AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಾಸ್ಟ್​ ಕಾರ್ಡ್​​ನಲ್ಲಿ ಹಣ ಇಲ್ಲದೇ ಮಾರಸಂದ್ರ ಟೋಲ್ ಬಳಿ ನಿಂತ ಬರೋಬ್ಬರಿ 15 ಬಿಎಂಟಿಸಿ ಇವಿ ಬಸ್​ಗಳು

ಬಿಎಂಟಿಸಿಯ ಇವಿ ಬಸ್​​ಗಳು ಟೋಲ್ ಹಣ ಕಟ್ಟಲು, ಫಾಸ್ಟ್​​ ಟ್ಯಾಗ್​ನಲ್ಲಿ ಚಾರ್ಜ್​​​​ ಇಲ್ಲದೆ ಟೋಲ್‌ ​ಬಳಿಯೆ ನಿಂತ ಘಟನೆ ದೊಡ್ಡಬಳ್ಳಾಪುರದ ಬಳಿ ಇರುವ ಮಾರಸಂದ್ರ ಟೋಲ್ ಗೇಟ್​ ಬಳಿ ನಡೆದಿದೆ. ಇದರಿಂದ ಪ್ರಯಾಣಿಕರು ಪರಾದಾಡುವಂತಾಯಿತು.

ಫಾಸ್ಟ್​ ಕಾರ್ಡ್​​ನಲ್ಲಿ ಹಣ ಇಲ್ಲದೇ ಮಾರಸಂದ್ರ ಟೋಲ್ ಬಳಿ ನಿಂತ ಬರೋಬ್ಬರಿ 15 ಬಿಎಂಟಿಸಿ ಇವಿ ಬಸ್​ಗಳು
ಬಿಎಂಟಿಸಿ ಬಸ್​ (ಎಡಚಿತ್ರ) ಟೋಲ್​ (ಬಲಚಿತ್ರ)
ವಿವೇಕ ಬಿರಾದಾರ
|

Updated on: Mar 08, 2023 | 4:59 PM

Share

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಸಿಲಿಕಾನ್​ ಸಿಟಿ (Silicon City) ಜನರ ಪಾಲಿಗೆ ಜೀವನಾಡಿಯಾಗಿದೆ. ನಗರದ ಯಾವುದೇ ಭಾಗಗಕ್ಕು ಸಂಪರ್ಕ ಕಲ್ಪಿಸತ್ತಿದ್ದು, ಸಾಕಷ್ಟು ಅನುಕೂಲಕಾರಿಯಾಗಿದೆ. ಕಳೆದ ಕೆಲವು ದಿನಗಳಿಂದ ನಗರದಲ್ಲಿ ಪರಿಸರ ಸ್ನೇಹಿ ಬಸ್​ಗಳು (ಎಲೆಕ್ಟ್ರಿಕ್​ ಬಸ್)ಗಳು ಸಂಚರಿಸುತ್ತಿವೆ.  ಬಿಎಂಟಿಸಿಯ ಇವಿ ಬಸ್​​ಗಳು (Electric Bus) ಟೋಲ್ (Toll) ಹಣ ಕಟ್ಟಲು, ಫಾಸ್ಟ್​​ ಟ್ಯಾಗ್​ನಲ್ಲಿ ಚಾರ್ಜ್​​​​ ಇಲ್ಲದೆ ಟೋಲ್‌ ​ಬಳಿಯೇ ನಿಂತ ಘಟನೆ ದೊಡ್ಡಬಳ್ಳಾಪುರದ ಬಳಿ ಇರುವ ಮಾರಸಂದ್ರ ಟೋಲ್ ಗೇಟ್​ ಬಳಿ ನಡೆದಿದೆ. ಇದರಿಂದ ಪ್ರಯಾಣಿಕರು ಪರಾದಾಡುವಂತಾಯಿತು.

ಇದನ್ನೂ ಓದಿ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅತ್ಯುತ್ತಮ ವಿಮಾನ ನಿಲ್ದಾಣ ಪ್ರಶಸ್ತಿ

ಖಾಸಗಿಯವರ ಸಹಭಾಗಿತ್ವದಲ್ಲಿ ರಸ್ತೆಗೆ ಇಳಿದಿರುವ ಪರಿಸರ ಸ್ನೇಹಿ ಎಲೆಕ್ಟ್ರಿಕ್​ ಬಸ್​ಗಳು (EV Bus​) ನಿನ್ನೆ (ಮಾ.7) ರಂದು ಸಂಜೆ ದೊಡ್ಡಬಳ್ಳಾಪುರದಿಂದ ಬೆಂಗಳೂರಿಗೆ ಬರುತ್ತಿದ್ದವು. ಮಾರಸಂದ್ರ ಟೋಲ್​ ಬಳಿ ಬರುತ್ತಿದ್ದಂತೆ ಬಸ್​ ನಿಂತುಹೋಗಿವೆ. ಬಸ್​ನ ಎಲ್ಲ ಭಾಗಗಳು ಮತ್ತು ಬ್ಯಾಟರಿ ಚಾರ್ಜ್​​ ಸರಿಯಾಗಯೇ ಇತ್ತು. ಆದರೆ ಟೋಲ್​​ಗೆ ಹಣ ತುಂಬಲು ಫಾಸ್ಟ್​​ ಟ್ಯಾಗ್​ನಲ್ಲಿ ಹಣ ಖಾಲಿಯಾಗಿತ್ತು. ಈ ರೀತಿ ಒಂದೆರಡು ಬಸ್​ಗಳಲ್ಲ ಸರಿ ಸುಮಾರು 15ಕ್ಕೂ ಹೆಚ್ಚು ಬಸ್​ಗಳು ಟೋಲ್​​ ಪಾಸ್​ ಆಗಲು ಫಾಸ್ಟ್​​ ಟ್ಯಾಗ್​ನಲ್ಲಿ ಹಣವಿಲ್ಲದೆ ಟೋಲ್​ ಬಳಿಯೇ ನಿಂತಿವೆ.

ಬಸ್​ಗಳು ಹೀಗೆ ಟೋಲ್​ ಬಳಿ ನಿಂತುಕೊಳ್ಳುತ್ತಿದ್ದಂತೆ, ಪ್ರಯಾಣಿಕರು ಕೆಲ ಕಾಲ ಕಾದು ವಿಧಿಯಿಲ್ಲದೆ ಬೇರೆ ಬಸ್​​ಗೆ ಹತ್ತಿಕೊಂಡು ತಮ್ಮ ಮುಂದಿನ ಪ್ರಯಾಣ ಬೆಳಸಿದ್ದಾರೆ. ಬಿಎಂಟಿಸಿಯ ಈ ಎಡವಟ್ಟಿಗೆ ಪ್ರಯಾಣಿಕರು ಹಿಡಿಶಾಪ ಹಾಕಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಜೆವಾರ್‌ನಲ್ಲಿ ಅಂತಾರಾಷ್ಟ್ರೀಯ ಏರ್​ಪೋರ್ಟ್​ ಉದ್ಘಾಟನೆ ಮಾಡಿದ ಮೋದಿ!
ಜೆವಾರ್‌ನಲ್ಲಿ ಅಂತಾರಾಷ್ಟ್ರೀಯ ಏರ್​ಪೋರ್ಟ್​ ಉದ್ಘಾಟನೆ ಮಾಡಿದ ಮೋದಿ!
ಕಾಫಿನಾಡಿನಲ್ಲಿ ವರುಣನ ಅಬ್ಬರ
ಕಾಫಿನಾಡಿನಲ್ಲಿ ವರುಣನ ಅಬ್ಬರ
ಚಿಕ್ಕೋಡಿ ಕಾಡಸಿದ್ದೇಶ್ವರ ಮಠಕ್ಕೆ ಮೋಹನ್ ಭಾಗವತ್​ ಭೇಟಿ: ತುಲಾಭಾರ
ಚಿಕ್ಕೋಡಿ ಕಾಡಸಿದ್ದೇಶ್ವರ ಮಠಕ್ಕೆ ಮೋಹನ್ ಭಾಗವತ್​ ಭೇಟಿ: ತುಲಾಭಾರ
ಇನ್ನೋವಾ ಕಾರು ಡಿಕ್ಕಿಯಾಗಿ ಗರ್ಭಿಣಿ ಇದ್ದ ಆಂಬುಲೆನ್ಸ್ ಪಲ್ಟಿ
ಇನ್ನೋವಾ ಕಾರು ಡಿಕ್ಕಿಯಾಗಿ ಗರ್ಭಿಣಿ ಇದ್ದ ಆಂಬುಲೆನ್ಸ್ ಪಲ್ಟಿ
ಬೆಂಗಳೂರಿನಲ್ಲಿ ಗ್ಯಾಸ್​​ ಸಿಲಿಂಡರ್​ ಲಾರಿ ಪಲ್ಟಿ: ತಪ್ಪಿದ ಭಾರಿ ಅನಾಹುತ
ಬೆಂಗಳೂರಿನಲ್ಲಿ ಗ್ಯಾಸ್​​ ಸಿಲಿಂಡರ್​ ಲಾರಿ ಪಲ್ಟಿ: ತಪ್ಪಿದ ಭಾರಿ ಅನಾಹುತ
ಮದ್ಯದ ಅಂಗಡಿಗೆ ಮುತ್ತಿಗೆ ಹಾಕಿ ಸಿಬ್ಬಂದಿಗೆ ಕ್ಲಾಸ್ ತಗೊಂಡ ಮಹಿಳೆಯರು!
ಮದ್ಯದ ಅಂಗಡಿಗೆ ಮುತ್ತಿಗೆ ಹಾಕಿ ಸಿಬ್ಬಂದಿಗೆ ಕ್ಲಾಸ್ ತಗೊಂಡ ಮಹಿಳೆಯರು!
‘ಗೋ ಬ್ಯಾಕ್ ಜಮೀರ್​ ಅಹ್ಮದ್’: ಬಾಗಲಕೋಟೆಯಲ್ಲಿ ಮುಸ್ಲಿಂ ಮುಖಂಡರ ಆಕ್ರೋಶ!
‘ಗೋ ಬ್ಯಾಕ್ ಜಮೀರ್​ ಅಹ್ಮದ್’: ಬಾಗಲಕೋಟೆಯಲ್ಲಿ ಮುಸ್ಲಿಂ ಮುಖಂಡರ ಆಕ್ರೋಶ!
ಮುಸ್ಲಿಮ್ ವಿದ್ಯಾರ್ಥಿಗೆ 'ಟೆರರಿಸ್ಟ್' ಎಂದು ಕ್ಲಾಸ್​ನಲ್ಲೇ ಅವಮಾನ!
ಮುಸ್ಲಿಮ್ ವಿದ್ಯಾರ್ಥಿಗೆ 'ಟೆರರಿಸ್ಟ್' ಎಂದು ಕ್ಲಾಸ್​ನಲ್ಲೇ ಅವಮಾನ!
ರಚಿತಾ ರಾಮ್​ಗೆ ಹಾಡಿನ ಮೂಲಕ ಪ್ರಪೋಸ್ ಮಾಡಿದ ಸಿದ್ದೇಗೌಡ್ರು
ರಚಿತಾ ರಾಮ್​ಗೆ ಹಾಡಿನ ಮೂಲಕ ಪ್ರಪೋಸ್ ಮಾಡಿದ ಸಿದ್ದೇಗೌಡ್ರು
ರಸ್ತೆ ಇಲ್ಲ, ವಿದ್ಯುತ್ ಇಲ್ಲ! ಮೂಲಭೂತ ಸೌಕರ್ಯವಿಲ್ಲದೆ ಜನರು ಕಂಗಾಲು!
ರಸ್ತೆ ಇಲ್ಲ, ವಿದ್ಯುತ್ ಇಲ್ಲ! ಮೂಲಭೂತ ಸೌಕರ್ಯವಿಲ್ಲದೆ ಜನರು ಕಂಗಾಲು!