AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BMTC ಬಸ್​​ ನಿಲ್ದಾಣದಲ್ಲಿ ಡಿಜಿಟಲ್​ ಬೋರ್ಡ್​​ ಅಳವಡಿಕೆ; ಇಲ್ಲಿದೆ ಮಾಹಿತಿ

ಬಸ್ ತಂಗುದಾಣಗಳಲ್ಲಿ ಡಿಜಿಟಲ್ ಬೋರ್ಡ್‌ಗಳನ್ನು ಅಳವಡಿಸುವ ಯೋಜನೆಯು ದೀರ್ಘಕಾಲದಿಂದ ಬಾಕಿ ಉಳಿದಿದೆ. ನಿರ್ಭಯಾ ಯೋಜನೆ ಅಡಿಯಲ್ಲಿ ಬಸ್ ನಿಲ್ದಾಣಗಳಲ್ಲಿ ಡಿಜಿಟಲ್ ಬೋರ್ಡ್‌ಗಳನ್ನು ಅಳವಡಿಸಲಾಗುತ್ತಿದೆ ಎಂದು ಮುಖ್ಯ ಟ್ರಾಫಿಕ್ ಮ್ಯಾನೇಜರ್ ಪ್ರಭಾಕರ ರೆಡ್ಡಿ ಹೇಳಿದರು.

BMTC ಬಸ್​​ ನಿಲ್ದಾಣದಲ್ಲಿ ಡಿಜಿಟಲ್​ ಬೋರ್ಡ್​​ ಅಳವಡಿಕೆ; ಇಲ್ಲಿದೆ ಮಾಹಿತಿ
ಸಾಂದರ್ಭಿಕ ಚಿತ್ರ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: Nov 13, 2023 | 11:42 AM

Share

ಬೆಂಗಳೂರು ನ.13: ನಗರದಾದ್ಯಂತ ಇರುವ ಐನೂರಕ್ಕೂ ಹೆಚ್ಚು ಬಿಎಂಟಿಸಿ (BMTC) ಬಸ್ ತಂಗುದಾಣಗಳಲ್ಲಿ ಸ್ವಯಂಚಾಲಿತ ಡಿಜಿಟಲ್ ಬೋರ್ಡ್‌ಗಳನ್ನು (Digital Boards) ಅಳವಡಿಸಲಾಗಿದೆ. ಆಯ್ದ ಬಸ್ ತಂಗುದಾಣಗಳಲ್ಲಿ ಮಾತ್ರ ಈ ಡಿಜಿಟಲ್ ಬೋರ್ಡ್‌ಗಳನ್ನು ಅಳವಡಿಸಲಾಗಿದ್ದು, ಇನ್ನೂ ಕೆಲವು ತಂಗುದಾಣಗಳಲ್ಲಿ ಅಳವಡಿಸುವ ಕಾರ್ಯ ನಡೆಯುತ್ತಿದೆ.

ಬಸ್ ತಂಗುದಾಣಗಳಲ್ಲಿ ಡಿಜಿಟಲ್ ಬೋರ್ಡ್‌ಗಳನ್ನು ಅಳವಡಿಸುವ ಯೋಜನೆಯು ದೀರ್ಘಕಾಲದಿಂದ ಬಾಕಿ ಉಳಿದಿದೆ. ನಿರ್ಭಯಾ ಯೋಜನೆ ಅಡಿಯಲ್ಲಿ ಬಸ್ ನಿಲ್ದಾಣಗಳಲ್ಲಿ ಡಿಜಿಟಲ್ ಬೋರ್ಡ್‌ಗಳನ್ನು ಅಳವಡಿಸಲಾಗುತ್ತಿದೆ. ಈ ಡಿಜಿಟಲ್​ ಬೋರ್ಡ್​​ಗಳು ಬಿಎಂಟಿಸಿ ಬಸ್ ಮಾರ್ಗಗಳು, ಬಸ್ ನೋಂದಣಿ ಸಂಖ್ಯೆಗಳು, ಬಸ್‌ನ ಗಮ್ಯಸ್ಥಾನ ಮತ್ತು ಇಂಗ್ಲಿಷ್ ಮತ್ತು ಕನ್ನಡ ಭಾಷೆಯಲ್ಲಿ ಆಗಮನದ ಅಂದಾಜು ಸಮಯವನ್ನು ತಿಳಿಸುತ್ತದೆ ಎಂದು ಮುಖ್ಯ ಟ್ರಾಫಿಕ್ ಮ್ಯಾನೇಜರ್ ಪ್ರಭಾಕರ ರೆಡ್ಡಿ ಹೇಳಿದರು.

ಇದನ್ನೂ ಓದಿ: ಡಕೋಟಾ ಎಕ್ಸ್​ಪ್ರೆಸ್​: ಈ ವರ್ಷ ಮಾರ್ಗ ಮಧ್ಯೆದಲ್ಲೇ 1478 ಬಾರಿ ಕೆಟ್ಟು ನಿಂತ ಬಿಎಂಟಿಸಿ ಬಸ್​ಗಳು

ಡಿಜಿಟಲ್ ಬೋರ್ಡ್‌ಗಳು ಬಸ್‌ಗಳಲ್ಲಿ ನೈಜ-ಸಮಯದ ಡೇಟಾವನ್ನು ಒದಗಿಸುತ್ತವೆ. ಸುಮಾರು 40 ತಂಗುದಾಣಗಳಲ್ಲಿ ಡಿಜಿಟಲ್ ಬೋರ್ಡ್‌ಗಳನ್ನು ಅಳವಡಿಸುವ ಕೆಲಸ ನಡೆಯುತ್ತಿದೆ. ವಿದ್ಯುತ್ ಕಾಮಗಾರಿ ನಡೆಯುತ್ತಿದ್ದು, ಈ ವಾರದಲ್ಲಿ ಪೂರ್ಣಗೊಳ್ಳಲಿದೆ. ಡಿಜಿಟಲ್ ಬೋರ್ಡ್‌ಗಳನ್ನು ಅಳವಡಿಸಲು ಅಗತ್ಯವೆಂದರೆ ವಿದ್ಯುತ್ ಸರಬರಾಜು. ಆದರೆ ಕೆಲವು ತಂಗುದಾಣದಲ್ಲಿ ವಿದ್ಯುತ್​ ಸರಬರಾಜು ಇಲ್ಲದ ಕಾರಣ ಅಳವಡಿಸಲು ಸಾಧ್ಯವಾಗುತ್ತಿಲ್ಲ ಎಂದರು.

ಸ್ಮಾರ್ಟ್‌ಫೋನ್ ಹೊಂದಿರುವವರು ಮತ್ತು ನಮ್ಮ ಬಿಎಂಟಿಸಿ ಮೊಬೈಲ್ ಅಪ್ಲಿಕೇಶನ್ ಡೌನ್‌ಲೋಡ್ ಮಾಡುವವರು ಈ ಎಲ್ಲಾ ವಿವರಗಳನ್ನು ಫೋನ್‌ನಲ್ಲಿ ಪಡೆಯಬಹುದಾದರೂ, ಹೆಚ್ಚಿನ ಪ್ರಯಾಣಿಕರು ಭೌತಿಕ ಬೋರ್ಡ್‌ಗಳನ್ನೇ ನೋಡುತ್ತಾರೆ. ಇದರಿಂದಾಗಿ ಪ್ರಯಾಣಿಕರು ತಮ್ಮ ಪ್ರಯಾಣವನ್ನು ಯೋಜಿಸಬಹುದು ಎಂದು ಬಿಎಂಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ