ಬಿಎಂಟಿಸಿಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್: 4500 ಹೊಸ ಬಸ್ಸು ಒದಗಿಸಲು ಗ್ರೀನ್ ಸಿಗ್ನಲ್, ಗುಜರಿ ಸೇರಲಿವೆ ಡಕೋಟಾ ಬಸ್​ಗಳು

ಇತ್ತೀಚೆಗೆ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್​ಗಳಿಂದ ನಿರಂತರವಾಗಿ ಅಪಘಾತಗಳಾಗುತ್ತಿವೆ. ಇದರಿಂದ ಅಮಾಯಕರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಶಕ್ತಿ ಯೋಜನೆ ಆರಂಭವಾದ ನಂತರ ಪುರುಷರಿಗೆ ಬಸ್ ಸಾಲುತ್ತಿಲ್ಲ, ಸೀಟ್ ಸಿಗುತ್ತಿಲ್ಲ ಎಂಬ ಆರೋಪಗಳಿವೆ. ಇದರೊಂದಿಗೆ, ನಗರದಲ್ಲಿ ವಾಹನಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ವಿಪರೀತ ವಾಯುಮಾಲಿನ್ಯ ಉಂಟಾಗುತ್ತಿದೆ. ಈ ಎಲ್ಲಾ ಸಮಸ್ಯೆಗಳಿಗೆ ಕೇಂದ್ರ ಸರ್ಕಾರ ಪರಿಹಾರ ನೀಡಲು ಮುಂದಾಗಿದೆ ನೋಡಿ.

ಬಿಎಂಟಿಸಿಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್: 4500 ಹೊಸ ಬಸ್ಸು ಒದಗಿಸಲು ಗ್ರೀನ್ ಸಿಗ್ನಲ್, ಗುಜರಿ ಸೇರಲಿವೆ ಡಕೋಟಾ ಬಸ್​ಗಳು
ಬಿಎಂಟಿಸಿ ಬಸ್
Edited By:

Updated on: Sep 06, 2025 | 9:39 AM

ಬೆಂಗಳೂರು, ಸೆಪ್ಟೆಂಬರ್ 6: ಬೆಂಗಳೂರಿನಲ್ಲಿ (Bengaluru) ದಿನದಿಂದ ದಿನಕ್ಕೆ ಬಿಎಂಟಿಸಿ ಬಸ್​​ಗಳಿಂದ (BMTC Bus) ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಇದಕ್ಕೆ ಪ್ರಮುಖ ಕಾರಣ ಬಿಎಂಟಿಸಿಯ ಹಳೆಯ ಡಕೋಟಾ ಬಸ್ಸುಗಳು ಎಂಬ ಆರೋಪವಿದೆ. ಕಳೆದ ಒಂದು ವರ್ಷದಲ್ಲಿ ಬಿಎಂಟಿಸಿ ಬಸ್ ಅಪಘಾತಗಳಲ್ಲಿ 44 ಜನ ಪ್ರಾಣ ಕಳೆದುಕೊಂಡಿದ್ದರೆ, ಕಳೆದ ಒಂದು ತಿಂಗಳಲ್ಲಿ 7 ಜನ ಪ್ರಾಣ ಕಳೆದುಕೊಂಡಿದ್ದಾರೆ. ಬಿಎಂಟಿಸಿ ಸಾಕಷ್ಟು ಬಸ್ಸುಗಳಲ್ಲಿ ಹಾರ್ನ್ ಇಲ್ಲ, ಇಂಜಿನ್ ಸಮಸ್ಯೆ, ಗೇರ್ ಬಾಕ್ಸ್ ಬ್ರೇಕ್, ಕ್ಲಚ್ ಪ್ಯಾಡ್, ಹೀಗೆ ನಾನಾ ರೀತಿಯ ಸಮಸ್ಯೆ ಗಳಿದ್ದು, ಹೊಸ ಬಸ್​ಗಳಿಂದ ಅಪಘಾತಗಳ ಸಂಖ್ಯೆ ಕಡಿಮೆ ಆಗಲಿದೆ ಎಂದು ಪ್ರಯಾಣಿಕರು ಅಭಿಪ್ರಾಯಪಟ್ಟಿದ್ದಾರೆ.

ಏತನ್ಮಧ್ಯೆ, 4500 ಹೊಸ ಬಸ್​​ಗಳನ್ನು ಬಿಎಂಟಿಸಿಗೆ ನೀಡಲು ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ದು, ಈ ವರ್ಷದ ಕೊನೆ ಅಥವಾ ಮುಂದಿನ ವರ್ಷ ಆರಂಭದಿಂದ ಹಂತ ಹಂತವಾಗಿ ಹೊಸ ಬಸ್​​ಗಳು ಬಿಎಂಟಿಸಿ ಸೇರಲಿವೆ. ಈ 4500 ಹೊಸ ಬಸ್​ಗಳು ಬರುತ್ತಿದ್ದಂತೆಯೇ ಬಿಎಂಟಿಸಿಯ ಹಳೆಯ ಬಸ್​ಗಳು ಗುಜರಿ ಸೇರಲಿವೆ.

ಬಿಎಂಟಿಸಿಗೆ ಬರಲಿರುವ ಹೊಸ ಬಸ್​ಗಳ ವಿವರ

4100 ಸಾಮಾನ್ಯ ಎಲೆಕ್ಟ್ರಿಕ್ ಬಸ್, 400 ಎಸಿ ಎಲೆಕ್ಟ್ರಿಕ್ ಬಸ್ ಬರಲಿದ್ದು ಈಗಾಗಲೇ ಬಿಎಂಟಿಸಿ ನಿಗಮದ 15 ರಿಂದ 20 ಡಿಪೋ ಗಳಲ್ಲಿ ಚಾರ್ಜಿಂಗ್ ಸ್ಟೇಷನ್​ಗಳ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಬಿಎಂಟಿಸಿಯಲ್ಲಿ ಸದ್ಯ 1200 ಎಲೆಕ್ಟ್ರಿಕ್ ಬಸ್​ಗಳಿವೆ. 4500 ಹೊಸ ಬಸ್ಗಳಿಂದ ಬಿಎಂಟಿಸಿಯಲ್ಲಿ ಒಟ್ಟು 5700 ಎಲೆಕ್ಟ್ರಿಕ್​ಗಳಾಗಲಿವೆ. ಗ್ರಾಸ್ ಕಾಂಟ್ರಾಕ್ಟ್ ಅಡಿಯಲ್ಲಿ ಈ ಬಸ್ಸುಗಳು ನಗರದಲ್ಲಿ ಸಂಚಾರ ಮಾಡಲಿದೆ. ಈ ಬಸ್ಸಿಗೆ ಡ್ರೈವರ್ ಬಸ್ ಕಂಪನಿ ಅವರಾದರೆ, ಕಂಡಕ್ಟರ್ ಬಿಎಂಟಿಸಿಯಿಂದ ಇರುತ್ತಾರೆ.

ಇದನ್ನೂ ಓದಿ: ನೀರಿನ ದರ ಪರಿಷ್ಕರಣೆ: ಅಪಾರ್ಟ್​ಮೆಂಟ್, ಪಿಜಿಗಳಿಗೆ ರಿಲೀಫ್ ನೀಡಿದ ಜಲ ಮಂಡಳಿ

ಒಟ್ಟಿನಲ್ಲಿ, ಪದೇಪದೇ ಬಿಎಂಟಿಸಿ ಬಸ್​ಗ ಬ್ರೇಕ್ ಡೌನ್ ಮತ್ತು ಆಕ್ಸಿಡೆಂಟ್ ಗಳಿಂದ ಕಂಗೆಟ್ಟಿದ್ದ ಸಿಲಿಕಾನ್ ಸಿಟಿ ಜನರಿಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದ್ದಂತೂ ಸುಳ್ಳಲ್ಲ. ಆದಷ್ಟು ಬೇಗ ಈ ಬಸ್​​ಗಳು ಬಿಎಂಟಿಸಿ ಸೇರಿದರೆ ಒಂದಷ್ಟು ಅಮಾಯಕರ ಜೀವ ಉಳಿಯಬಹುದು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Kiran Surya

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
Follow Us