AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಚಾರ ಮಾಡದಿದ್ದರೂ ಬಿಎಂಟಿಸಿ ಬಸ್​ಗೆ ಬೇಕಂತೆ ಡೀಸೆಲ್! 4 ಸಾವಿರ ಲೀಟರ್ ಡೀಸೆಲ್ ಹಣ ಲೂಟಿ

ಈ ಬಿಎಂಟಿಸಿ ಅಧಿಕಾರಿಗಳನ್ನು ಹೇಳುವವರು, ಕೇಳುವವರು ಯಾರೂ ಇಲ್ಲ ಎಂಬಂತಾಗಿದೆ ಪರಿಸ್ಥಿತಿ. ಬಸ್​​ಗಳು ಸಂಚಾರ ಮಾಡದೇ ಇದ್ದರೂ ಸುಳ್ಳು ಲೆಕ್ಕ ಕೊಟ್ಟು, ಸಾವಿರಾರು ಲೀಟರ್ ಡಿಸೇಲ್ ಕಳ್ಳತನ ಮಾಡಿರುವ ಬಗ್ಗೆ ಸುಮ್ಮನಹಳ್ಳಿ ಡಿಪೋ ಅಧಿಕಾರಿಗಳ ವಿರುದ್ಧ ದೂರುಗಳು ಕೇಳಿ ಬಂದಿವೆ. ಆದರೂ ಸಂಬಂಧಪಟ್ಟವರು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ.

ಸಂಚಾರ ಮಾಡದಿದ್ದರೂ ಬಿಎಂಟಿಸಿ ಬಸ್​ಗೆ ಬೇಕಂತೆ ಡೀಸೆಲ್! 4 ಸಾವಿರ ಲೀಟರ್ ಡೀಸೆಲ್ ಹಣ ಲೂಟಿ
ಸುಮ್ಮನಹಳ್ಳಿ ಡಿಪೋ
Kiran Surya
| Edited By: |

Updated on: Jul 07, 2025 | 8:50 AM

Share

ಬೆಂಗಳೂರು, ಜುಲೈ 7: ಬಿಎಂಟಿಸಿಯಲ್ಲಿ (BMTC) 54 ಡಿಪೋಗಳಿದ್ದು, ಸುಮಾರು 6800 ಬಸ್​​ಗಳಿವೆ. ಅದರಲ್ಲಿ ಪ್ರತಿದಿನ ಡಿಪೋದಿಂದ ಒಪ್ಪಂದದ ಮೇರೆಗೆ ನೂರಾರು ಬಸ್​​ಗಳು (BMTC Buses) ಬಾಡಿಗೆಗೆ ಹೋಗುತ್ತವೆ. ಈ ವೇಳೆ, ಡಿಪೋದ ಹಿರಿಯ ಅಧಿಕಾರಿಗಳು ಡ್ರೈವರ್ ಮತ್ತು ಕಂಡಕ್ಟರ್​ಗಳನ್ನು ಸೆಟ್ ಮಾಡಿಕೊಂಡು ಸುಳ್ಳು ಲೆಕ್ಕ ಕೊಟ್ಟು ಡಿಸೇಲ್ ಕಳ್ಳತನ ಮಾಡುತ್ತಿರುವ ಆರೋಪ ಕೇಳಿಬಂದಿದೆ. ಇದೀಗ ಇಂತಹದ್ದೇ ಪ್ರಕರಣ ಬೆಳಕಿಗೆ ಬಂದಿದೆ. ಘಟಕ 31 ರ ಸುಮ್ಮನಹಳ್ಳಿ ಡಿಪೋದಿಂದ ಸಿಸಿ ಕಾಂಟ್ಯಾಕ್ಟ್ ಕ್ಯಾರೇಜ್ ಮೇಲೆ ಬೇರೆಬೇರೆ ಊರಿಗೆ ಮತ್ತು ಮದುವೆ-ಶುಭ ಸಮಾರಂಭಗಳಿಗೆ ಬಿಎಂಟಿಸಿ ಬಸ್​​ಗಳನ್ನು ತೆಗೆದುಕೊಂಡು ಹೋಗಿದ್ದಾರೆ. ಈ ವೇಳೆ, ಬಸ್ ಕಡಿಮೆ ದೂರ ಸಂಚಾರ ಮಾಡಿದ್ದರೂ ಹೆಚ್ಚಿನ ಸಂಚಾರ ಮಾಡಿದೆ ಎಂದು ಲೆಕ್ಕ ತೋರಿಸಿ ಡಿಪೋದ ಹಿರಿಯ ಅಧಿಕಾರಿಗಳು ಸುಮಾರು 4 ಸಾವಿರ ಲೀಟರ್​ನಷ್ಟು ಡಿಸೇಲ್ ಕಳವು ಮಾಡಿ ಬಿಎಂಟಿಸಿಗೆ ಲಕ್ಷಾಂತರ ರುಪಾಯಿ ಮೋಸ ಮಾಡಿರುವ ಆರೋಪ ಕೇಳಿ ಬಂದಿದೆ.

ಈ ಆರೋಪದ ಬಗ್ಗೆ ದಾಖಲೆ ಸಮೇತ ಬಿಎಂಟಿಸಿಯ ಮುಖ್ಯ ಕಚೇರಿಯ ಹಿರಿಯ ಅಧಿಕಾರಿಗಳಿಗೆ ದೂರು ನೀಡಿದರೂ ಯಾವುದೇ ಕ್ರಮಗೊಳ್ಳಲು ಮುಂದಾಗಿಲ್ಲ ಎಂಬ ಆರೋಪವೂ ಕೇಳಿಬಂದಿದೆ. ಈ ಅಕ್ರಮದಲ್ಲಿ ಹಿರಿಯ ಅಧಿಕಾರಿಗಳೇ ಶಾಮೀಲಾಗಿದ್ದಾರೆ ಎಂಬ ಆರೋಪವೂ ಇದೆ.

ಈಗ ಬೆಳಕಿಗೆ ಬಂದಿರುವುದು ಸುಮ್ಮನಹಳ್ಳಿ ಡಿಪೋ ಅಕ್ರಮ ಮಾತ್ರ. ಸರಿಯಾಗಿ ತನಿಖೆ ಮಾಡಿದರೆ 54 ಡಿಪೋಗಳ ಅಕ್ರಮ ಕೂಡ ಬಯಲಾಗುತ್ತದೆ ಎಂದು ಸಾರಿಗೆ ನೌಕರರ ಮುಖಂಡರು ಹೇಳಿದ್ದಾರೆ.

ಇದನ್ನೂ ಓದಿ
Image
ಪಾರ್ಟಿಗಳಲ್ಲಿ ಡ್ರಗ್ಸ್ ಸಿಕ್ಕರೆ ರೆಸಾರ್ಟ್, ಹೋಂ ಸ್ಟೇ ಮಾಲೀಕರ ಮೇಲೆ ಕೇಸ್
Image
ಸಿಎಂ ಬದಲಾವಣೆ ಚರ್ಚೆಗೆ ಸ್ವಾಮೀಜಿಗಳೂ ಎಂಟ್ರಿ
Image
ಹೃದಯಾಘಾತ ಪ್ರಕರಣ: ಸಿಎಂ ಹೇಳಿಕೆ ಬೇಜವಾಬ್ದಾರಿ ಪರಮಾವಧಿ, ಜೋಶಿ
Image
ಸಿದ್ದರಾಮಯ್ಯಗೆ ಹೈಕಮಾಂಡ್ ಮಹತ್ವದ ಹುದ್ದೆ: ಅಂತೆ-ಕಂತೆಗಳಿಗೆ ಸಿಎಂ ತೆರೆ

ಈ ಬಗ್ಗೆ ‘ಟಿವಿ9’ಗೆ ಪ್ರತಿಕ್ರಿಯೆ ನೀಡಿದ ಸಾರಿಗೆ ಸಚಿವರು, ಈ ವಿಚಾರ ‘ಟಿವಿ9’ ವರದಿಯಿಂದ ನಮಗೆ ಗೊತ್ತಾಗಿದೆ. ಬಿಎಂಟಿಸಿ ಎಂಡಿ ಅವರಿಗೆ ಈ ಬಗ್ಗೆ ತನಿಖೆ ಮಾಡಲು ಸೂಚನೆ ನೀಡುತ್ತೇನೆ ಎಂದಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಪಾರ್ಟಿಗಳಲ್ಲಿ ಡ್ರಗ್ಸ್ ಕಂಡುಬಂದರೆ ರೆಸಾರ್ಟ್, ಹೋಂ ಸ್ಟೇ, ಹೋಟೆಲ್ ಮಾಲೀಕರ ಮೇಲೂ ಕೇಸ್

ಒಟ್ಟಿನಲ್ಲಿ ಬಿಎಂಟಿಸಿ ಚಾಲಕ, ನಿರ್ವಾಹಕರು ಒಂದು ಅಥವಾ ಎರಡು ರೂ. ಕಡಿಮೆ ಲೆಕ್ಕ ತೋರಿಸಿದರೆ ಕೂಡಲೇ ಅವರನ್ನು ಅಮಾನತು ಮಾಡುವ ಬಿಎಂಟಿಸಿಯ ಹಿರಿಯ ಅಧಿಕಾರಿಗಳು, ಇದೀಗ ಅಧಿಕಾರಿಗಳೇ ಲಕ್ಷಾಂತರ ರೂಪಾಯಿ ವಂಚನೆ ಮಾಡಿದರೂ ಮೌನವಾಗಿರುವುದು ಸಾಕಷ್ಟು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್