AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಾಸ್ಟ್​ ಕಾರ್ಡ್​​ನಲ್ಲಿ ಹಣ ಇಲ್ಲದೇ ಮಾರಸಂದ್ರ ಟೋಲ್ ಬಳಿ ನಿಂತ ಬರೋಬ್ಬರಿ 15 ಬಿಎಂಟಿಸಿ ಇವಿ ಬಸ್​ಗಳು

ಬಿಎಂಟಿಸಿಯ ಇವಿ ಬಸ್​​ಗಳು ಟೋಲ್ ಹಣ ಕಟ್ಟಲು, ಫಾಸ್ಟ್​​ ಟ್ಯಾಗ್​ನಲ್ಲಿ ಚಾರ್ಜ್​​​​ ಇಲ್ಲದೆ ಟೋಲ್‌ ​ಬಳಿಯೆ ನಿಂತ ಘಟನೆ ದೊಡ್ಡಬಳ್ಳಾಪುರದ ಬಳಿ ಇರುವ ಮಾರಸಂದ್ರ ಟೋಲ್ ಗೇಟ್​ ಬಳಿ ನಡೆದಿದೆ. ಇದರಿಂದ ಪ್ರಯಾಣಿಕರು ಪರಾದಾಡುವಂತಾಯಿತು.

ಫಾಸ್ಟ್​ ಕಾರ್ಡ್​​ನಲ್ಲಿ ಹಣ ಇಲ್ಲದೇ ಮಾರಸಂದ್ರ ಟೋಲ್ ಬಳಿ ನಿಂತ ಬರೋಬ್ಬರಿ 15 ಬಿಎಂಟಿಸಿ ಇವಿ ಬಸ್​ಗಳು
ಬಿಎಂಟಿಸಿ ಬಸ್​ (ಎಡಚಿತ್ರ) ಟೋಲ್​ (ಬಲಚಿತ್ರ)
ವಿವೇಕ ಬಿರಾದಾರ
|

Updated on: Mar 08, 2023 | 4:59 PM

Share

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಸಿಲಿಕಾನ್​ ಸಿಟಿ (Silicon City) ಜನರ ಪಾಲಿಗೆ ಜೀವನಾಡಿಯಾಗಿದೆ. ನಗರದ ಯಾವುದೇ ಭಾಗಗಕ್ಕು ಸಂಪರ್ಕ ಕಲ್ಪಿಸತ್ತಿದ್ದು, ಸಾಕಷ್ಟು ಅನುಕೂಲಕಾರಿಯಾಗಿದೆ. ಕಳೆದ ಕೆಲವು ದಿನಗಳಿಂದ ನಗರದಲ್ಲಿ ಪರಿಸರ ಸ್ನೇಹಿ ಬಸ್​ಗಳು (ಎಲೆಕ್ಟ್ರಿಕ್​ ಬಸ್)ಗಳು ಸಂಚರಿಸುತ್ತಿವೆ.  ಬಿಎಂಟಿಸಿಯ ಇವಿ ಬಸ್​​ಗಳು (Electric Bus) ಟೋಲ್ (Toll) ಹಣ ಕಟ್ಟಲು, ಫಾಸ್ಟ್​​ ಟ್ಯಾಗ್​ನಲ್ಲಿ ಚಾರ್ಜ್​​​​ ಇಲ್ಲದೆ ಟೋಲ್‌ ​ಬಳಿಯೇ ನಿಂತ ಘಟನೆ ದೊಡ್ಡಬಳ್ಳಾಪುರದ ಬಳಿ ಇರುವ ಮಾರಸಂದ್ರ ಟೋಲ್ ಗೇಟ್​ ಬಳಿ ನಡೆದಿದೆ. ಇದರಿಂದ ಪ್ರಯಾಣಿಕರು ಪರಾದಾಡುವಂತಾಯಿತು.

ಇದನ್ನೂ ಓದಿ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅತ್ಯುತ್ತಮ ವಿಮಾನ ನಿಲ್ದಾಣ ಪ್ರಶಸ್ತಿ

ಖಾಸಗಿಯವರ ಸಹಭಾಗಿತ್ವದಲ್ಲಿ ರಸ್ತೆಗೆ ಇಳಿದಿರುವ ಪರಿಸರ ಸ್ನೇಹಿ ಎಲೆಕ್ಟ್ರಿಕ್​ ಬಸ್​ಗಳು (EV Bus​) ನಿನ್ನೆ (ಮಾ.7) ರಂದು ಸಂಜೆ ದೊಡ್ಡಬಳ್ಳಾಪುರದಿಂದ ಬೆಂಗಳೂರಿಗೆ ಬರುತ್ತಿದ್ದವು. ಮಾರಸಂದ್ರ ಟೋಲ್​ ಬಳಿ ಬರುತ್ತಿದ್ದಂತೆ ಬಸ್​ ನಿಂತುಹೋಗಿವೆ. ಬಸ್​ನ ಎಲ್ಲ ಭಾಗಗಳು ಮತ್ತು ಬ್ಯಾಟರಿ ಚಾರ್ಜ್​​ ಸರಿಯಾಗಯೇ ಇತ್ತು. ಆದರೆ ಟೋಲ್​​ಗೆ ಹಣ ತುಂಬಲು ಫಾಸ್ಟ್​​ ಟ್ಯಾಗ್​ನಲ್ಲಿ ಹಣ ಖಾಲಿಯಾಗಿತ್ತು. ಈ ರೀತಿ ಒಂದೆರಡು ಬಸ್​ಗಳಲ್ಲ ಸರಿ ಸುಮಾರು 15ಕ್ಕೂ ಹೆಚ್ಚು ಬಸ್​ಗಳು ಟೋಲ್​​ ಪಾಸ್​ ಆಗಲು ಫಾಸ್ಟ್​​ ಟ್ಯಾಗ್​ನಲ್ಲಿ ಹಣವಿಲ್ಲದೆ ಟೋಲ್​ ಬಳಿಯೇ ನಿಂತಿವೆ.

ಬಸ್​ಗಳು ಹೀಗೆ ಟೋಲ್​ ಬಳಿ ನಿಂತುಕೊಳ್ಳುತ್ತಿದ್ದಂತೆ, ಪ್ರಯಾಣಿಕರು ಕೆಲ ಕಾಲ ಕಾದು ವಿಧಿಯಿಲ್ಲದೆ ಬೇರೆ ಬಸ್​​ಗೆ ಹತ್ತಿಕೊಂಡು ತಮ್ಮ ಮುಂದಿನ ಪ್ರಯಾಣ ಬೆಳಸಿದ್ದಾರೆ. ಬಿಎಂಟಿಸಿಯ ಈ ಎಡವಟ್ಟಿಗೆ ಪ್ರಯಾಣಿಕರು ಹಿಡಿಶಾಪ ಹಾಕಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು
ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು
ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ
ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ
ಲಂಬೋರ್ಘಿನಿ ಕಾರನ್ನು ಪಾದಚಾರಿಗಳ ಮೇಲೆ ಹತ್ತಿಸಿದ ತಂಬಾಕು ಉದ್ಯಮಿ ಮಗ
ಲಂಬೋರ್ಘಿನಿ ಕಾರನ್ನು ಪಾದಚಾರಿಗಳ ಮೇಲೆ ಹತ್ತಿಸಿದ ತಂಬಾಕು ಉದ್ಯಮಿ ಮಗ