AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ಮುಂದೆ ಈ ಎರಡು ಹೊಸ ಮಾರ್ಗಗಳಲ್ಲೂ ಸಂಚರಿಸಲಿವೆ BMTC ಬಸ್​​: ಇಲ್ಲಿದೆ ಮಾಹಿತಿ

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಪ್ರಯಾಣಿಕರ ಒತ್ತಾಯದ ಮೇರೆಗೆ ಎರಡು ಹೊಸ ಬಸ್ ಮಾರ್ಗಗಳಲ್ಲಿ ಬಸ್​ ಓಡಿಸಲು ಮುಂದಾಗಿದೆ.

ಇನ್ಮುಂದೆ ಈ ಎರಡು ಹೊಸ ಮಾರ್ಗಗಳಲ್ಲೂ ಸಂಚರಿಸಲಿವೆ BMTC ಬಸ್​​: ಇಲ್ಲಿದೆ ಮಾಹಿತಿ
ಬಿಎಂಟಿಸಿ
ವಿವೇಕ ಬಿರಾದಾರ
|

Updated on: Jul 18, 2023 | 3:24 PM

Share

ಬೆಂಗಳೂರು: ಮಹಿಳೆಯರಿಗೆ ಉಚಿತ ಪ್ರಯಾಣ ಒದಗಿಸುವ ‘ಶಕ್ತಿ’ ಯೋಜನೆ (Shakti Yojana) ಜಾರಿಯಾದಾಗಿನಿಂದ ಸರ್ಕಾರಿ ಬಸ್‌ಗಳಲ್ಲಿ (Government Bus) ಪ್ರಯಾಣಿಕರ ಸಂಖ್ಯೆ ಹೆಚ್ಚಿದೆ. ಈ ಹಿನ್ನೆಲೆ ಹೆಚ್ಚಿನ ಬಸ್‌ಗಳನ್ನು ರಸ್ತೆಗೆ ಇಳಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ಹೀಗಾಗಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು (BMTC) ಪ್ರಯಾಣಿಕರ ಒತ್ತಾಯದ ಮೇರೆಗೆ ಎರಡು ಹೊಸ ಬಸ್ ಮಾರ್ಗಗಳಲ್ಲಿ ಬಸ್​ ಓಡಿಸಲು ಮುಂದಾಗಿದೆ. ಹೌದು ಮೊದಲ ಮಾರ್ಗವು ಶಿವಾಜಿನಗರದಿಂದ ಯಲಹಂಕ ಸ್ಯಾಟಲೈಟ್ ಟೌನ್‌ಗೆ ಮತ್ತು ಎರಡನೇ ಮಾರ್ಗವು ಶಿವಾಜಿನಗರದಿಂದ ಬ್ಯಾಟರಾಯನಪುರಕ್ಕೆ ಸಂಪರ್ಕ ಕಲ್ಪಿಸಲಿದೆ. ಶಿವಾಜಿನಗರದಿಂದ ಈ ಎರಡು ಮಾರ್ಗಗಳಲ್ಲಿ ನಾನ್ ಎಸಿ ಬಸ್ಸುಗಳು ಮಾತ್ರ ಸಂಚರಿಸುತ್ತವೆ.

ಬಿಎಂಟಿಸಿ ಬಸ್ ಸಂಖ್ಯೆ 290-EB ಶಿವಾಜಿನಗರ ಬಸ್ ನಿಲ್ದಾಣದಿಂದ ಹೊರಟು ಯಲಹಂಕ ಸ್ಯಾಟಲೈಟ್ ಟೌನ್ ತಲುಪಲಿದೆ. ಟ್ಯಾನರಿ ರಸ್ತೆ, ನಾಗವಾರ, ಆರ್‌ಕೆ ಹೆಗಡೆ ನಗರ, ಚೊಕ್ಕನಹಳ್ಳಿ, ಅಗ್ರಹಾರ ಲೇಔಟ್ ಮತ್ತು ಕೋಗಿಲು ಕ್ರಾಸ್‌ನಲ್ಲಿಯೂ ಬಸ್ ನಿಲುಗಡೆಯಾಗಲಿದೆ.

ಬಸ್ ಸಂಖ್ಯೆ 290-EB ಶಿವಾಜಿನಗರದಿಂದ 9:35, 1:05, 5:00 ಗಂಟೆಗೆ ಹೊರಡಲಿದೆ. ಮತ್ತು ಯಲಹಂಕ ಸ್ಯಾಟಲೈಟ್ ಟೌನ್​ನಿಂದ 8:20, 11:35, 3:30ಕ್ಕೆ ಹೊರಡಲಿದೆ.

ಇದನ್ನೂ ಓದಿ: BMTC: ವ್ಹೀಲ್​ಚೇರ್ ಬಳಸುವ ವಿಶೇಷ ಚೇತನರಿಗೂ ಬಿಎಮ್​ಟಿಸಿ ಬಸ್​ಗಳಲ್ಲಿ ಪ್ರಯಾಣಿಸುವ ಅವಕಾಶ?

ಶಿವಾಜಿನಗರ ಬಸ್ ನಿಲ್ದಾಣದಿಂದ ಬ್ಯಾಟರಾಯನಪುರಕ್ಕೆ ಹೋಗುವ ಎರಡನೇ ಮಾರ್ಗದಲ್ಲಿ ಸಾಗುವ ಎರಡು ಬಸ್‌ಗಳಿಗೆ ಬಸ್ ಸಂಖ್ಯೆ 290-S. ಈ ಮಾರ್ಗದಲ್ಲಿ ಸಂಚರಿಸುವ ಬಸ್‌ಗಳು ಟ್ಯಾನರಿ ರಸ್ತೆ, ನಾಗವಾರ, ಥಣಿಸಂದ್ರ, ಮೇಸ್ತ್ರಿ ಪಾಳ್ಯ, ಶ್ರೀರಾಂಪುರ ಮತ್ತು ಜಕ್ಕೂರು ಲೇಔಟ್‌ನಲ್ಲಿಯೂ ನಿಲುಗಡೆಯಾಗಲಿವೆ.

ಈ ಮಾರ್ಗದ ಬಸ್‌ಗಳು ಶಿವಾಜಿನಗರದಿಂದ 5:45, 6:50, 8:05, 9:20, 11:00, 4:05, 5:25, 7:00, 7:55, 9:30 ಗಂಟೆಗೆ ಮತ್ತು ಬ್ಯಾಟರಾಯನಪುರದಿಂದ 5:45, 6:50, 8:05, 9:20, 11:00, 4:10, 5:45, 6:40, 8:15, 9:10 ನಿಮಿಷಕ್ಕೆ ಹೊರಡಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!