Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಎಂಟಿಸಿ ಚಾಲಕರ ಹೃದಯಕ್ಕೆ ಆಪತ್ತು, ಜಯದೇವ ಆಸ್ಪತ್ರೆ ವೈದ್ಯರ ವರದಿಯಲ್ಲಿ ಶಾಕಿಂಗ್ ಅಂಶ ಬಯಲು

ಬಿಎಂಟಿಸಿ ಬಸ್ ಓಡಿಸುತ್ತಿರುವ ಚಾಲಕರಿಗೆ ಶಾಕಿಂಗ್ ನ್ಯೂಸ್ ಕಾದಿದೆ. ಆರೋಗ್ಯದ ಬಗ್ಗೆ ಕಾಳಜಿ ವಹಿಸದೇ ಸಂಸ್ಥೆಗಾಗಿ ಹಗಲು-ರಾತ್ರಿ ದುಡಿಯುತ್ತಿರುವ ಬಹತೇಕ ಡ್ರೈವರ್ ಗಳ ಹೃದಯ ಅಪಾಯದಲ್ಲಿಯಂತೆ. ಜಯದೇವ ಆಸ್ಪತ್ರೆ ವೈದ್ಯರ ವರದಿಯಲ್ಲಿ ಈ ಅಘಾತಕಾರಿ ಅಂಶ ಬಯಲಾಗಿದೆ.

ಬಿಎಂಟಿಸಿ ಚಾಲಕರ ಹೃದಯಕ್ಕೆ ಆಪತ್ತು, ಜಯದೇವ ಆಸ್ಪತ್ರೆ ವೈದ್ಯರ ವರದಿಯಲ್ಲಿ ಶಾಕಿಂಗ್ ಅಂಶ ಬಯಲು
ಬಿಎಂಟಿಸಿ
Follow us
Poornima Agali Nagaraj
| Updated By: ಆಯೇಷಾ ಬಾನು

Updated on: Oct 28, 2023 | 8:25 AM

ಬೆಂಗಳೂರು, ಅ.28: ಬಸ್ ಗಳ ಕೊರತೆ, ಒವರ್ ಟೈಂ ಡ್ಯೂಟಿ, ಹಬ್ಬದ ದಿನವೂ ಕೆಲಸ, ಸದಾ ಕಿರಿಕಿರಿ, ಒತ್ತಡ ಇದು ಬಿಎಂಟಿಸಿ (BMTC) ಚಾಲಕರು ಹಾಗೂ ನಿರ್ವಹಕರ ನಿತ್ಯದ ಗೋಳು. ಶಕ್ತಿ ಯೋಜನೆ ಜಾರಿಯಾದ ನಂತರ ಈ ಸಮಸ್ಯೆ ದುಪ್ಪಟ್ಟಾಗಿದೆ. ಬಸ್​ಗಳ ಶಾರ್ಟೇಜ್ ನಡುವೆ ಬಿಎಂಟಿಸಿ ಜನರಿಗಾಗಿ ಇರೋ‌ ಬಸ್ ನಲ್ಲಿಯೇ ಹೆಚ್ಚುವರಿ ಟ್ರಿಪ್ ಮಾಡಿಸ್ತಿದೆ. ಇದು ಚಾಲಕರ ಜೀವಕ್ಕೆ ಆಪತ್ತು ಎದುರಾಗುವ ಆತಂಕ ಮೂಡಿಸಿದೆ

ಹೌದು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಚಾಲಕರು ಹೃದ್ರೋಗದ ಅಪಾಯದಲ್ಲಿದ್ದಾರೆ. ಬಿಎಂಟಿಸಿ ಚಾಲಕರ ಪೈಕಿ ಶೇಕಡ 40-50ರಷ್ಟು ಜನ ಮಧುಮೇಹ, ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ ಎಂಬುದು ಜಯದೇವ ಆಸ್ಪತ್ರೆ ನಡೆಸಿದ ಆರೋಗ್ಯ ತಪಾಸಣೆಯಿಂದ ಬೆಳಕಿಗೆ ಬಂದಿದೆ.

ಜಯದೇವ ಆಸ್ಪತ್ರೆಯಲ್ಲಿ ಕಳೆದ 12 ತಿಂಗಳಿನಲ್ಲಿ 8200 ಚಾಲಕರ ಆರೋಗ್ಯ ತಪಾಸಣೆ ನಡೆಸಲಾಗಿದೆ. ಹೃದಯ ಸಂಬಂಧಿ ಕಾಯಿಲೆಗಳ ಬಗ್ಗೆ ವೈದ್ಯರಿಂದ ಸಮಗ್ರ ಪರೀಕ್ಷೆ ನಡೆದಿದೆ. ಚಾಲಕರ ಪರೀಕ್ಷಿಸಲು 2022ರ ಆಗಸ್ಟ್‌ನಲ್ಲಿ ಒಪ್ಪಂದಕ್ಕೆ ಜಯದೇವ ಸಂಸ್ಥೆ ಸಹಿ‌ ಹಾಕಿತ್ತು.‌ ಅದರಂತೆ ಚಾಲಕರ ಬ್ಲೆಡ್ ಟೆಸ್ಟ್, ಹೃದಯದ ಒತ್ತಡ ಪರೀಕ್ಷೆ, ಇಸಿಜಿ, ಇಕೋ ಟೆಸ್ಟ್ ಸೇರಿ ಸಂಪೂರ್ಣ ಆರೋಗ್ಯ ಪರೀಕ್ಷೆ ನಡೆಸಿತ್ತು. ತಪಾಸಣೆಗೆ ಒಳಗಾದ ಶೇಕಡಾ 40 ರಷ್ಟು ಚಾಲಕರಿಗೆ ಮಧುಹೇಹ ಇರೋದು ಪತ್ತೆಯಾಗಿದೆ. ಅಲ್ಲದೆ ಶೇ. 40 ರಷ್ಟು ಚಾಲಕರಿಗೆ ಅಧಿಕದೊತ್ತಡ, ಶೇ. 62 ರಷ್ಟು ಚಾಲಕರಿಗೆ ಹೈ ಕೊಲೆಸ್ಟಲ್ ಪತ್ತೆಯಾಗಿದೆ. ಇವರಿಗೆ ಭವಿಷ್ಯದಲ್ಲಿ ಹೃದಯ ಸಂಬಂಧಿಸಿದ ಕಾಯಿಲೆಗೆ ಒಳಗಾಗಲಿದ್ದಾರೆ ಅಂತ ವೈದ್ಯರು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಮೆಟ್ರೋ, ಬಿಎಂಟಿಸಿ ಬಸ್​ ಇದ್ದರೂ ಖಾಸಗಿ ವಾಹನಗಳ ಬಳಕೆ ಹೆಚ್ಚಳ, ಒಂದು ಕೋಟಿ ದಾಟಿದ ಒಟ್ಟು ವಾಹನಗಳ ಸಂಖ್ಯೆ

ಚಾಲಕರು ಒವರ್ ಟೈಂ ಡ್ಯೂಟಿ‌ ಮಾಡ್ತಾರೆ. ಸರಿಯಾದ ಸಮಯಕ್ಕೆ ಸಮರ್ಪಕ ಆಹಾರ ಸೇವಿಸುವುದಿಲ್ಲ. ವ್ಯಾಯಾಮದ ಕೊರತೆ ಮತ್ತು 10 ಗಂಟೆಗೂ ಹೆಚ್ಚು ಸಮಯ ಕುಳಿತುಕೊಳ್ಳುವುದರಿಂದ ಹೆಚ್ಚು ಆಯಾಸಕ್ಕೆ ಒಳಗಾಗಿದ್ದಾರೆ. ಇದರಿಂದ ಹೃದಯ ಸಂಬಂಧಿ ಕಾಯಿಲೆಗಳಿಗೆ ಅವರನ್ನು ಕಾಡುತ್ತಿವೆಯಂತೆ. ಅಲ್ಲದೇ ಶೇ.5 ರಷ್ಟು ಮಂದಿಗೆ ಈಗಾಗಲೇ ಹೃದಯ ಸಂಬಂಧಿ ಕಾಯಿಲೆ ಇರುವುದು ಕಂಡು ಬಂದಿದೆಯಂತೆ.

ಇದೇ ರೀತಿಯ ಆರೋಗ್ಯ ತಪಾಸಣೆಗಳನ್ನು ಕರ್ನಾಟಕ ಕೆಎಸ್‌ಆರ್‌ಟಿಸಿ ಮತ್ತು ಪೊಲೀಸ್ ಸಿಬ್ಬಂದಿಗೂ ವಿಸ್ತರಿಸಲು ಪ್ರಸ್ತಾಪಿಸಲಾಗಿದೆ. ಒಟ್ಟಾರೆ ಇತ್ತಿಚಿನ‌ ದಿನದಲ್ಲಿ ಹಠಾತ್ ಹೃದಯಘಾತದಿಂದ ಬಲಿಯಾಗುತ್ತಿರುವವರ ಸಂಖ್ಯೆ ಅಧಿಕವಾಗಿದೆ. ಅಲ್ಲದೆ ಕೆಎಸ್​ಆರ್​ಟಿಸಿ ಹಾಗೂ ಬಿಎಂಟಿಸಿ ಸಿಬ್ಬಂದಿ ಕೂಡ ಹಾರ್ಟ್ ಆಟ್ಯಾಕ್ ನಿಂದ ಸತ್ತಿದ್ದಾರೆ. ಹೀಗಾಗಿ ಸದಾ ಜನರ ಸೇವೆಗೆ ದುಡಿಯುತ್ತಿರುವ ಇವರು ಹೃದಯದ ಬಗ್ಗೆ ಕಾಳಜಿ ವಹಿಸೋದು ಅಗತ್ಯ ಎಂದು ತಜ್ಞರು ಸಲಹೆ ಕೊಟ್ಟಿದ್ದಾರೆ. ಅಲ್ಲದೆ ಸಂಬಂಧಪಟ್ಟರೂ ತಮ್ಮ ಸಿಬ್ಬಂದಿ ಆರೋಗ್ಯದ ಬಗ್ಗೆ ಗಮನಹರಿಸಿ ಸುರಕ್ಷಿತವಾಗಿರುವಂತೆ ನೋಡಿಕೊಳ್ಳಬೇಕಿದೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ