AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ಮುಂದೆ ಈ ಎರಡು ಹೊಸ ಮಾರ್ಗಗಳಲ್ಲೂ ಸಂಚರಿಸಲಿವೆ BMTC ಬಸ್​​: ಇಲ್ಲಿದೆ ಮಾಹಿತಿ

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಪ್ರಯಾಣಿಕರ ಒತ್ತಾಯದ ಮೇರೆಗೆ ಎರಡು ಹೊಸ ಬಸ್ ಮಾರ್ಗಗಳಲ್ಲಿ ಬಸ್​ ಓಡಿಸಲು ಮುಂದಾಗಿದೆ.

ಇನ್ಮುಂದೆ ಈ ಎರಡು ಹೊಸ ಮಾರ್ಗಗಳಲ್ಲೂ ಸಂಚರಿಸಲಿವೆ BMTC ಬಸ್​​: ಇಲ್ಲಿದೆ ಮಾಹಿತಿ
ಬಿಎಂಟಿಸಿ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: Jul 18, 2023 | 3:24 PM

Share

ಬೆಂಗಳೂರು: ಮಹಿಳೆಯರಿಗೆ ಉಚಿತ ಪ್ರಯಾಣ ಒದಗಿಸುವ ‘ಶಕ್ತಿ’ ಯೋಜನೆ (Shakti Yojana) ಜಾರಿಯಾದಾಗಿನಿಂದ ಸರ್ಕಾರಿ ಬಸ್‌ಗಳಲ್ಲಿ (Government Bus) ಪ್ರಯಾಣಿಕರ ಸಂಖ್ಯೆ ಹೆಚ್ಚಿದೆ. ಈ ಹಿನ್ನೆಲೆ ಹೆಚ್ಚಿನ ಬಸ್‌ಗಳನ್ನು ರಸ್ತೆಗೆ ಇಳಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ಹೀಗಾಗಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು (BMTC) ಪ್ರಯಾಣಿಕರ ಒತ್ತಾಯದ ಮೇರೆಗೆ ಎರಡು ಹೊಸ ಬಸ್ ಮಾರ್ಗಗಳಲ್ಲಿ ಬಸ್​ ಓಡಿಸಲು ಮುಂದಾಗಿದೆ. ಹೌದು ಮೊದಲ ಮಾರ್ಗವು ಶಿವಾಜಿನಗರದಿಂದ ಯಲಹಂಕ ಸ್ಯಾಟಲೈಟ್ ಟೌನ್‌ಗೆ ಮತ್ತು ಎರಡನೇ ಮಾರ್ಗವು ಶಿವಾಜಿನಗರದಿಂದ ಬ್ಯಾಟರಾಯನಪುರಕ್ಕೆ ಸಂಪರ್ಕ ಕಲ್ಪಿಸಲಿದೆ. ಶಿವಾಜಿನಗರದಿಂದ ಈ ಎರಡು ಮಾರ್ಗಗಳಲ್ಲಿ ನಾನ್ ಎಸಿ ಬಸ್ಸುಗಳು ಮಾತ್ರ ಸಂಚರಿಸುತ್ತವೆ.

ಬಿಎಂಟಿಸಿ ಬಸ್ ಸಂಖ್ಯೆ 290-EB ಶಿವಾಜಿನಗರ ಬಸ್ ನಿಲ್ದಾಣದಿಂದ ಹೊರಟು ಯಲಹಂಕ ಸ್ಯಾಟಲೈಟ್ ಟೌನ್ ತಲುಪಲಿದೆ. ಟ್ಯಾನರಿ ರಸ್ತೆ, ನಾಗವಾರ, ಆರ್‌ಕೆ ಹೆಗಡೆ ನಗರ, ಚೊಕ್ಕನಹಳ್ಳಿ, ಅಗ್ರಹಾರ ಲೇಔಟ್ ಮತ್ತು ಕೋಗಿಲು ಕ್ರಾಸ್‌ನಲ್ಲಿಯೂ ಬಸ್ ನಿಲುಗಡೆಯಾಗಲಿದೆ.

ಬಸ್ ಸಂಖ್ಯೆ 290-EB ಶಿವಾಜಿನಗರದಿಂದ 9:35, 1:05, 5:00 ಗಂಟೆಗೆ ಹೊರಡಲಿದೆ. ಮತ್ತು ಯಲಹಂಕ ಸ್ಯಾಟಲೈಟ್ ಟೌನ್​ನಿಂದ 8:20, 11:35, 3:30ಕ್ಕೆ ಹೊರಡಲಿದೆ.

ಇದನ್ನೂ ಓದಿ: BMTC: ವ್ಹೀಲ್​ಚೇರ್ ಬಳಸುವ ವಿಶೇಷ ಚೇತನರಿಗೂ ಬಿಎಮ್​ಟಿಸಿ ಬಸ್​ಗಳಲ್ಲಿ ಪ್ರಯಾಣಿಸುವ ಅವಕಾಶ?

ಶಿವಾಜಿನಗರ ಬಸ್ ನಿಲ್ದಾಣದಿಂದ ಬ್ಯಾಟರಾಯನಪುರಕ್ಕೆ ಹೋಗುವ ಎರಡನೇ ಮಾರ್ಗದಲ್ಲಿ ಸಾಗುವ ಎರಡು ಬಸ್‌ಗಳಿಗೆ ಬಸ್ ಸಂಖ್ಯೆ 290-S. ಈ ಮಾರ್ಗದಲ್ಲಿ ಸಂಚರಿಸುವ ಬಸ್‌ಗಳು ಟ್ಯಾನರಿ ರಸ್ತೆ, ನಾಗವಾರ, ಥಣಿಸಂದ್ರ, ಮೇಸ್ತ್ರಿ ಪಾಳ್ಯ, ಶ್ರೀರಾಂಪುರ ಮತ್ತು ಜಕ್ಕೂರು ಲೇಔಟ್‌ನಲ್ಲಿಯೂ ನಿಲುಗಡೆಯಾಗಲಿವೆ.

ಈ ಮಾರ್ಗದ ಬಸ್‌ಗಳು ಶಿವಾಜಿನಗರದಿಂದ 5:45, 6:50, 8:05, 9:20, 11:00, 4:05, 5:25, 7:00, 7:55, 9:30 ಗಂಟೆಗೆ ಮತ್ತು ಬ್ಯಾಟರಾಯನಪುರದಿಂದ 5:45, 6:50, 8:05, 9:20, 11:00, 4:10, 5:45, 6:40, 8:15, 9:10 ನಿಮಿಷಕ್ಕೆ ಹೊರಡಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು