Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಚಾಲಕರು, ನಿರ್ವಾಹಕರಿಗೆ ಸಿಹಿ ಸುದ್ದಿ ನೀಡಿದ ಬಿಎಂಟಿಸಿ ಅಧಿಕಾರಿಗಳು

ಬಿಎಂಟಿಸಿ ಬಸ್ ಚಾಲಕರ ಮೇಲಿನ ಹಲ್ಲೆ ಮತ್ತು ಅಪಘಾತಗಳನ್ನು ತಗ್ಗಿಸಲು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಪ್ರತಿ ಮಾರ್ಗದ ಪ್ರಯಾಣ ಸಮಯವನ್ನು ಹೆಚ್ಚಿಸಿದೆ. ಕಡಿಮೆ ಸಮಯದ ಒತ್ತಡದಿಂದ ಉಂಟಾಗುವ ಅಪಾಯವನ್ನು ತಪ್ಪಿಸಲು ಈ ಕ್ರಮ ಕೈಗೊಳ್ಳಲಾಗಿದೆ. 1800 ಮಾರ್ಗಗಳಲ್ಲಿ ಈ ಬದಲಾವಣೆ ಜಾರಿಯಲ್ಲಿದೆ. ಪ್ರಯಾಣಿಕರು ಈ ನಿರ್ಧಾರವನ್ನು ಸ್ವಾಗತಿಸಿದ್ದಾರೆ.

ಬೆಂಗಳೂರು: ಚಾಲಕರು, ನಿರ್ವಾಹಕರಿಗೆ ಸಿಹಿ ಸುದ್ದಿ ನೀಡಿದ ಬಿಎಂಟಿಸಿ ಅಧಿಕಾರಿಗಳು
ಬಿಎಂಟಿಸಿ
Follow us
Kiran Surya
| Updated By: ವಿವೇಕ ಬಿರಾದಾರ

Updated on: Nov 26, 2024 | 8:19 AM

ಬೆಂಗಳೂರು, ನವೆಂಬರ್​ 26: ಇತ್ತೀಚಿಗೆ ಬಿಎಂಟಿಸಿ (BMTC) ಬಸ್​ ಚಾಲಕ ಮತ್ತು ನಿರ್ವಾಹಕರ ಮೇಲೆ ನಿರಂತರವಾಗಿ ಹಲ್ಲೆ ಆಗಿದ್ದವು. ಇದಕ್ಕೆ ಪ್ರಮುಖ ಕಾರಣ ಚಾಲಕರಿಗೆ ನೀಡಿದ್ದ ಟೈಮ್ ಬಾಂಡ್ ಎಂದು ತಿಳಿದು ಬಂದಿದೆ. ಇದೀಗ, ಬಿಎಂಟಿಸಿ ಅಧಿಕಾರಿಗಳು ಪ್ರತಿ ಮಾರ್ಗದಲ್ಲೂ ಬಸ್​ ಸಂಚಾರದ ಸಮಯ ಹೆಚ್ಚಳ ಮಾಡುವ ಮೂಲಕ ಚಾಲಕರ ಟೆನ್ಷನ್​ ಕಡಿಮೆ ಮಾಡಿದ್ದಾರೆ.

ಬಿಎಂಟಿಸಿ ಬಸ್​ ಸಂಚಾರ ಸಮಯವನ್ನು ಅಧಿಕಾರಿಗಳು ಏರಿಕೆ ಮಾಡಿದ್ದಾರೆ. ಇದರಿಂದ, ಕಡಿಮೆ ಸಮಯದಲ್ಲಿ ವೇಗವಾಗಿ ತೆರಳಲಿ ನಿಗದಿತ ನಿಲ್ದಾಣ ತಲುಪಬೇಕೆಂಬ ಟೆನ್ಷನ್​ನಿಂದ ಚಾಲಕರು ನಿರಾಳರಾಗಿದ್ದಾರೆ. ಬಿಎಂಟಿಸಿ ಬಸ್​ಗಳು ಸಂಚಾರ ಮಾಡುವ 1800 ಮಾರ್ಗಳಲ್ಲೂ ಟೈಮ್ ಲಿಮಿಟ್ ಕಡಿಮೆ ಮಾಡಲಾಗಿದೆ.

ಈ ಹಿಂದೆ ಮೆಜೆಸ್ಟಿಕ್ ನಿಲ್ದಾಣದಿಂದ ಉತ್ತರಹಳ್ಳಿಗೆ ಸಂಚಾರ ಮಾಡಲು 55 ನಿಮಿಷಗಳ ಕಾಲಾವಕಾಶ ನೀಡಲಾಗಿತ್ತು. ಇನ್ಮುಂದೆ ಈ ಸಮಯವನ್ನು 01 ಗಂಟೆ 15 ನಿಮಿಷ ಏರಿಸಲಾಗಿದೆ. ಈ ಮಾರ್ಗದಲ್ಲಿ 20 ನಿಮಿಷಗಳ ಕಾಲ ಹೆಚ್ಚಿನ ಸಮಯ ನೀಡಲಾಗಿದೆ ಎಂದು ಬಿಎಂಟಿಸಿ ಚೀಫ್ ಟ್ರಾಫಿಕ್ ಮ್ಯಾನೇಜರ್ ಪ್ರಭಾಕರ್ ರೆಡ್ಡಿ ತಿಳಿಸಿದರು.

ಇದನ್ನೂ ಓದಿ: ಕೆಎಸ್​​ಆರ್​ಟಿಸಿ, ಬಿಎಂಟಿಸಿ ನೌಕರರ ಮುಷ್ಕರಕ್ಕೆ ದಿನಾಂಕ ನಿಗದಿ: ಬಸ್ ಸಂಚಾರ ಬಂದ್ ಯಾವಾಗಿನಿಂದ ನೋಡಿ

ಪ್ರತಿಯೊಂದು ಮರ್ಗಾದಲ್ಲೂ 15 ರಿಂದ 20 ನಿಮಿಷಗಳ ಕಾಲ ಹೆಚ್ಚಿನ ಸಮಯ ನೀಡಲಾಗುತ್ತದೆ. ಇದರಿಂದ ನಗರದಲ್ಲಿ ಆಗುತ್ತಿರುವ ಚಾಲಕ, ನಿರ್ವಾಹಕರ ಮೇಲಿನ ಹಲ್ಲೆ ಮತ್ತು ಅಪಘಾತಗಳು ಕಡಿಮೆ ಆಗಲಿವೆ. ಈ ಹಿಂದೆ ನಡೆದಿರುವ ಸಾಕಷ್ಟು ಹಲ್ಲೆ ಮತ್ತು ಅಪಘಾತಗಳಲ್ಲಿ ಬಿಎಂಟಿಸಿಯ ಚಾಲಕರು ಟೈಮ್ ಕವರ್ ಮಾಡಲು, ವೇಗವಾಗಿ ಬಸ್​ ಚಲಾಯಿಸುತ್ತಿದ್ದರು. ಇದರಿಂದ ಅಪಘಾತಗಳು ಸಂಭವಿಸುತ್ತಿದ್ದವು.

ಬಿಎಂಟಿಸಿಯ 58 ಸಾವಿರ ಟ್ರಿಪ್​ಗಳಲ್ಲೂ ಟೈಮ್ ಲಿಮಿಟ್ ಹೆಚ್ಚು ಮಾಡಲು ಬಿಎಂಟಿಸಿ ಮುಂದಾಗಿದೆ. ಈ ವಿಚಾರ ತಿಳಿದು ಪ್ರಯಾಣಿಕರು ಸಂತಸ ವ್ಯಕ್ತಪಡಿಸಿದ್ದಾರೆ.

ಒಟ್ಟಿನಲ್ಲಿ ಬಿಎಂಟಿಸಿಯ ಚಾಲಕ ಮತ್ತು ನಿರ್ವಾಹಕರಿಗೆ ಇಂತಿಷ್ಟು ಸಮಯದಲ್ಲಿ ಈ ರೂಟ್ ಕ್ಲಿಯರ್ ಮಾಡಬೇಕು ಅನ್ನೋ ಅಧಿಕಾರಿಗಳ ರೂಲ್ಸ್​ನಿಂದ ಬಿಎಂಟಿಸಿ ಬಸ್ಸುಗಳು ವೇಗವಾಗಿ ಸಂಚಾರ ಮಾಡುತ್ತಿದ್ದವು. ಆದರೆ ಈ ಟೈಮ್ ಲಿಮಿಟ್ ಹೆಚ್ಚಳದಿಂದ ಹಲ್ಲೆ ಮತ್ತು ಅಪಘಾತ ಕಡಿಮೆ ಆಗುತ್ತಾ ಎಂದು ಕಾದು ನೋಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Devotional: ಮಹಿಳೆಯರಿಗೆ ಕೈ ಕೆರೆತವಾದ್ರೆ ಏನೆಲ್ಲಾ ಆಗುತ್ತೆ ಗೊತ್ತಾ?
Devotional: ಮಹಿಳೆಯರಿಗೆ ಕೈ ಕೆರೆತವಾದ್ರೆ ಏನೆಲ್ಲಾ ಆಗುತ್ತೆ ಗೊತ್ತಾ?
Daily Horoscope: ಹಣಕಾಸಿನ ವಿಷಯದಲ್ಲಿ ತಾಳ್ಮೆವಹಿಸುವುದು ಒಳ್ಳೆಯದು
Daily Horoscope: ಹಣಕಾಸಿನ ವಿಷಯದಲ್ಲಿ ತಾಳ್ಮೆವಹಿಸುವುದು ಒಳ್ಳೆಯದು
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್