AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಚಾರ ಮಾಡದಿದ್ದರೂ ಬಿಎಂಟಿಸಿ ಬಸ್​ಗೆ ಬೇಕಂತೆ ಡೀಸೆಲ್! 4 ಸಾವಿರ ಲೀಟರ್ ಡೀಸೆಲ್ ಹಣ ಲೂಟಿ

ಈ ಬಿಎಂಟಿಸಿ ಅಧಿಕಾರಿಗಳನ್ನು ಹೇಳುವವರು, ಕೇಳುವವರು ಯಾರೂ ಇಲ್ಲ ಎಂಬಂತಾಗಿದೆ ಪರಿಸ್ಥಿತಿ. ಬಸ್​​ಗಳು ಸಂಚಾರ ಮಾಡದೇ ಇದ್ದರೂ ಸುಳ್ಳು ಲೆಕ್ಕ ಕೊಟ್ಟು, ಸಾವಿರಾರು ಲೀಟರ್ ಡಿಸೇಲ್ ಕಳ್ಳತನ ಮಾಡಿರುವ ಬಗ್ಗೆ ಸುಮ್ಮನಹಳ್ಳಿ ಡಿಪೋ ಅಧಿಕಾರಿಗಳ ವಿರುದ್ಧ ದೂರುಗಳು ಕೇಳಿ ಬಂದಿವೆ. ಆದರೂ ಸಂಬಂಧಪಟ್ಟವರು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ.

ಸಂಚಾರ ಮಾಡದಿದ್ದರೂ ಬಿಎಂಟಿಸಿ ಬಸ್​ಗೆ ಬೇಕಂತೆ ಡೀಸೆಲ್! 4 ಸಾವಿರ ಲೀಟರ್ ಡೀಸೆಲ್ ಹಣ ಲೂಟಿ
ಸುಮ್ಮನಹಳ್ಳಿ ಡಿಪೋ
ಕಿರಣ್​ ಸೂರ್ಯ
| Edited By: |

Updated on: Jul 07, 2025 | 8:50 AM

Share

ಬೆಂಗಳೂರು, ಜುಲೈ 7: ಬಿಎಂಟಿಸಿಯಲ್ಲಿ (BMTC) 54 ಡಿಪೋಗಳಿದ್ದು, ಸುಮಾರು 6800 ಬಸ್​​ಗಳಿವೆ. ಅದರಲ್ಲಿ ಪ್ರತಿದಿನ ಡಿಪೋದಿಂದ ಒಪ್ಪಂದದ ಮೇರೆಗೆ ನೂರಾರು ಬಸ್​​ಗಳು (BMTC Buses) ಬಾಡಿಗೆಗೆ ಹೋಗುತ್ತವೆ. ಈ ವೇಳೆ, ಡಿಪೋದ ಹಿರಿಯ ಅಧಿಕಾರಿಗಳು ಡ್ರೈವರ್ ಮತ್ತು ಕಂಡಕ್ಟರ್​ಗಳನ್ನು ಸೆಟ್ ಮಾಡಿಕೊಂಡು ಸುಳ್ಳು ಲೆಕ್ಕ ಕೊಟ್ಟು ಡಿಸೇಲ್ ಕಳ್ಳತನ ಮಾಡುತ್ತಿರುವ ಆರೋಪ ಕೇಳಿಬಂದಿದೆ. ಇದೀಗ ಇಂತಹದ್ದೇ ಪ್ರಕರಣ ಬೆಳಕಿಗೆ ಬಂದಿದೆ. ಘಟಕ 31 ರ ಸುಮ್ಮನಹಳ್ಳಿ ಡಿಪೋದಿಂದ ಸಿಸಿ ಕಾಂಟ್ಯಾಕ್ಟ್ ಕ್ಯಾರೇಜ್ ಮೇಲೆ ಬೇರೆಬೇರೆ ಊರಿಗೆ ಮತ್ತು ಮದುವೆ-ಶುಭ ಸಮಾರಂಭಗಳಿಗೆ ಬಿಎಂಟಿಸಿ ಬಸ್​​ಗಳನ್ನು ತೆಗೆದುಕೊಂಡು ಹೋಗಿದ್ದಾರೆ. ಈ ವೇಳೆ, ಬಸ್ ಕಡಿಮೆ ದೂರ ಸಂಚಾರ ಮಾಡಿದ್ದರೂ ಹೆಚ್ಚಿನ ಸಂಚಾರ ಮಾಡಿದೆ ಎಂದು ಲೆಕ್ಕ ತೋರಿಸಿ ಡಿಪೋದ ಹಿರಿಯ ಅಧಿಕಾರಿಗಳು ಸುಮಾರು 4 ಸಾವಿರ ಲೀಟರ್​ನಷ್ಟು ಡಿಸೇಲ್ ಕಳವು ಮಾಡಿ ಬಿಎಂಟಿಸಿಗೆ ಲಕ್ಷಾಂತರ ರುಪಾಯಿ ಮೋಸ ಮಾಡಿರುವ ಆರೋಪ ಕೇಳಿ ಬಂದಿದೆ.

ಈ ಆರೋಪದ ಬಗ್ಗೆ ದಾಖಲೆ ಸಮೇತ ಬಿಎಂಟಿಸಿಯ ಮುಖ್ಯ ಕಚೇರಿಯ ಹಿರಿಯ ಅಧಿಕಾರಿಗಳಿಗೆ ದೂರು ನೀಡಿದರೂ ಯಾವುದೇ ಕ್ರಮಗೊಳ್ಳಲು ಮುಂದಾಗಿಲ್ಲ ಎಂಬ ಆರೋಪವೂ ಕೇಳಿಬಂದಿದೆ. ಈ ಅಕ್ರಮದಲ್ಲಿ ಹಿರಿಯ ಅಧಿಕಾರಿಗಳೇ ಶಾಮೀಲಾಗಿದ್ದಾರೆ ಎಂಬ ಆರೋಪವೂ ಇದೆ.

ಈಗ ಬೆಳಕಿಗೆ ಬಂದಿರುವುದು ಸುಮ್ಮನಹಳ್ಳಿ ಡಿಪೋ ಅಕ್ರಮ ಮಾತ್ರ. ಸರಿಯಾಗಿ ತನಿಖೆ ಮಾಡಿದರೆ 54 ಡಿಪೋಗಳ ಅಕ್ರಮ ಕೂಡ ಬಯಲಾಗುತ್ತದೆ ಎಂದು ಸಾರಿಗೆ ನೌಕರರ ಮುಖಂಡರು ಹೇಳಿದ್ದಾರೆ.

ಇದನ್ನೂ ಓದಿ
Image
ಪಾರ್ಟಿಗಳಲ್ಲಿ ಡ್ರಗ್ಸ್ ಸಿಕ್ಕರೆ ರೆಸಾರ್ಟ್, ಹೋಂ ಸ್ಟೇ ಮಾಲೀಕರ ಮೇಲೆ ಕೇಸ್
Image
ಸಿಎಂ ಬದಲಾವಣೆ ಚರ್ಚೆಗೆ ಸ್ವಾಮೀಜಿಗಳೂ ಎಂಟ್ರಿ
Image
ಹೃದಯಾಘಾತ ಪ್ರಕರಣ: ಸಿಎಂ ಹೇಳಿಕೆ ಬೇಜವಾಬ್ದಾರಿ ಪರಮಾವಧಿ, ಜೋಶಿ
Image
ಸಿದ್ದರಾಮಯ್ಯಗೆ ಹೈಕಮಾಂಡ್ ಮಹತ್ವದ ಹುದ್ದೆ: ಅಂತೆ-ಕಂತೆಗಳಿಗೆ ಸಿಎಂ ತೆರೆ

ಈ ಬಗ್ಗೆ ‘ಟಿವಿ9’ಗೆ ಪ್ರತಿಕ್ರಿಯೆ ನೀಡಿದ ಸಾರಿಗೆ ಸಚಿವರು, ಈ ವಿಚಾರ ‘ಟಿವಿ9’ ವರದಿಯಿಂದ ನಮಗೆ ಗೊತ್ತಾಗಿದೆ. ಬಿಎಂಟಿಸಿ ಎಂಡಿ ಅವರಿಗೆ ಈ ಬಗ್ಗೆ ತನಿಖೆ ಮಾಡಲು ಸೂಚನೆ ನೀಡುತ್ತೇನೆ ಎಂದಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಪಾರ್ಟಿಗಳಲ್ಲಿ ಡ್ರಗ್ಸ್ ಕಂಡುಬಂದರೆ ರೆಸಾರ್ಟ್, ಹೋಂ ಸ್ಟೇ, ಹೋಟೆಲ್ ಮಾಲೀಕರ ಮೇಲೂ ಕೇಸ್

ಒಟ್ಟಿನಲ್ಲಿ ಬಿಎಂಟಿಸಿ ಚಾಲಕ, ನಿರ್ವಾಹಕರು ಒಂದು ಅಥವಾ ಎರಡು ರೂ. ಕಡಿಮೆ ಲೆಕ್ಕ ತೋರಿಸಿದರೆ ಕೂಡಲೇ ಅವರನ್ನು ಅಮಾನತು ಮಾಡುವ ಬಿಎಂಟಿಸಿಯ ಹಿರಿಯ ಅಧಿಕಾರಿಗಳು, ಇದೀಗ ಅಧಿಕಾರಿಗಳೇ ಲಕ್ಷಾಂತರ ರೂಪಾಯಿ ವಂಚನೆ ಮಾಡಿದರೂ ಮೌನವಾಗಿರುವುದು ಸಾಕಷ್ಟು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Kiran Surya
Kiran Surya

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು