AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BMTC ಬಸ್​​ ನಿಲ್ದಾಣದಲ್ಲಿ ಡಿಜಿಟಲ್​ ಬೋರ್ಡ್​​ ಅಳವಡಿಕೆ; ಇಲ್ಲಿದೆ ಮಾಹಿತಿ

ಬಸ್ ತಂಗುದಾಣಗಳಲ್ಲಿ ಡಿಜಿಟಲ್ ಬೋರ್ಡ್‌ಗಳನ್ನು ಅಳವಡಿಸುವ ಯೋಜನೆಯು ದೀರ್ಘಕಾಲದಿಂದ ಬಾಕಿ ಉಳಿದಿದೆ. ನಿರ್ಭಯಾ ಯೋಜನೆ ಅಡಿಯಲ್ಲಿ ಬಸ್ ನಿಲ್ದಾಣಗಳಲ್ಲಿ ಡಿಜಿಟಲ್ ಬೋರ್ಡ್‌ಗಳನ್ನು ಅಳವಡಿಸಲಾಗುತ್ತಿದೆ ಎಂದು ಮುಖ್ಯ ಟ್ರಾಫಿಕ್ ಮ್ಯಾನೇಜರ್ ಪ್ರಭಾಕರ ರೆಡ್ಡಿ ಹೇಳಿದರು.

BMTC ಬಸ್​​ ನಿಲ್ದಾಣದಲ್ಲಿ ಡಿಜಿಟಲ್​ ಬೋರ್ಡ್​​ ಅಳವಡಿಕೆ; ಇಲ್ಲಿದೆ ಮಾಹಿತಿ
ಸಾಂದರ್ಭಿಕ ಚಿತ್ರ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: Nov 13, 2023 | 11:42 AM

Share

ಬೆಂಗಳೂರು ನ.13: ನಗರದಾದ್ಯಂತ ಇರುವ ಐನೂರಕ್ಕೂ ಹೆಚ್ಚು ಬಿಎಂಟಿಸಿ (BMTC) ಬಸ್ ತಂಗುದಾಣಗಳಲ್ಲಿ ಸ್ವಯಂಚಾಲಿತ ಡಿಜಿಟಲ್ ಬೋರ್ಡ್‌ಗಳನ್ನು (Digital Boards) ಅಳವಡಿಸಲಾಗಿದೆ. ಆಯ್ದ ಬಸ್ ತಂಗುದಾಣಗಳಲ್ಲಿ ಮಾತ್ರ ಈ ಡಿಜಿಟಲ್ ಬೋರ್ಡ್‌ಗಳನ್ನು ಅಳವಡಿಸಲಾಗಿದ್ದು, ಇನ್ನೂ ಕೆಲವು ತಂಗುದಾಣಗಳಲ್ಲಿ ಅಳವಡಿಸುವ ಕಾರ್ಯ ನಡೆಯುತ್ತಿದೆ.

ಬಸ್ ತಂಗುದಾಣಗಳಲ್ಲಿ ಡಿಜಿಟಲ್ ಬೋರ್ಡ್‌ಗಳನ್ನು ಅಳವಡಿಸುವ ಯೋಜನೆಯು ದೀರ್ಘಕಾಲದಿಂದ ಬಾಕಿ ಉಳಿದಿದೆ. ನಿರ್ಭಯಾ ಯೋಜನೆ ಅಡಿಯಲ್ಲಿ ಬಸ್ ನಿಲ್ದಾಣಗಳಲ್ಲಿ ಡಿಜಿಟಲ್ ಬೋರ್ಡ್‌ಗಳನ್ನು ಅಳವಡಿಸಲಾಗುತ್ತಿದೆ. ಈ ಡಿಜಿಟಲ್​ ಬೋರ್ಡ್​​ಗಳು ಬಿಎಂಟಿಸಿ ಬಸ್ ಮಾರ್ಗಗಳು, ಬಸ್ ನೋಂದಣಿ ಸಂಖ್ಯೆಗಳು, ಬಸ್‌ನ ಗಮ್ಯಸ್ಥಾನ ಮತ್ತು ಇಂಗ್ಲಿಷ್ ಮತ್ತು ಕನ್ನಡ ಭಾಷೆಯಲ್ಲಿ ಆಗಮನದ ಅಂದಾಜು ಸಮಯವನ್ನು ತಿಳಿಸುತ್ತದೆ ಎಂದು ಮುಖ್ಯ ಟ್ರಾಫಿಕ್ ಮ್ಯಾನೇಜರ್ ಪ್ರಭಾಕರ ರೆಡ್ಡಿ ಹೇಳಿದರು.

ಇದನ್ನೂ ಓದಿ: ಡಕೋಟಾ ಎಕ್ಸ್​ಪ್ರೆಸ್​: ಈ ವರ್ಷ ಮಾರ್ಗ ಮಧ್ಯೆದಲ್ಲೇ 1478 ಬಾರಿ ಕೆಟ್ಟು ನಿಂತ ಬಿಎಂಟಿಸಿ ಬಸ್​ಗಳು

ಡಿಜಿಟಲ್ ಬೋರ್ಡ್‌ಗಳು ಬಸ್‌ಗಳಲ್ಲಿ ನೈಜ-ಸಮಯದ ಡೇಟಾವನ್ನು ಒದಗಿಸುತ್ತವೆ. ಸುಮಾರು 40 ತಂಗುದಾಣಗಳಲ್ಲಿ ಡಿಜಿಟಲ್ ಬೋರ್ಡ್‌ಗಳನ್ನು ಅಳವಡಿಸುವ ಕೆಲಸ ನಡೆಯುತ್ತಿದೆ. ವಿದ್ಯುತ್ ಕಾಮಗಾರಿ ನಡೆಯುತ್ತಿದ್ದು, ಈ ವಾರದಲ್ಲಿ ಪೂರ್ಣಗೊಳ್ಳಲಿದೆ. ಡಿಜಿಟಲ್ ಬೋರ್ಡ್‌ಗಳನ್ನು ಅಳವಡಿಸಲು ಅಗತ್ಯವೆಂದರೆ ವಿದ್ಯುತ್ ಸರಬರಾಜು. ಆದರೆ ಕೆಲವು ತಂಗುದಾಣದಲ್ಲಿ ವಿದ್ಯುತ್​ ಸರಬರಾಜು ಇಲ್ಲದ ಕಾರಣ ಅಳವಡಿಸಲು ಸಾಧ್ಯವಾಗುತ್ತಿಲ್ಲ ಎಂದರು.

ಸ್ಮಾರ್ಟ್‌ಫೋನ್ ಹೊಂದಿರುವವರು ಮತ್ತು ನಮ್ಮ ಬಿಎಂಟಿಸಿ ಮೊಬೈಲ್ ಅಪ್ಲಿಕೇಶನ್ ಡೌನ್‌ಲೋಡ್ ಮಾಡುವವರು ಈ ಎಲ್ಲಾ ವಿವರಗಳನ್ನು ಫೋನ್‌ನಲ್ಲಿ ಪಡೆಯಬಹುದಾದರೂ, ಹೆಚ್ಚಿನ ಪ್ರಯಾಣಿಕರು ಭೌತಿಕ ಬೋರ್ಡ್‌ಗಳನ್ನೇ ನೋಡುತ್ತಾರೆ. ಇದರಿಂದಾಗಿ ಪ್ರಯಾಣಿಕರು ತಮ್ಮ ಪ್ರಯಾಣವನ್ನು ಯೋಜಿಸಬಹುದು ಎಂದು ಬಿಎಂಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು