AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಚಾಲಕರು, ನಿರ್ವಾಹಕರಿಗೆ ಸಿಹಿ ಸುದ್ದಿ ನೀಡಿದ ಬಿಎಂಟಿಸಿ ಅಧಿಕಾರಿಗಳು

ಬಿಎಂಟಿಸಿ ಬಸ್ ಚಾಲಕರ ಮೇಲಿನ ಹಲ್ಲೆ ಮತ್ತು ಅಪಘಾತಗಳನ್ನು ತಗ್ಗಿಸಲು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಪ್ರತಿ ಮಾರ್ಗದ ಪ್ರಯಾಣ ಸಮಯವನ್ನು ಹೆಚ್ಚಿಸಿದೆ. ಕಡಿಮೆ ಸಮಯದ ಒತ್ತಡದಿಂದ ಉಂಟಾಗುವ ಅಪಾಯವನ್ನು ತಪ್ಪಿಸಲು ಈ ಕ್ರಮ ಕೈಗೊಳ್ಳಲಾಗಿದೆ. 1800 ಮಾರ್ಗಗಳಲ್ಲಿ ಈ ಬದಲಾವಣೆ ಜಾರಿಯಲ್ಲಿದೆ. ಪ್ರಯಾಣಿಕರು ಈ ನಿರ್ಧಾರವನ್ನು ಸ್ವಾಗತಿಸಿದ್ದಾರೆ.

ಬೆಂಗಳೂರು: ಚಾಲಕರು, ನಿರ್ವಾಹಕರಿಗೆ ಸಿಹಿ ಸುದ್ದಿ ನೀಡಿದ ಬಿಎಂಟಿಸಿ ಅಧಿಕಾರಿಗಳು
ಬಿಎಂಟಿಸಿ
Kiran Surya
| Edited By: |

Updated on: Nov 26, 2024 | 8:19 AM

Share

ಬೆಂಗಳೂರು, ನವೆಂಬರ್​ 26: ಇತ್ತೀಚಿಗೆ ಬಿಎಂಟಿಸಿ (BMTC) ಬಸ್​ ಚಾಲಕ ಮತ್ತು ನಿರ್ವಾಹಕರ ಮೇಲೆ ನಿರಂತರವಾಗಿ ಹಲ್ಲೆ ಆಗಿದ್ದವು. ಇದಕ್ಕೆ ಪ್ರಮುಖ ಕಾರಣ ಚಾಲಕರಿಗೆ ನೀಡಿದ್ದ ಟೈಮ್ ಬಾಂಡ್ ಎಂದು ತಿಳಿದು ಬಂದಿದೆ. ಇದೀಗ, ಬಿಎಂಟಿಸಿ ಅಧಿಕಾರಿಗಳು ಪ್ರತಿ ಮಾರ್ಗದಲ್ಲೂ ಬಸ್​ ಸಂಚಾರದ ಸಮಯ ಹೆಚ್ಚಳ ಮಾಡುವ ಮೂಲಕ ಚಾಲಕರ ಟೆನ್ಷನ್​ ಕಡಿಮೆ ಮಾಡಿದ್ದಾರೆ.

ಬಿಎಂಟಿಸಿ ಬಸ್​ ಸಂಚಾರ ಸಮಯವನ್ನು ಅಧಿಕಾರಿಗಳು ಏರಿಕೆ ಮಾಡಿದ್ದಾರೆ. ಇದರಿಂದ, ಕಡಿಮೆ ಸಮಯದಲ್ಲಿ ವೇಗವಾಗಿ ತೆರಳಲಿ ನಿಗದಿತ ನಿಲ್ದಾಣ ತಲುಪಬೇಕೆಂಬ ಟೆನ್ಷನ್​ನಿಂದ ಚಾಲಕರು ನಿರಾಳರಾಗಿದ್ದಾರೆ. ಬಿಎಂಟಿಸಿ ಬಸ್​ಗಳು ಸಂಚಾರ ಮಾಡುವ 1800 ಮಾರ್ಗಳಲ್ಲೂ ಟೈಮ್ ಲಿಮಿಟ್ ಕಡಿಮೆ ಮಾಡಲಾಗಿದೆ.

ಈ ಹಿಂದೆ ಮೆಜೆಸ್ಟಿಕ್ ನಿಲ್ದಾಣದಿಂದ ಉತ್ತರಹಳ್ಳಿಗೆ ಸಂಚಾರ ಮಾಡಲು 55 ನಿಮಿಷಗಳ ಕಾಲಾವಕಾಶ ನೀಡಲಾಗಿತ್ತು. ಇನ್ಮುಂದೆ ಈ ಸಮಯವನ್ನು 01 ಗಂಟೆ 15 ನಿಮಿಷ ಏರಿಸಲಾಗಿದೆ. ಈ ಮಾರ್ಗದಲ್ಲಿ 20 ನಿಮಿಷಗಳ ಕಾಲ ಹೆಚ್ಚಿನ ಸಮಯ ನೀಡಲಾಗಿದೆ ಎಂದು ಬಿಎಂಟಿಸಿ ಚೀಫ್ ಟ್ರಾಫಿಕ್ ಮ್ಯಾನೇಜರ್ ಪ್ರಭಾಕರ್ ರೆಡ್ಡಿ ತಿಳಿಸಿದರು.

ಇದನ್ನೂ ಓದಿ: ಕೆಎಸ್​​ಆರ್​ಟಿಸಿ, ಬಿಎಂಟಿಸಿ ನೌಕರರ ಮುಷ್ಕರಕ್ಕೆ ದಿನಾಂಕ ನಿಗದಿ: ಬಸ್ ಸಂಚಾರ ಬಂದ್ ಯಾವಾಗಿನಿಂದ ನೋಡಿ

ಪ್ರತಿಯೊಂದು ಮರ್ಗಾದಲ್ಲೂ 15 ರಿಂದ 20 ನಿಮಿಷಗಳ ಕಾಲ ಹೆಚ್ಚಿನ ಸಮಯ ನೀಡಲಾಗುತ್ತದೆ. ಇದರಿಂದ ನಗರದಲ್ಲಿ ಆಗುತ್ತಿರುವ ಚಾಲಕ, ನಿರ್ವಾಹಕರ ಮೇಲಿನ ಹಲ್ಲೆ ಮತ್ತು ಅಪಘಾತಗಳು ಕಡಿಮೆ ಆಗಲಿವೆ. ಈ ಹಿಂದೆ ನಡೆದಿರುವ ಸಾಕಷ್ಟು ಹಲ್ಲೆ ಮತ್ತು ಅಪಘಾತಗಳಲ್ಲಿ ಬಿಎಂಟಿಸಿಯ ಚಾಲಕರು ಟೈಮ್ ಕವರ್ ಮಾಡಲು, ವೇಗವಾಗಿ ಬಸ್​ ಚಲಾಯಿಸುತ್ತಿದ್ದರು. ಇದರಿಂದ ಅಪಘಾತಗಳು ಸಂಭವಿಸುತ್ತಿದ್ದವು.

ಬಿಎಂಟಿಸಿಯ 58 ಸಾವಿರ ಟ್ರಿಪ್​ಗಳಲ್ಲೂ ಟೈಮ್ ಲಿಮಿಟ್ ಹೆಚ್ಚು ಮಾಡಲು ಬಿಎಂಟಿಸಿ ಮುಂದಾಗಿದೆ. ಈ ವಿಚಾರ ತಿಳಿದು ಪ್ರಯಾಣಿಕರು ಸಂತಸ ವ್ಯಕ್ತಪಡಿಸಿದ್ದಾರೆ.

ಒಟ್ಟಿನಲ್ಲಿ ಬಿಎಂಟಿಸಿಯ ಚಾಲಕ ಮತ್ತು ನಿರ್ವಾಹಕರಿಗೆ ಇಂತಿಷ್ಟು ಸಮಯದಲ್ಲಿ ಈ ರೂಟ್ ಕ್ಲಿಯರ್ ಮಾಡಬೇಕು ಅನ್ನೋ ಅಧಿಕಾರಿಗಳ ರೂಲ್ಸ್​ನಿಂದ ಬಿಎಂಟಿಸಿ ಬಸ್ಸುಗಳು ವೇಗವಾಗಿ ಸಂಚಾರ ಮಾಡುತ್ತಿದ್ದವು. ಆದರೆ ಈ ಟೈಮ್ ಲಿಮಿಟ್ ಹೆಚ್ಚಳದಿಂದ ಹಲ್ಲೆ ಮತ್ತು ಅಪಘಾತ ಕಡಿಮೆ ಆಗುತ್ತಾ ಎಂದು ಕಾದು ನೋಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್