AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸ್​ನಲ್ಲಿ ಮಹಿಳೆ ಮೇಲೆ ಹಲ್ಲೆ: ಗಲಾಟೆಗೆ ಕಾರಣವೇನು? ಕಂಡಕ್ಟರ್ ಹೇಳಿಕೆ ಇಲ್ಲಿದೆ

ಟಿಕೆಟ್ ವಿಚಾರಕ್ಕೆ ನಡೆದ ಜಗಳದಲ್ಲಿ ಬೆಂಗಳೂರಿನಲ್ಲಿ ಮಹಿಳೆಗೆ ಮನಬಂದಂತೆ ಹೊಡೆದು ಹಲ್ಲೆ ಮಾಡಿರು ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಎಂಟಿಸಿ ಕಂಡಕ್ಟರ್ ಹೊನ್ನಪ್ಪ‌ನನ್ನು ಕೆಲಸದಿಂದ ಅಮಾನತು ಮಾಡಲಾಗಿದೆ. ಇದರ ಬೆನ್ನಲ್ಲೇ ಇದೀಗ ಪೊಲೀಸರು ಹೊನ್ನಪ್ಪ‌ನನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. ಅಲ್ಲದೇ ಗಲಾಟೆಗೆ ಕಾರಣವೇನು? ಯಾಕಾಗಿ ಹೀಗೆ ಹೊಡೆದಿದ್ದು ಎಂದು ವಿಚಾರಿಸಿದ್ದು, ಈ ವೇಳೆ ಹೊನ್ನಪ್ಪ‌ ಪೊಲೀಸರ ಮುಂದೆ ತಮ್ಮ ಹೇಳಿಕೆ ನೀಡಿದ್ದು, ಅದು ಈ ಕೆಳಗಿನಂತಿದೆ.

ಬಸ್​ನಲ್ಲಿ ಮಹಿಳೆ ಮೇಲೆ ಹಲ್ಲೆ: ಗಲಾಟೆಗೆ ಕಾರಣವೇನು? ಕಂಡಕ್ಟರ್ ಹೇಳಿಕೆ ಇಲ್ಲಿದೆ
ಬಿಎಂಟಿಸಿ ಬಸ್​ನಲ್ಲಿ ಮಹಿಳೆ ಮೇಲೆ ಹಲ್ಲೆ
ರಾಚಪ್ಪಾಜಿ ನಾಯ್ಕ್
| Edited By: ಕಿರಣ್ ಹನುಮಂತ್​ ಮಾದಾರ್|

Updated on:Mar 26, 2024 | 7:58 PM

Share

ಬೆಂಗಳೂರು, ಮಾ.26: ಮಹಿಳೆ ಮೇಲೆ ಬಿಎಂಟಿಸಿ (BMTC) ಕಂಡಕ್ಟರ್ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಂಡಕ್ಟರ್ ಹೊನ್ನಪ್ಪನನ್ನ ಈಗಾಗಲೇ ಸಿದ್ದಾಪುರ ಪೊಲೀಸರು ಬಂಧಿಸಿದ್ದಾರೆ. ಹಲ್ಲೆಗೊಳಗಾಗಿದ್ದ ತನ್ಜಿಲಾ ಇಸ್ಮಾಯಿಲ್ ಎಂಬ ಮಹಿಳೆ ಪ್ರಯಾಣದ ಟಿಕೆಟ್​ ಕೇಳಿದ್ದಾಳೆ. ಈ ವೇಳೆ ಕಂಡಕ್ಟರ್, ಕೊಡ್ತಿನಿ‌ ಇರಿ ಎಂದಿದ್ದಾನೆ. ಇದೇ ವಿಚಾರಕ್ಕೆ ಮಾತಿಗೆ ಮಾತು ಬೆಳೆದು ರೊಚ್ಚಿಗೆದ್ದ ಕಂಡಕ್ಟರ್​ ಹಲ್ಲೆ ನಡೆಸಿದ್ದಾನೆ ಎನ್ನಲಾಗಿತ್ತು.

ಕಂಡಕ್ಟರ್ ಮತ್ತು ಮಹಿಳೆ ನಡುವಿನ ಗಲಾಟೆಗೆ ಕಾರಣ ಏನು?

ಹಾಗಾದ್ರೆ ಕಂಡಕ್ಟರ್ ಮತ್ತು ಮಹಿಳೆ ನಡುವಿನ ಗಲಾಟೆಗೆ ಕಾರಣವೇನು ಎಂಬುದರ ಕುರಿತು ಕಂಡಕ್ಟರ್​ ಹೊನ್ನಪ್ಪ‌ ಹೇಳಿಕೆ ದಾಖಲಿಸಿರುವ ಪೊಲೀಸರು, ಇದಕ್ಕೆಲ್ಲ ಉಚಿತ ಬಸ್ ಪ್ರಯಾಣವೇ ಕಾರಣವಾಗಿದೆ. ಹೌದು, ಬಿಳೆಕಳ್ಳಿ ಬಳಿ ಬಸ್ ಹತ್ತಿದ್ದ ಮಹಿಳೆಗೆ ಟಿಕೆಟ್ ನೀಡಲು ಆಧಾರ್ ಕಾರ್ಡ್ ತೋರಿಸುವಂತೆ ಕಂಡಕ್ಟರ್ ಹೇಳಿದ್ದಾರೆ. ಆದರೆ, ಎರಡು ಸ್ಟಾಪ್ ಬಂದರೂ ಯುವತಿ ತನ್ನ ಆಧಾರ್ ಕಾರ್ಡ್ ತೋರಿಸಿಲ್ಲ.

ಇದನ್ನೂ ಓದಿ:ಮಹಿಳೆ ಮೇಲೆ ಬಿಎಂಟಿಸಿ ಕಂಡಕ್ಟರ್ ಹಲ್ಲೆ; ಪೊಲೀಸ್ ವಶಕ್ಕೆ

ಬಳಿಕ ನಿಮ್ಮ ಸ್ಟೇಜ್ ಮುಕ್ತಾಯವಾಗುತ್ತೆ ಬೇಗ ಆಧಾರ್ ಕಾರ್ಡ್ ತೋರಿಸಿ, ಇಲ್ಲದಿದ್ದರೆ ಹಣ ಕೊಟ್ಟು ಟಿಕೆಟ್ ತೆಗೆದುಕೊಳ್ಳುವಂತೆ ಎಂದು ಕಂಡಕ್ಟರ್​ ಸೂಚಿಸಿದ್ದಾರೆ. ಇದರಿಂದ ಕೆಂಡಾಮಂಡಲಳಾದ ಮಹಿಳೆ, ಮಾತಿಗೆ ಮಾತು ಬೆಳೆದು ಕಂಡಕ್ಟರ್​ಗೆ ಕಪಾಳ ಮೋಕ್ಷ ಮಾಡಿದ್ದಾರೆ. ಇದರಿಂದ ರೊಚ್ಚಿಗೆದ್ದ ಕಂಡಕ್ಟರ್​ ಕೂಡ ಮಹಿಳೆ ಮೇಲೆ ಹಲ್ಲೆ ನಡೆಸಿದ್ದಾರೆ.

ಕಂಡಕ್ಟರ್​ ಅಮಾನತು, ಆದೇಶದಲ್ಲಿ ಏನಿದೆ?

ಇನ್ನು ಘಟನೆ ಬೆನ್ನಲ್ಲೇ ಕಂಡಕ್ಟರ್​ನನ್ನು ಅಮಾನತುಗೊಳಿಸಲಾಗಿದೆ. ಈ ಕುರಿತು ಬಿಎಂಟಿಸಿ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ‘ಘಟಕ -34 (ಕೊತ್ತನೂರು ದಿಣ್ಣೆ) ರ ನಿರ್ವಾಹಕರಾಗಿರುವ ಹೊನ್ನಪ್ಪ ನಾಗಪ್ಪ ಅಗಸರ್ ಕಾರ್ಯನಿರ್ವಹಿಸುತ್ತಿದ್ದು, ಇಂದು ಮಾರ್ಗ ಸಂಖ್ಯೆ 368/6 ರಲ್ಲಿ ಕರ್ತವ್ಯದಲ್ಲಿದ್ದ ವೇಳೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಹೊರ ರಾಜ್ಯದ ಓರ್ವ ಮಹಿಳಾ ಪ್ರಯಾಣಿಕರೊಂದಿಗೆ ಟಿಕೆಟ್ ಪಡೆಯುವ ನೀಡುವ ವಿಚಾರವಾಗಿ ಮಾತಿನ ಚಕಮಕಿ ನಡೆದು ಹಲ್ಲೆ ಮಾಡಿರುತ್ತಾನೆ. ಈ ಘಟನೆ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡಿರುವ ಹಿನ್ನೆಲೆ ಸದರಿ ಅಂತರ್ಜಾಲದ ಸುದ್ದಿಯ ಆಧಾರದ ಮೇಲೆ ಹೊನ್ನಪ್ಪ ನಾಗಪ್ಪ ಅಗಸರ್ ರನ್ನು ಅಮಾನತ್ತು ಮಾಡಲಾಗಿದೆ ಎಂದು  ಮೂಲಕ ತಿಳಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:57 pm, Tue, 26 March 24

Follow Us
Rachappaji Naik S
Rachappaji Naik S

ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ