಲೆ ಸಮೇತ ಬಿಎಂಟಿಸಿಯ ಮುಖ್ಯ ಕಚೇರಿಯ ಹಿರಿಯ ಅಧಿಕಾರಿಗಳಿಗೆ ದೂರು ನೀಡಿದರೂ ಯಾವುದೇ ಕ್ರಮಗೊಳ್ಳಲು ಮುಂದಾಗಿಲ್ಲ ಎಂಬ ಆರೋಪವೂ ಕೇಳಿಬಂದಿದೆ. ಈ ಅಕ್ರಮದಲ್ಲಿ ಹಿರಿಯ ಅಧಿಕಾರಿಗಳೇ ಶಾಮೀಲಾಗಿದ್ದಾರೆ ಎಂಬ ಆರೋಪವೂ ಇದೆ.

ಈಗ ಬೆಳಕಿಗೆ ಬಂದಿರುವುದು ಸುಮ್ಮನಹಳ್ಳಿ ಡಿಪೋ ಅಕ್ರಮ ಮಾತ್ರ. ಸರಿಯಾಗಿ ತನಿಖೆ ಮಾಡಿದರೆ 54 ಡಿಪೋಗಳ ಅಕ್ರಮ ಕೂಡ ಬಯಲಾಗುತ್ತದೆ ಎಂದು ಸಾರಿಗೆ ನೌಕರರ ಮುಖಂಡರು ಹೇಳಿದ್ದಾರೆ.

ಇದನ್ನೂ ಓದಿ
Image
ಪಾರ್ಟಿಗಳಲ್ಲಿ ಡ್ರಗ್ಸ್ ಸಿಕ್ಕರೆ ರೆಸಾರ್ಟ್, ಹೋಂ ಸ್ಟೇ ಮಾಲೀಕರ ಮೇಲೆ ಕೇಸ್
Image
ಸಿಎಂ ಬದಲಾವಣೆ ಚರ್ಚೆಗೆ ಸ್ವಾಮೀಜಿಗಳೂ ಎಂಟ್ರಿ
Image
ಹೃದಯಾಘಾತ ಪ್ರಕರಣ: ಸಿಎಂ ಹೇಳಿಕೆ ಬೇಜವಾಬ್ದಾರಿ ಪರಮಾವಧಿ, ಜೋಶಿ
Image
ಸಿದ್ದರಾಮಯ್ಯಗೆ ಹೈಕಮಾಂಡ್ ಮಹತ್ವದ ಹುದ್ದೆ: ಅಂತೆ-ಕಂತೆಗಳಿಗೆ ಸಿಎಂ ತೆರೆ

ಈ ಬಗ್ಗೆ ‘ಟಿವಿ9’ಗೆ ಪ್ರತಿಕ್ರಿಯೆ ನೀಡಿದ ಸಾರಿಗೆ ಸಚಿವರು, ಈ ವಿಚಾರ ‘ಟಿವಿ9’ ವರದಿಯಿಂದ ನಮಗೆ ಗೊತ್ತಾಗಿದೆ. ಬಿಎಂಟಿಸಿ ಎಂಡಿ ಅವರಿಗೆ ಈ ಬಗ್ಗೆ ತನಿಖೆ ಮಾಡಲು ಸೂಚನೆ ನೀಡುತ್ತೇನೆ ಎಂದಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಪಾರ್ಟಿಗಳಲ್ಲಿ ಡ್ರಗ್ಸ್ ಕಂಡುಬಂದರೆ ರೆಸಾರ್ಟ್, ಹೋಂ ಸ್ಟೇ, ಹೋಟೆಲ್ ಮಾಲೀಕರ ಮೇಲೂ ಕೇಸ್

ಒಟ್ಟಿನಲ್ಲಿ ಬಿಎಂಟಿಸಿ ಚಾಲಕ, ನಿರ್ವಾಹಕರು ಒಂದು ಅಥವಾ ಎರಡು ರೂ. ಕಡಿಮೆ ಲೆಕ್ಕ ತೋರಿಸಿದರೆ ಕೂಡಲೇ ಅವರನ್ನು ಅಮಾನತು ಮಾಡುವ ಬಿಎಂಟಿಸಿಯ ಹಿರಿಯ ಅಧಿಕಾರಿಗಳು, ಇದೀಗ ಅಧಿಕಾರಿಗಳೇ ಲಕ್ಷಾಂತರ ರೂಪಾಯಿ ವಂಚನೆ ಮಾಡಿದರೂ ಮೌನವಾಗಿರುವುದು ಸಾಕಷ್ಟು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’